Santro Ravi in Bengaluru: ಬ್ಲ್ಯಾಕ್ಮೇಲರ್ ಖದೀಮನಿಗೆ ಮತ್ತೊಮ್ಮೆ ಆರೋಗ್ಯದಲ್ಲಿ ಏರುಪೇರು, ಬೌರಿಂಗ್ ಆಸ್ಪತ್ರೆಯಲ್ಲಿ ತಪಾಸಣೆ
ರವಿ (ಇವನ ಅಸಲು ಹೆಸರು ಮಂಜುನಾಥ) ಬಾಯಿ ಬಿಟ್ಟರೆ ಕೆಲ ಪುಢಾರಿಗಳಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗಲಾರದು ಅಂತ ಮಾತ್ರ ಜನ ಮಾತಾಡಿಕೊಳ್ಳುತ್ತಿದ್ದಾರೆ!
ಬೆಂಗಳೂರು: ನ್ಯಾಯಾಂಗ ಕಸ್ಟಡಿಯಲ್ಲಿದ್ದ ಸ್ಯಾಂಟ್ರೋ ರವಿಯನ್ನು (Santro Ravi) ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದು ಮೈಸೂರಿಂದ ಬೆಂಗಳೂರಿಗೆ ಕರೆತಂದಾಗಿದೆ. ಆದರೆ ಇಲ್ಲೂ ಅವನ ಆರೋಗ್ಯದಲ್ಲಿ ಏರುಪೇರಾದ ಉಂಟಾದ ಕಾರಣ ವೈದ್ಯಕೀಯ ತಪಾಸಣೆಗಾಗಿ ಬೌರಿಂಗ್ ಆಸ್ಪತ್ರೆಗೆ (Bowring Hospital) ತರಲಾಗಿತ್ತು. ತಪಾಸಣೆಯ (checkup) ಬಳಿಕ ಅವನನ್ನು ಆಸ್ಪತ್ರೆಯಿಂದ ಪೊಲೀಸ್ ವಾಹನವೊಂದರಲ್ಲಿ ಸಿಐಡಿ ಅಧಿಕಾರಿಗಳು ಕರೆದೊಯ್ಯುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ತನಿಖೆ ಯಾವ ಹಂತದಲ್ಲಿ ಅಂತ ಜನರಿಗೆ ಗೊತ್ತಾಗುತ್ತಿಲ್ಲ. ರವಿ (ಇವನ ಅಸಲು ಹೆಸರು ಮಂಜುನಾಥ) ಬಾಯಿ ಬಿಟ್ಟರೆ ಕೆಲ ಪುಢಾರಿಗಳಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗಲಾರದು ಅಂತ ಮಾತ್ರ ಜನ ಮಾತಾಡಿಕೊಳ್ಳುತ್ತಿದ್ದಾರೆ!
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
