ಕಾಂಗ್ರೆಸ್​ನಲ್ಲಿ ಲಿಂಗಾಯತರು ಮತ್ತು ಬಿಜೆಪಿಯಲ್ಲಿ ಮುಸಲ್ಮಾನರು-ಎರಡರ ಅರ್ಥ ಒಂದೇ: ಸಿಎಂ ಇಬ್ರಾಹಿಂ

ಅರುಣ್​ ಕುಮಾರ್​ ಬೆಳ್ಳಿ

Updated on: Mar 09, 2023 | 7:09 PM

ಸೋಮಣ್ಣ ಅವರು ಜೆಡಿಎಸ್ ಪ್ರಾಡಕ್ಟ್ ಆಗಿರುವುದರಿಂದ ಅವರನ್ನು ಚೆನ್ನಾಗಿ ಅರ್ಥಮಾಡಿಕೊಂಡಿರುವುದಾಗಿ ಇಬ್ರಾಹಿಂ ಹೇಳಿದರು.

ಬೆಂಗಳೂರು: ತಮಾಷೆ ಮಾಡುವುದರಲ್ಲಿ ಬೇರೆಯವರ ಕಾಲೆಳೆಯುವುದರಲ್ಲಿ ಎತ್ತಿದ ಕೈಯೆನಿಸಿಕೊಂಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ (CM Ibrahim) ಇಂದು ಬೆಂಗಳೂರಲ್ಲಿ ಮಾಧ್ಯಮದವರೊಂದಿಗೆ ಮಾತಾಡುವಾಗ ಬಿಜೆಪಿಯಲ್ಲಿ ಸಾಬರಿರೋದು ಮತ್ತು ಕಾಂಗ್ರೆಸ್ ನಲ್ಲಿ ಲಿಂಗಾಯತರಿರೋದು-ಎರಡೂ ಒಂದೇ ಅಂತ ಹೇಳಿದರು. ಸಚಿವ ವಿ ಸೋಮಣ್ಣ (V Somanna) ಬಗ್ಗೆ ಮಾತಾಡಿದ ಇಬ್ರಾಹಿಂ, ಅವರ್ಯಾವತ್ತೂ ಕಾಂಗ್ರೆಸ್ ಸೇರೋದಿಲ್ಲ, ಅವರ ಬಗ್ಗೆ ತನಗೆ ಚೆನ್ನಾಗಿ ಗೊತ್ತು ಅಂತ ಹೇಳಿದರು. ಸೋಮಣ್ಣ ಅವರು ಜೆಡಿಎಸ್ ಪ್ರಾಡಕ್ಟ್ (JDS product) ಆಗಿರುವುದರಿಂದ ಅವರನ್ನು ಚೆನ್ನಾಗಿ ಅರ್ಥಮಾಡಿಕೊಂಡಿರುವುದಾಗಿ ಇಬ್ರಾಹಿಂ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 09, 2023 07:09 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.