AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕೇಳಿ ಬಂತು ಭಾರೀ ಪ್ರಮಾಣದ ನಿಗೂಢ ಶಬ್ದ!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ 1.20ರ ಸುಮಾರಿಗೆ ಭಾರಿ ಪ್ರಮಾಣದ ನಿಗೂಢ ಶಬ್ದ ಕೇಳಿಸಿದೆ. ಈ ಶಬ್ದದಿಂದ ಬೆಂಗಳೂರಿನ ಜನತೆ ಬೆಚ್ಚಿಬಿದ್ದಿದ್ದಾರೆ. ವೈಟ್‌ಫೀಲ್ಡ್, ಇಂದಿರಾನಗರ, ಕೆ.ಆರ್.ಪುರಂ, ಟಿನ್‌ಫ್ಯಾಕ್ಟರಿ, HSR ಲೇಔಟ್, ಬೊಮ್ಮಸಂದ್ರ, ಜಯನಗರ, ಜೆಪಿ ನಗರ ಸೇರಿದಂತೆ ಅರ್ಧ ಬೆಂಗಳೂರಿಗೆ ನಿಗೂಢ ಶಬ್ದ ಕೇಳಿಸಿದೆ. ಶಬ್ದ ಕೇಳಿಸಿಕೊಂಡ ಜನ ವಿಪತ್ತು ನಿರ್ವಹಣಾ ಕೇಂದ್ರದ ಕಂಟ್ರೋಲ್ ರೂಂಗೆ ಕರೆ ಮಾಡಿದ್ದಾರೆ. ಶಬ್ದ ಎಲ್ಲಿಂದ ಬಂತು ಎಂಬುವುದರ ಬಗ್ಗೆ ವಿಪತ್ತು ನಿರ್ವಹಣಾ ಕೇಂದ್ರ ಹಾಗೂ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಭೂಕಂಪನದ ಅನುಭವ […]

ಬೆಂಗಳೂರಿನಲ್ಲಿ ಕೇಳಿ ಬಂತು ಭಾರೀ ಪ್ರಮಾಣದ ನಿಗೂಢ ಶಬ್ದ!
ಸಾಧು ಶ್ರೀನಾಥ್​
|

Updated on:May 20, 2020 | 2:33 PM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ 1.20ರ ಸುಮಾರಿಗೆ ಭಾರಿ ಪ್ರಮಾಣದ ನಿಗೂಢ ಶಬ್ದ ಕೇಳಿಸಿದೆ. ಈ ಶಬ್ದದಿಂದ ಬೆಂಗಳೂರಿನ ಜನತೆ ಬೆಚ್ಚಿಬಿದ್ದಿದ್ದಾರೆ. ವೈಟ್‌ಫೀಲ್ಡ್, ಇಂದಿರಾನಗರ, ಕೆ.ಆರ್.ಪುರಂ, ಟಿನ್‌ಫ್ಯಾಕ್ಟರಿ, HSR ಲೇಔಟ್, ಬೊಮ್ಮಸಂದ್ರ, ಜಯನಗರ, ಜೆಪಿ ನಗರ ಸೇರಿದಂತೆ ಅರ್ಧ ಬೆಂಗಳೂರಿಗೆ ನಿಗೂಢ ಶಬ್ದ ಕೇಳಿಸಿದೆ.

ಶಬ್ದ ಕೇಳಿಸಿಕೊಂಡ ಜನ ವಿಪತ್ತು ನಿರ್ವಹಣಾ ಕೇಂದ್ರದ ಕಂಟ್ರೋಲ್ ರೂಂಗೆ ಕರೆ ಮಾಡಿದ್ದಾರೆ. ಶಬ್ದ ಎಲ್ಲಿಂದ ಬಂತು ಎಂಬುವುದರ ಬಗ್ಗೆ ವಿಪತ್ತು ನಿರ್ವಹಣಾ ಕೇಂದ್ರ ಹಾಗೂ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಭೂಕಂಪನದ ಅನುಭವ ಆಗಿಲ್ಲ: ಬೆಂಗಳೂರಿನಲ್ಲಿ ಯಾವುದೇ ರೀತಿಯ ಭೂಕಂಪನದ ಅನುಭವ ಆಗಿಲ್ಲ. ರಿಕ್ಟರ್ ಮಾಪಕದಲ್ಲಿ ಯಾವುದೇ ರೀತಿ ಪ್ರಮಾಣ ದಾಖಲಾಗಿಲ್ಲ. ನಮಗೆ ಹಲವು ದೂರವಾಣಿ ಕರೆಗಳು ಬರುತ್ತಿವೆ. ಆದ್ರೇ ಏನಾಗಿದೆ ಅನ್ನೋದರ ಬಗ್ಗೆ ಸದ್ಯಕ್ಕೆ ಮಾಹಿತಿ ಇಲ್ಲ. ಸ್ಥಳೀಯವಾಗಿ ಬ್ಲಾಸ್ಟಿಂಗ್ ಏನಾದ್ರೂ ಆಗಿದ್ಯಾ ಅನ್ನೋದನ್ನ ನೋಡಬೇಕು. ಸಾಮಾನ್ಯವಾಗಿ ಬ್ಲಾಸ್ಟಿಂಗ್‌ನಲ್ಲಿ ಈ ಮಟ್ಟಿಗಿನ ಭಾರೀ ಶಬ್ಧ ಬರಲ್ಲ. ಹೆಚ್ಚು ಶಬ್ದ ಬಂದಿರುವ ಹಿನ್ನೆಲೆಯಲ್ಲಿ ಏನು ಅನ್ನೋದನ್ನ ಪತ್ತೆ ಹಚ್ಚಬೇಕಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಸಂಸ್ಥೆ ನಿರ್ದೇಶಕ ಶ್ರೀನಿವಾಸ ರೆಡ್ಡಿ ಟಿವಿ9ಗೆ ಮಾಹಿತಿ ನೀಡಿದ್ದಾರೆ.

Published On - 2:05 pm, Wed, 20 May 20

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್