AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ಆದೇಶ ಉಲ್ಲಂಘಿಸಿ ಮಂಡ್ಯದಲ್ಲಿ ತರಗತಿ ಆರಂಭ

ಮಂಡ್ಯ: ಜೂನ್ 25ರಿಂದ ಎಸ್ಎಸ್ಎಲ್‌ಸಿ ಪರೀಕ್ಷೆ ಆರಂಭವಾಗುವ ಹಿನ್ನೆಲೆಯಲ್ಲಿ ಸರ್ಕಾರದ ಆದೇಶ ಉಲ್ಲಂಘಿಸಿ ತರಗತಿ ಆರಂಭಿಸಿರುವ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ. ಇಲ್ಲಿ ಸರ್ಕಾರದ ಆದೇಶಕ್ಕೆ ಸ್ವಲ್ಪವೂ ಕಿಮ್ಮತ್ತಿಲ್ಲ. ಜಿಲ್ಲೆಯಲ್ಲಿ ಬಹುತೇಕ ಖಾಸಗಿ ಶಾಲೆಗಳು ಓಪನ್ ಆಗಿವೆ. ಮಂಡ್ಯ ಶಾಸಕ ಶ್ರೀನಿವಾಸ್ ಒಡೆತನದ ವಿವೇಕ ವಿದ್ಯಾಸಂಸ್ಥೆ, ರೋಟರಿ ಎಜುಕೇಷನ್ ಸೊಸೈಟಿ, ಆದರ್ಶ ಪ್ರೌಢಶಾಲೆ ಸೇರಿ ಮಂಡ್ಯ ಜಿಲ್ಲೆಯ ಹಲವು ಶಾಲೆಗಳಲ್ಲಿ ತರಗತಿ ಆರಂಭವಾಗಿದೆ. ಕಳೆದ ಒಂದು ವಾರದಿಂದ ಶಿಕ್ಷಕರು ತರಗತಿಗಳನ್ನ ಆರಂಭಿಸಿದ್ದಾರೆ. ಬೆಳಗ್ಗೆ 10 ಗಂಟೆಯಿಂದ […]

ಸರ್ಕಾರದ ಆದೇಶ ಉಲ್ಲಂಘಿಸಿ ಮಂಡ್ಯದಲ್ಲಿ ತರಗತಿ ಆರಂಭ
ಆಯೇಷಾ ಬಾನು
|

Updated on:Jun 17, 2020 | 1:38 PM

Share

ಮಂಡ್ಯ: ಜೂನ್ 25ರಿಂದ ಎಸ್ಎಸ್ಎಲ್‌ಸಿ ಪರೀಕ್ಷೆ ಆರಂಭವಾಗುವ ಹಿನ್ನೆಲೆಯಲ್ಲಿ ಸರ್ಕಾರದ ಆದೇಶ ಉಲ್ಲಂಘಿಸಿ ತರಗತಿ ಆರಂಭಿಸಿರುವ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ. ಇಲ್ಲಿ ಸರ್ಕಾರದ ಆದೇಶಕ್ಕೆ ಸ್ವಲ್ಪವೂ ಕಿಮ್ಮತ್ತಿಲ್ಲ. ಜಿಲ್ಲೆಯಲ್ಲಿ ಬಹುತೇಕ ಖಾಸಗಿ ಶಾಲೆಗಳು ಓಪನ್ ಆಗಿವೆ.

ಮಂಡ್ಯ ಶಾಸಕ ಶ್ರೀನಿವಾಸ್ ಒಡೆತನದ ವಿವೇಕ ವಿದ್ಯಾಸಂಸ್ಥೆ, ರೋಟರಿ ಎಜುಕೇಷನ್ ಸೊಸೈಟಿ, ಆದರ್ಶ ಪ್ರೌಢಶಾಲೆ ಸೇರಿ ಮಂಡ್ಯ ಜಿಲ್ಲೆಯ ಹಲವು ಶಾಲೆಗಳಲ್ಲಿ ತರಗತಿ ಆರಂಭವಾಗಿದೆ. ಕಳೆದ ಒಂದು ವಾರದಿಂದ ಶಿಕ್ಷಕರು ತರಗತಿಗಳನ್ನ ಆರಂಭಿಸಿದ್ದಾರೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ತರಗತಿ ನಡೆಯುತ್ತಿದೆ.

ಅಂತರ ಪಾಲಿಸಿ ತರಗತಿಗಳನ್ನು ಆರಂಭಿಸಿದ್ದಾರೆ. ಆದ್ರೆ ಶಿಕ್ಷಕರು ಮಾಸ್ಕ್ ಧರಿಸದೆ ಪಾಠಗಳನ್ನು ಮಾಡುತ್ತಿದ್ದಾರೆ. ಮಕ್ಕಳನ್ನು ಶಾಲೆಗೆ ಕಳಿಸುವುದಕ್ಕೆ ಪೋಷಕರ ಹಿಂದೇಟು ಹಾಕುತ್ತಿದ್ದಾರೆ ಆದರೂ ಒತ್ತಡ ಹೇರಿ ಶಿಕ್ಷಕರು ವಿದ್ಯಾರ್ಥಿಗಳನ್ನ ಶಾಲೆಗೆ ಕರೆಸಿಕೊಳ್ಳುತ್ತಿದ್ದಾರೆ. ಕೊರೊನಾ ಭೀತಿ ನಡುವೆಯೇ ಮಕ್ಕಳು ಪಾಠ ಕೇಳುತ್ತಿದ್ದಾರೆ. ಶಿಕ್ಷಕರ ನಡೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಗಳ ಜೀವದ ಜೊತೆ ಶಿಕ್ಷಕರು ಆಟ ಆಡ್ತಿದ್ದಾರೆ ಎಂದಿದ್ದಾರೆ.

Published On - 8:17 am, Tue, 16 June 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್