AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salaar Movie Release Date: ಪ್ರಶಾಂತ್ ನೀಲ್ ನಿರ್ದೇಶನದ ‘ಸಾಲಾರ್​ ಚಿತ್ರ ಬಿಡುಗಡೆ ದಿನಾಂಕ ಘೋಷಣೆ; ಥ್ರಿಲ್​ ಆಗಿದ್ದಾರಂತೆ ಪ್ರಭಾಸ್​

Salaar Telugu Movie Release Date: ಸಾಲಾರ್​ ಒಂದು ಸಂಪೂರ್ಣ ಆ್ಯಕ್ಷನ್​ ಥ್ರಿಲ್ಲರ್​ ಸಿನಿಮಾ. ಇದರಲ್ಲಿ ಪ್ರಭಾಸ್​ ತುಂಬ ಪವರ್​ಫುಲ್​ ಆಗಿ ಮಿಂಚಲಿದ್ದಾರೆ ಎಂದಿದ್ದಾರೆ ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್​.

Salaar Movie Release Date: ಪ್ರಶಾಂತ್ ನೀಲ್ ನಿರ್ದೇಶನದ ‘ಸಾಲಾರ್​ ಚಿತ್ರ ಬಿಡುಗಡೆ ದಿನಾಂಕ ಘೋಷಣೆ; ಥ್ರಿಲ್​ ಆಗಿದ್ದಾರಂತೆ ಪ್ರಭಾಸ್​
ಸಾಲಾರ್ ಪೋಸ್ಟರ್​ನಲ್ಲಿ ಪ್ರಭಾಸ್​
Lakshmi Hegde
| Edited By: |

Updated on:Mar 01, 2021 | 9:34 AM

Share

ಪ್ರಶಾಂತ್ ನೀಲ್​ ನಿರ್ದೇಶನದ, ನಟ ಪ್ರಭಾಸ್ ಅಭಿನಯದ ಬಹುನಿರೀಕ್ಷಿತ ಆ್ಯಕ್ಷನ್ ಥ್ರಿಲ್ಲರ್​ ‘ಸಾಲಾರ್​’ ಸಿನಿಮಾ ಬಿಡುಗಡೆ ದಿನಾಂಕ ಇಂದು ಘೋಷಣೆಯಾಗಿದೆ. ಹೊಂಬಾಳೆ ಫಿಲ್ಮ್ಸ್ ಬ್ಯಾನರ್​​ನಡಿ ವಿಜಯ ಕಿರಗಂದೂರು​​ ನಿರ್ಮಾಣ ಮಾಡಿರುವ ಈ ತೆಲುಗು ಸಿನಿಮಾ 2022 ರ ಏಪ್ರಿಲ್​ 14ರಂದು ದೇಶಾದ್ಯಂತ ಕನ್ನಡ, ಹಿಂದಿ, ಮಲೆಯಾಳಂ, ತಮಿಳುಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಸಾಲಾರ್​ ಸಿನಿಮಾದ ಒಂದು ಹೊಸ ಪೋಸ್ಟರ್​​ನ್ನು ಇಂದು ಪ್ರಶಾಂತ್​ ನೀಲ್​, ಹೊಂಬಾಳೆ ಫಿಲ್ಮ್ಸ್​, ಪ್ರಭಾಸ್​, ನಟಿ ಶ್ರುತಿ ಹಾಸನ್​ ಶೇರ್​ ಮಾಡಿಕೊಂಡಿದ್ದಾರೆ.

2020ರ ಡಿಸೆಂಬರ್​​ನಲ್ಲಿ ಹೈದರಾಬಾದ್​ನಲ್ಲಿ ಸಾಂಪ್ರಾದಾಯಿಕವಾಗಿ ಪೂಜೆ ಮಾಡುವ ಮೂಲಕ ಸಾಲಾರ್​ ಸಿನಿಮಾ ಸೆಟ್ಟೇರಿತ್ತು. ಯಶಸ್ವಿ ಕೆಜಿಎಫ್​ನ್ನು ನಿರ್ಮಾಣ ಮಾಡಿರುವ ಬ್ಯಾನರ್​​ನಡಿ, ಆ ಸಿನಿಮಾಗಳನ್ನು ನಿರ್ದೇಶನ ಮಾಡಿದ ನಿರ್ದೇಶಕ ಪ್ರಶಾಂತ್​ ನೀಲ್ ಅವರೇ ಸಾಲಾರ್​ನ್ನು ನಿರ್ಮಾಣ ಮಾಡುತ್ತಿರುವುದು ಒಂದು ಕಡೆ ಕುತೂಹಲ ಹುಟ್ಟಿಸಿದ್ದರೆ, ಇನ್ನೊಂದೆಡೆ ಬಾಹುಬಲಿಯಂತಹ ಭರ್ಜರಿ ಹಿಟ್​ ಸಿನಿಮಾ ಕೊಟ್ಟ ಸ್ಟಾರ್ ಪ್ರಭಾಸ್ ನಟಿಸುತ್ತಿರುವುದು ಇನ್ನಷ್ಟು ನಿರೀಕ್ಷೆಗೆ ಕಾರಣವಾಗಿದೆ.

ಏನಂತಾರೆ ಪ್ರಭಾಸ್​, ಪ್ರಶಾಂತ್ ನೀಲ್​? ಸಾಲಾರ್​ ಒಂದು ಸಂಪೂರ್ಣ ಆ್ಯಕ್ಷನ್​ ಥ್ರಿಲ್ಲರ್​ ಸಿನಿಮಾ. ಇದರಲ್ಲಿ ಪ್ರಭಾಸ್​ ತುಂಬ ಪವರ್​ಫುಲ್​ ಆಗಿ ಮಿಂಚಲಿದ್ದಾರೆ ಎಂದಿದ್ದಾರೆ ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್​. ಇನ್ನು ಸಾಲಾರ್ ಬಗ್ಗೆ ಮಾತನಾಡಿದ ಪ್ರಭಾಸ್​, ನಾನು ಚಿತ್ರದ ಶೂಟಿಂಗ್​​ನಲ್ಲಿ ಪಾಲ್ಗೊಳ್ಳಲು ಮತ್ತು ಇದರಲ್ಲಿನ ನನ್ನ ಲುಕ್​ನ್ನು ಅಭಿಮಾನಿಗಳಿಗಾಗಿ ಬಿಡುಗಡೆ ಮಾಡಲು ತುಂಬ ಕಾತರಗೊಂಡಿದ್ದೇನೆ ಎಂದು ತಿಳಿಸಿದ್ದಾರೆ. ಈ ಮಧ್ಯೆ ಬಾಲಿವುಡ್​ ನಟ ಜಾನ್​ ಅಬ್ರಾಹಂ ಜತೆ ಸಾಲಾರ್​ ಟೀಂ ಮಾತುಕತೆ ನಡೆಸುತ್ತಿದ್ದು, ಅವರು ಒಪ್ಪಿಕೊಂಡರೆ ವಿಲನ್​ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

View this post on Instagram

A post shared by Prabhas (@actorprabhas)

Published On - 5:15 pm, Sun, 28 February 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್