AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salaar Movie Release Date: ಪ್ರಶಾಂತ್ ನೀಲ್ ನಿರ್ದೇಶನದ ‘ಸಾಲಾರ್​ ಚಿತ್ರ ಬಿಡುಗಡೆ ದಿನಾಂಕ ಘೋಷಣೆ; ಥ್ರಿಲ್​ ಆಗಿದ್ದಾರಂತೆ ಪ್ರಭಾಸ್​

Salaar Telugu Movie Release Date: ಸಾಲಾರ್​ ಒಂದು ಸಂಪೂರ್ಣ ಆ್ಯಕ್ಷನ್​ ಥ್ರಿಲ್ಲರ್​ ಸಿನಿಮಾ. ಇದರಲ್ಲಿ ಪ್ರಭಾಸ್​ ತುಂಬ ಪವರ್​ಫುಲ್​ ಆಗಿ ಮಿಂಚಲಿದ್ದಾರೆ ಎಂದಿದ್ದಾರೆ ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್​.

Salaar Movie Release Date: ಪ್ರಶಾಂತ್ ನೀಲ್ ನಿರ್ದೇಶನದ ‘ಸಾಲಾರ್​ ಚಿತ್ರ ಬಿಡುಗಡೆ ದಿನಾಂಕ ಘೋಷಣೆ; ಥ್ರಿಲ್​ ಆಗಿದ್ದಾರಂತೆ ಪ್ರಭಾಸ್​
ಸಾಲಾರ್ ಪೋಸ್ಟರ್​ನಲ್ಲಿ ಪ್ರಭಾಸ್​
Lakshmi Hegde
| Edited By: |

Updated on:Mar 01, 2021 | 9:34 AM

Share

ಪ್ರಶಾಂತ್ ನೀಲ್​ ನಿರ್ದೇಶನದ, ನಟ ಪ್ರಭಾಸ್ ಅಭಿನಯದ ಬಹುನಿರೀಕ್ಷಿತ ಆ್ಯಕ್ಷನ್ ಥ್ರಿಲ್ಲರ್​ ‘ಸಾಲಾರ್​’ ಸಿನಿಮಾ ಬಿಡುಗಡೆ ದಿನಾಂಕ ಇಂದು ಘೋಷಣೆಯಾಗಿದೆ. ಹೊಂಬಾಳೆ ಫಿಲ್ಮ್ಸ್ ಬ್ಯಾನರ್​​ನಡಿ ವಿಜಯ ಕಿರಗಂದೂರು​​ ನಿರ್ಮಾಣ ಮಾಡಿರುವ ಈ ತೆಲುಗು ಸಿನಿಮಾ 2022 ರ ಏಪ್ರಿಲ್​ 14ರಂದು ದೇಶಾದ್ಯಂತ ಕನ್ನಡ, ಹಿಂದಿ, ಮಲೆಯಾಳಂ, ತಮಿಳುಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಸಾಲಾರ್​ ಸಿನಿಮಾದ ಒಂದು ಹೊಸ ಪೋಸ್ಟರ್​​ನ್ನು ಇಂದು ಪ್ರಶಾಂತ್​ ನೀಲ್​, ಹೊಂಬಾಳೆ ಫಿಲ್ಮ್ಸ್​, ಪ್ರಭಾಸ್​, ನಟಿ ಶ್ರುತಿ ಹಾಸನ್​ ಶೇರ್​ ಮಾಡಿಕೊಂಡಿದ್ದಾರೆ.

2020ರ ಡಿಸೆಂಬರ್​​ನಲ್ಲಿ ಹೈದರಾಬಾದ್​ನಲ್ಲಿ ಸಾಂಪ್ರಾದಾಯಿಕವಾಗಿ ಪೂಜೆ ಮಾಡುವ ಮೂಲಕ ಸಾಲಾರ್​ ಸಿನಿಮಾ ಸೆಟ್ಟೇರಿತ್ತು. ಯಶಸ್ವಿ ಕೆಜಿಎಫ್​ನ್ನು ನಿರ್ಮಾಣ ಮಾಡಿರುವ ಬ್ಯಾನರ್​​ನಡಿ, ಆ ಸಿನಿಮಾಗಳನ್ನು ನಿರ್ದೇಶನ ಮಾಡಿದ ನಿರ್ದೇಶಕ ಪ್ರಶಾಂತ್​ ನೀಲ್ ಅವರೇ ಸಾಲಾರ್​ನ್ನು ನಿರ್ಮಾಣ ಮಾಡುತ್ತಿರುವುದು ಒಂದು ಕಡೆ ಕುತೂಹಲ ಹುಟ್ಟಿಸಿದ್ದರೆ, ಇನ್ನೊಂದೆಡೆ ಬಾಹುಬಲಿಯಂತಹ ಭರ್ಜರಿ ಹಿಟ್​ ಸಿನಿಮಾ ಕೊಟ್ಟ ಸ್ಟಾರ್ ಪ್ರಭಾಸ್ ನಟಿಸುತ್ತಿರುವುದು ಇನ್ನಷ್ಟು ನಿರೀಕ್ಷೆಗೆ ಕಾರಣವಾಗಿದೆ.

ಏನಂತಾರೆ ಪ್ರಭಾಸ್​, ಪ್ರಶಾಂತ್ ನೀಲ್​? ಸಾಲಾರ್​ ಒಂದು ಸಂಪೂರ್ಣ ಆ್ಯಕ್ಷನ್​ ಥ್ರಿಲ್ಲರ್​ ಸಿನಿಮಾ. ಇದರಲ್ಲಿ ಪ್ರಭಾಸ್​ ತುಂಬ ಪವರ್​ಫುಲ್​ ಆಗಿ ಮಿಂಚಲಿದ್ದಾರೆ ಎಂದಿದ್ದಾರೆ ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್​. ಇನ್ನು ಸಾಲಾರ್ ಬಗ್ಗೆ ಮಾತನಾಡಿದ ಪ್ರಭಾಸ್​, ನಾನು ಚಿತ್ರದ ಶೂಟಿಂಗ್​​ನಲ್ಲಿ ಪಾಲ್ಗೊಳ್ಳಲು ಮತ್ತು ಇದರಲ್ಲಿನ ನನ್ನ ಲುಕ್​ನ್ನು ಅಭಿಮಾನಿಗಳಿಗಾಗಿ ಬಿಡುಗಡೆ ಮಾಡಲು ತುಂಬ ಕಾತರಗೊಂಡಿದ್ದೇನೆ ಎಂದು ತಿಳಿಸಿದ್ದಾರೆ. ಈ ಮಧ್ಯೆ ಬಾಲಿವುಡ್​ ನಟ ಜಾನ್​ ಅಬ್ರಾಹಂ ಜತೆ ಸಾಲಾರ್​ ಟೀಂ ಮಾತುಕತೆ ನಡೆಸುತ್ತಿದ್ದು, ಅವರು ಒಪ್ಪಿಕೊಂಡರೆ ವಿಲನ್​ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

View this post on Instagram

A post shared by Prabhas (@actorprabhas)

Published On - 5:15 pm, Sun, 28 February 21

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ