AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salaar Movie Release Date: ಪ್ರಶಾಂತ್ ನೀಲ್ ನಿರ್ದೇಶನದ ‘ಸಾಲಾರ್​ ಚಿತ್ರ ಬಿಡುಗಡೆ ದಿನಾಂಕ ಘೋಷಣೆ; ಥ್ರಿಲ್​ ಆಗಿದ್ದಾರಂತೆ ಪ್ರಭಾಸ್​

Salaar Telugu Movie Release Date: ಸಾಲಾರ್​ ಒಂದು ಸಂಪೂರ್ಣ ಆ್ಯಕ್ಷನ್​ ಥ್ರಿಲ್ಲರ್​ ಸಿನಿಮಾ. ಇದರಲ್ಲಿ ಪ್ರಭಾಸ್​ ತುಂಬ ಪವರ್​ಫುಲ್​ ಆಗಿ ಮಿಂಚಲಿದ್ದಾರೆ ಎಂದಿದ್ದಾರೆ ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್​.

Salaar Movie Release Date: ಪ್ರಶಾಂತ್ ನೀಲ್ ನಿರ್ದೇಶನದ ‘ಸಾಲಾರ್​ ಚಿತ್ರ ಬಿಡುಗಡೆ ದಿನಾಂಕ ಘೋಷಣೆ; ಥ್ರಿಲ್​ ಆಗಿದ್ದಾರಂತೆ ಪ್ರಭಾಸ್​
ಸಾಲಾರ್ ಪೋಸ್ಟರ್​ನಲ್ಲಿ ಪ್ರಭಾಸ್​
Lakshmi Hegde
| Edited By: |

Updated on:Mar 01, 2021 | 9:34 AM

Share

ಪ್ರಶಾಂತ್ ನೀಲ್​ ನಿರ್ದೇಶನದ, ನಟ ಪ್ರಭಾಸ್ ಅಭಿನಯದ ಬಹುನಿರೀಕ್ಷಿತ ಆ್ಯಕ್ಷನ್ ಥ್ರಿಲ್ಲರ್​ ‘ಸಾಲಾರ್​’ ಸಿನಿಮಾ ಬಿಡುಗಡೆ ದಿನಾಂಕ ಇಂದು ಘೋಷಣೆಯಾಗಿದೆ. ಹೊಂಬಾಳೆ ಫಿಲ್ಮ್ಸ್ ಬ್ಯಾನರ್​​ನಡಿ ವಿಜಯ ಕಿರಗಂದೂರು​​ ನಿರ್ಮಾಣ ಮಾಡಿರುವ ಈ ತೆಲುಗು ಸಿನಿಮಾ 2022 ರ ಏಪ್ರಿಲ್​ 14ರಂದು ದೇಶಾದ್ಯಂತ ಕನ್ನಡ, ಹಿಂದಿ, ಮಲೆಯಾಳಂ, ತಮಿಳುಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಸಾಲಾರ್​ ಸಿನಿಮಾದ ಒಂದು ಹೊಸ ಪೋಸ್ಟರ್​​ನ್ನು ಇಂದು ಪ್ರಶಾಂತ್​ ನೀಲ್​, ಹೊಂಬಾಳೆ ಫಿಲ್ಮ್ಸ್​, ಪ್ರಭಾಸ್​, ನಟಿ ಶ್ರುತಿ ಹಾಸನ್​ ಶೇರ್​ ಮಾಡಿಕೊಂಡಿದ್ದಾರೆ.

2020ರ ಡಿಸೆಂಬರ್​​ನಲ್ಲಿ ಹೈದರಾಬಾದ್​ನಲ್ಲಿ ಸಾಂಪ್ರಾದಾಯಿಕವಾಗಿ ಪೂಜೆ ಮಾಡುವ ಮೂಲಕ ಸಾಲಾರ್​ ಸಿನಿಮಾ ಸೆಟ್ಟೇರಿತ್ತು. ಯಶಸ್ವಿ ಕೆಜಿಎಫ್​ನ್ನು ನಿರ್ಮಾಣ ಮಾಡಿರುವ ಬ್ಯಾನರ್​​ನಡಿ, ಆ ಸಿನಿಮಾಗಳನ್ನು ನಿರ್ದೇಶನ ಮಾಡಿದ ನಿರ್ದೇಶಕ ಪ್ರಶಾಂತ್​ ನೀಲ್ ಅವರೇ ಸಾಲಾರ್​ನ್ನು ನಿರ್ಮಾಣ ಮಾಡುತ್ತಿರುವುದು ಒಂದು ಕಡೆ ಕುತೂಹಲ ಹುಟ್ಟಿಸಿದ್ದರೆ, ಇನ್ನೊಂದೆಡೆ ಬಾಹುಬಲಿಯಂತಹ ಭರ್ಜರಿ ಹಿಟ್​ ಸಿನಿಮಾ ಕೊಟ್ಟ ಸ್ಟಾರ್ ಪ್ರಭಾಸ್ ನಟಿಸುತ್ತಿರುವುದು ಇನ್ನಷ್ಟು ನಿರೀಕ್ಷೆಗೆ ಕಾರಣವಾಗಿದೆ.

ಏನಂತಾರೆ ಪ್ರಭಾಸ್​, ಪ್ರಶಾಂತ್ ನೀಲ್​? ಸಾಲಾರ್​ ಒಂದು ಸಂಪೂರ್ಣ ಆ್ಯಕ್ಷನ್​ ಥ್ರಿಲ್ಲರ್​ ಸಿನಿಮಾ. ಇದರಲ್ಲಿ ಪ್ರಭಾಸ್​ ತುಂಬ ಪವರ್​ಫುಲ್​ ಆಗಿ ಮಿಂಚಲಿದ್ದಾರೆ ಎಂದಿದ್ದಾರೆ ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್​. ಇನ್ನು ಸಾಲಾರ್ ಬಗ್ಗೆ ಮಾತನಾಡಿದ ಪ್ರಭಾಸ್​, ನಾನು ಚಿತ್ರದ ಶೂಟಿಂಗ್​​ನಲ್ಲಿ ಪಾಲ್ಗೊಳ್ಳಲು ಮತ್ತು ಇದರಲ್ಲಿನ ನನ್ನ ಲುಕ್​ನ್ನು ಅಭಿಮಾನಿಗಳಿಗಾಗಿ ಬಿಡುಗಡೆ ಮಾಡಲು ತುಂಬ ಕಾತರಗೊಂಡಿದ್ದೇನೆ ಎಂದು ತಿಳಿಸಿದ್ದಾರೆ. ಈ ಮಧ್ಯೆ ಬಾಲಿವುಡ್​ ನಟ ಜಾನ್​ ಅಬ್ರಾಹಂ ಜತೆ ಸಾಲಾರ್​ ಟೀಂ ಮಾತುಕತೆ ನಡೆಸುತ್ತಿದ್ದು, ಅವರು ಒಪ್ಪಿಕೊಂಡರೆ ವಿಲನ್​ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

View this post on Instagram

A post shared by Prabhas (@actorprabhas)

Published On - 5:15 pm, Sun, 28 February 21

Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು