AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salaar Movie Release Date: ಪ್ರಶಾಂತ್ ನೀಲ್ ನಿರ್ದೇಶನದ ‘ಸಾಲಾರ್​ ಚಿತ್ರ ಬಿಡುಗಡೆ ದಿನಾಂಕ ಘೋಷಣೆ; ಥ್ರಿಲ್​ ಆಗಿದ್ದಾರಂತೆ ಪ್ರಭಾಸ್​

Salaar Telugu Movie Release Date: ಸಾಲಾರ್​ ಒಂದು ಸಂಪೂರ್ಣ ಆ್ಯಕ್ಷನ್​ ಥ್ರಿಲ್ಲರ್​ ಸಿನಿಮಾ. ಇದರಲ್ಲಿ ಪ್ರಭಾಸ್​ ತುಂಬ ಪವರ್​ಫುಲ್​ ಆಗಿ ಮಿಂಚಲಿದ್ದಾರೆ ಎಂದಿದ್ದಾರೆ ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್​.

Salaar Movie Release Date: ಪ್ರಶಾಂತ್ ನೀಲ್ ನಿರ್ದೇಶನದ ‘ಸಾಲಾರ್​ ಚಿತ್ರ ಬಿಡುಗಡೆ ದಿನಾಂಕ ಘೋಷಣೆ; ಥ್ರಿಲ್​ ಆಗಿದ್ದಾರಂತೆ ಪ್ರಭಾಸ್​
ಸಾಲಾರ್ ಪೋಸ್ಟರ್​ನಲ್ಲಿ ಪ್ರಭಾಸ್​
Follow us
Lakshmi Hegde
| Updated By: Digi Tech Desk

Updated on:Mar 01, 2021 | 9:34 AM

ಪ್ರಶಾಂತ್ ನೀಲ್​ ನಿರ್ದೇಶನದ, ನಟ ಪ್ರಭಾಸ್ ಅಭಿನಯದ ಬಹುನಿರೀಕ್ಷಿತ ಆ್ಯಕ್ಷನ್ ಥ್ರಿಲ್ಲರ್​ ‘ಸಾಲಾರ್​’ ಸಿನಿಮಾ ಬಿಡುಗಡೆ ದಿನಾಂಕ ಇಂದು ಘೋಷಣೆಯಾಗಿದೆ. ಹೊಂಬಾಳೆ ಫಿಲ್ಮ್ಸ್ ಬ್ಯಾನರ್​​ನಡಿ ವಿಜಯ ಕಿರಗಂದೂರು​​ ನಿರ್ಮಾಣ ಮಾಡಿರುವ ಈ ತೆಲುಗು ಸಿನಿಮಾ 2022 ರ ಏಪ್ರಿಲ್​ 14ರಂದು ದೇಶಾದ್ಯಂತ ಕನ್ನಡ, ಹಿಂದಿ, ಮಲೆಯಾಳಂ, ತಮಿಳುಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಸಾಲಾರ್​ ಸಿನಿಮಾದ ಒಂದು ಹೊಸ ಪೋಸ್ಟರ್​​ನ್ನು ಇಂದು ಪ್ರಶಾಂತ್​ ನೀಲ್​, ಹೊಂಬಾಳೆ ಫಿಲ್ಮ್ಸ್​, ಪ್ರಭಾಸ್​, ನಟಿ ಶ್ರುತಿ ಹಾಸನ್​ ಶೇರ್​ ಮಾಡಿಕೊಂಡಿದ್ದಾರೆ.

2020ರ ಡಿಸೆಂಬರ್​​ನಲ್ಲಿ ಹೈದರಾಬಾದ್​ನಲ್ಲಿ ಸಾಂಪ್ರಾದಾಯಿಕವಾಗಿ ಪೂಜೆ ಮಾಡುವ ಮೂಲಕ ಸಾಲಾರ್​ ಸಿನಿಮಾ ಸೆಟ್ಟೇರಿತ್ತು. ಯಶಸ್ವಿ ಕೆಜಿಎಫ್​ನ್ನು ನಿರ್ಮಾಣ ಮಾಡಿರುವ ಬ್ಯಾನರ್​​ನಡಿ, ಆ ಸಿನಿಮಾಗಳನ್ನು ನಿರ್ದೇಶನ ಮಾಡಿದ ನಿರ್ದೇಶಕ ಪ್ರಶಾಂತ್​ ನೀಲ್ ಅವರೇ ಸಾಲಾರ್​ನ್ನು ನಿರ್ಮಾಣ ಮಾಡುತ್ತಿರುವುದು ಒಂದು ಕಡೆ ಕುತೂಹಲ ಹುಟ್ಟಿಸಿದ್ದರೆ, ಇನ್ನೊಂದೆಡೆ ಬಾಹುಬಲಿಯಂತಹ ಭರ್ಜರಿ ಹಿಟ್​ ಸಿನಿಮಾ ಕೊಟ್ಟ ಸ್ಟಾರ್ ಪ್ರಭಾಸ್ ನಟಿಸುತ್ತಿರುವುದು ಇನ್ನಷ್ಟು ನಿರೀಕ್ಷೆಗೆ ಕಾರಣವಾಗಿದೆ.

ಏನಂತಾರೆ ಪ್ರಭಾಸ್​, ಪ್ರಶಾಂತ್ ನೀಲ್​? ಸಾಲಾರ್​ ಒಂದು ಸಂಪೂರ್ಣ ಆ್ಯಕ್ಷನ್​ ಥ್ರಿಲ್ಲರ್​ ಸಿನಿಮಾ. ಇದರಲ್ಲಿ ಪ್ರಭಾಸ್​ ತುಂಬ ಪವರ್​ಫುಲ್​ ಆಗಿ ಮಿಂಚಲಿದ್ದಾರೆ ಎಂದಿದ್ದಾರೆ ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್​. ಇನ್ನು ಸಾಲಾರ್ ಬಗ್ಗೆ ಮಾತನಾಡಿದ ಪ್ರಭಾಸ್​, ನಾನು ಚಿತ್ರದ ಶೂಟಿಂಗ್​​ನಲ್ಲಿ ಪಾಲ್ಗೊಳ್ಳಲು ಮತ್ತು ಇದರಲ್ಲಿನ ನನ್ನ ಲುಕ್​ನ್ನು ಅಭಿಮಾನಿಗಳಿಗಾಗಿ ಬಿಡುಗಡೆ ಮಾಡಲು ತುಂಬ ಕಾತರಗೊಂಡಿದ್ದೇನೆ ಎಂದು ತಿಳಿಸಿದ್ದಾರೆ. ಈ ಮಧ್ಯೆ ಬಾಲಿವುಡ್​ ನಟ ಜಾನ್​ ಅಬ್ರಾಹಂ ಜತೆ ಸಾಲಾರ್​ ಟೀಂ ಮಾತುಕತೆ ನಡೆಸುತ್ತಿದ್ದು, ಅವರು ಒಪ್ಪಿಕೊಂಡರೆ ವಿಲನ್​ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

View this post on Instagram

A post shared by Prabhas (@actorprabhas)

Published On - 5:15 pm, Sun, 28 February 21

ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!