AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಚಿತ್ರದಲ್ಲಿ ನಟಿಸ್ತಿಲ್ಲ ಸಮಂತಾ, ನಯನತಾರಾ: ಕಥೆ ಕೇಳಿ ಓಕೆ ಅಂದು ಇದೀಗ ಹೊರನಡೆದ ಸಮಂತಾ..

ಸೌತ್‌ ಸಿನಿ ದುನಿಯಾದ ಟಚಾಪ್‌ ಸುಂದರಿಯರಿಬ್ಬರೂ ಒಂದೇ ಸಿನಿಮಾದಲ್ಲಿ ನಟಿಸ್ತಾರೆ ಅನ್ನೋ ಸುದ್ದಿ ಕೇಳಿದ್ದ ಅಭಿಮಾನಿಗಳು ಅವ್ರ ಅಭಿನಯ ನೋಡೋಕೆ ಥ್ರಿಲ್‌ ಆಗಿ ಕಾಯ್ತಿದ್ರು. ಆದ್ರೀಗ ಸಿನಿಮಾ ಇಂಡಸ್ಟ್ರಿಯಲ್ಲಿ ನಟಿಮಣಿಯರಿಬ್ಬರೂ ಒಂದಾಗೋದು ಡೌಟ್ ಅನ್ನೋ ಮಾತಿಗೆ ಈ ಸ್ಟೋರಿ ಉತ್ತರ ಕೊಟ್ಟಂತಿದೆ. ಹಾಗಾದ್ರೆ ಅದ್ಯಾವ ಸಿನಿಮಾ.. ಆ ನಟಿಮಣಿಯರ ನಡುವೆ ನಡೆದಿದ್ದೇನು.. ಅದರ ಡಿಟೇಲ್ಸ್ ಇಲ್ಲಿದೆ ಓದಿ.

ಒಂದೇ ಚಿತ್ರದಲ್ಲಿ ನಟಿಸ್ತಿಲ್ಲ ಸಮಂತಾ, ನಯನತಾರಾ: ಕಥೆ ಕೇಳಿ ಓಕೆ ಅಂದು ಇದೀಗ ಹೊರನಡೆದ ಸಮಂತಾ..
ಕಾತುವಕ್ಕಲು ರೆಂಡು ಕಾದಲ್‌
ಆಯೇಷಾ ಬಾನು
|

Updated on: Dec 07, 2020 | 7:41 AM

Share

ಸಿನಿ ದುನಿಯಾದಲ್ಲಿ ಸದ್ಯ ಮಲ್ಟಿ ಸ್ಟಾರ್‌ ಸಿನಿಮಾಗಳು ಹೆಚ್ಚು ಗಮನ ಸೆಳೆಯುತ್ತಿವೆ. ಒಂದೇ ಸಿನಿಮಾದಲ್ಲಿ ತಮ್ಮ ತಮ್ಮ ನೆಚ್ಚಿನ ನಟನಟಿಯರನ್ನ ನೋಡೋಕೆ ಸಿನಿಮಾ ಅನೌನ್ಸ್‌ ಆದಾಗಿನಿಂದ್ಲೂ ಅಭಿಮಾನಿಗಳು ಬೆಳ್ಳಿ ಪರದೆ ಮೇಲೆ ಕಣ್ತುಂಬಿಕೊಳ್ಳೋವರೆಗೂ ಕಾದು ಕುಳಿತಿರ್ತಾರೆ.

ಆರಂಭದಿಂದ್ಲೇ ಸ್ಟಾರ್‌ಗಳೂ ಕೂಡ ತಮ್ಮ ಪಾತ್ರಕ್ಕೆ ಎಷ್ಟು ಇಂಪಾರ್ಟೆನ್ಸ್ ಇದೆ ಅನ್ನೋದನ್ನ ಲೆಕ್ಕ ಹಾಕಿಯೇ ಸಿನಿಮಾಗೆ ಸೈನ್ ಮಾಡಿರ್ತಾರೆ. ಸದ್ಯ ಟಾಲಿವುಡ್‌ ಹಾಗೂ ಕಾಲಿವುಡ್‌ ನಟಿಮಣಿಯರಾದ ಸಮಂತ ಹಾಗೂ ನಯನತಾರಾ ಒಂದೇ ಚಿತ್ರದಲ್ಲಿ ನಟಿಸ್ತಾರೆ ಅನ್ನೋ ಮಾತು ಕೇಳಿ ಬಂದಿತ್ತು.

ನಯನತಾರಾ ಬಾಯ್‌ ಫ್ರೆಂಡ್‌ ವಿಗ್ನೇಶ್‌ ಶಿವನ್‌ ಆ್ಯಕ್ಷನ್‌ ಕಟ್‌ ಹೇಳ್ತಿರೋ ಕಾತುವಕ್ಕಲು ರೆಂಡು ಕಾದಲ್‌ ಸಿನಿಮಾದಲ್ಲಿ ಸಮಂತ ಹಾಗೂ ನಯನತಾರಾ ನಟಿಸ್ತಾರೆ ಅನ್ನೋ ಮಾತು ಕೇಳಿ ಬಂದಿತ್ತು. ಈಗಾಗ್ಲೇ ಆಗಿರೋ ಮಾತು ಕಥೆ ಪ್ರಕಾರ ಇಬ್ಬರೂ ನಟಿಮಣಿಯರು ಕಥೆ ಕೇಳಿ ಪಾತ್ರಕ್ಕೂ ಓಕೆ ಅಂತ ಹೇಳಿದ್ರು. ಆದ್ರೀಗ ಕಾತುವಕ್ಕಲು ರೆಂಡು ಕಾದಲ್‌ ಸಿನಿಮಾದಿಂದ ಸಮಂತ ಹೊರ ನಡೆದಿದ್ದಾರೆ ಅನ್ನೋ ಸುದ್ದಿ ಹರಿದಾಡ್ತಿದೆ.

ಒಂದೇ ಚಿತ್ರದಲ್ಲಿ ನಟಿಸ್ತಿಲ್ಲ ಸಮಂತಾ, ನಯನತಾರಾ: ಅಷ್ಟಕ್ಕೂ ಈ ಚಿತ್ರದಲ್ಲಿ ಸಮಂತಾ ಪಾತ್ರಕ್ಕೆ ಅಂದುಕೊಂಡಷ್ಟು ಪ್ರಾಮುಖ್ಯತೆ ಇಲ್ವಂತೆ. ಹೀಗಾಗಿ ಸಮಂತಾ ಆ ಸಿನಿಮಾದಿಂದ ಹೊರ ಬಂದಿದ್ದಾರೆ ಅನ್ನೋ ಮಾತು ಕೇಳಿಬರ್ತಿದೆ. ಆದ್ರೆ ಈ ಸುದ್ದಿ ಎಷ್ಟು ನಿಜ ಅನ್ನೋದನ್ನ ಚಿತ್ರತಂಡ ಅಧಿಕೃತವಾಗಿ ಕನ್‌ ಫರ್ಮ್‌ ಮಾಡಬೇಕಿದೆ. ಸದ್ಯ ಹರಿದಾಡ್ತಿರೋ ಮಾಹಿತಿ ಪ್ರಕಾರ ಸಮಂತಾ ಪಾತ್ರಕ್ಕೆ ನಟಿ ಕೀರ್ತಿ ಸುರೇಶ್‌ ಅಥವಾ ತ್ರಿಶಾರನ್ನ ಕರೆತರೋಕೆ ಚಿತ್ರತಂಡ ಫ್ಲ್ಯಾನ್‌ ಮಾಡ್ತಿದೆಯಂತೆ.

ಒಟ್ನಲ್ಲಿ ನಟರ ಮಸ್ಟಿ ಸ್ಟಾರ್‌ ಸಿನಿಮಾ ರೀತಿಯೇ ನಟಿಮಣಿಯರೂ ಒಂದಾಗಿ ಸಿನಿಮಾದಲ್ಲಿ ಅಭಿನಯಿಸ್ತಾರೆ ಅನ್ನೋದನ್ನ ಕೇಳಿ ಫುಲ್‌ ಖುಷಿಯಲ್ಲಿದ್ದ ಅಭಿಮಾನಿಗಳಿಗೆ ಈಗ ಈ ಸುದ್ದಿ ನಿರಾಸೆ ಮೂಡಿಸಿದೆ. ಹಾಗಾಗಿ ಕಾತುವಕ್ಕಲು ರೆಂಡು ಕಾದಲ್‌ ಚಿತ್ರದಲ್ಲಿ ಸಮಂತಾ ನಟಿ ಗಾಳಿ ಸುದ್ದಿಗೆ ಬ್ರೇಕ್‌ ಹಾಕ್ತಾರಾ. ಬೇರೆ ನಟಿ ಬಂದು ಕಮಾಲ್‌ ಮಾಡ್ತಾರಾ ಅನ್ನೋದು ಸದ್ಯದ ಕುತೂಹಲ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ