AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಗಲಾಟೆಗೆ ರಾಜಕೀಯ ಪ್ರೇರಣೆ ಮತ್ತು ಪೊಲೀಸ್‌ ನಿರ್ಲಕ್ಷ್ಯ ಕಾರಣ -SDPI ಆರೋಪ

ಬೆಂಗಳೂರು: ಬೆಂಗಳೂರಿನ ಕೆ.ಜಿ.ಹಳ್ಳಿ-ಡಿ.ಜೆ.ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಿಂಸಾಚಾರ ಪ್ರಕರಣ ರಾಜಕೀಯ ಪ್ರೇರಿತ ಎಂದು SDPI ಸಂಘಟನೆ ಆರೋಪಿಸಿದೆ. ರಾತ್ರಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ದಿಢೀರ್ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿರುವ SDPI ಸಂಘಟನೆಯ ಮುಖಂಡರು, ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವುದು ಎಲ್ಲರ ಕೆಲಸ. ನಿನ್ನೆ ರಾತ್ರಿ ನಡೆದಿರುವ ಘಟನೆ ರಾಜಕೀಯ ಪ್ರೇರಿತ. ನಮ್ಮ ಕಾರ್ಯಕರ್ತ ಮುಜಾಮಿಲ್‌ನನ್ನ ಟಾರ್ಗೆಟ್ ಮಾಡಿದ್ದಾರೆ. ಮುಜಾಮಿಲ್ ಪಾಷಾ ಈ ಗಲಭೆಯನ್ನು ಸೃಷ್ಟಿಸಿಲ್ಲ ಎಂದು ಸಂಘಟನೆ ಮೇಲೆ ಕೇಳಿ ಬರುತ್ತಿರುವ ಆರೋಪವನ್ನು ನಿರಾಕರಿಸಿದ್ದಾರೆ. ಒಂದು […]

ಬೆಂಗಳೂರು ಗಲಾಟೆಗೆ ರಾಜಕೀಯ ಪ್ರೇರಣೆ ಮತ್ತು ಪೊಲೀಸ್‌ ನಿರ್ಲಕ್ಷ್ಯ ಕಾರಣ -SDPI ಆರೋಪ
Guru
|

Updated on:Aug 12, 2020 | 3:56 PM

Share

ಬೆಂಗಳೂರು: ಬೆಂಗಳೂರಿನ ಕೆ.ಜಿ.ಹಳ್ಳಿ-ಡಿ.ಜೆ.ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಿಂಸಾಚಾರ ಪ್ರಕರಣ ರಾಜಕೀಯ ಪ್ರೇರಿತ ಎಂದು SDPI ಸಂಘಟನೆ ಆರೋಪಿಸಿದೆ.

ರಾತ್ರಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ದಿಢೀರ್ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿರುವ SDPI ಸಂಘಟನೆಯ ಮುಖಂಡರು, ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವುದು ಎಲ್ಲರ ಕೆಲಸ. ನಿನ್ನೆ ರಾತ್ರಿ ನಡೆದಿರುವ ಘಟನೆ ರಾಜಕೀಯ ಪ್ರೇರಿತ. ನಮ್ಮ ಕಾರ್ಯಕರ್ತ ಮುಜಾಮಿಲ್‌ನನ್ನ ಟಾರ್ಗೆಟ್ ಮಾಡಿದ್ದಾರೆ. ಮುಜಾಮಿಲ್ ಪಾಷಾ ಈ ಗಲಭೆಯನ್ನು ಸೃಷ್ಟಿಸಿಲ್ಲ ಎಂದು ಸಂಘಟನೆ ಮೇಲೆ ಕೇಳಿ ಬರುತ್ತಿರುವ ಆರೋಪವನ್ನು ನಿರಾಕರಿಸಿದ್ದಾರೆ.

ಒಂದು ಧರ್ಮದ ಪ್ರವಾದಿಯನ್ನು ನಿಂದಿಸುವುದು ತಪ್ಪು. ಈ ಹಿಂದೆಯೂ ನವೀನ್, ಮುಸ್ಲಿಮರನ್ನು ನಿಂದಿಸಿದ್ದಾನೆ. ಈ ಬಗ್ಗೆ ದೂರು ನೀಡಿದ್ದರೂ ಸರಿಯಾಗಿ ಸ್ಪಂದಿಸಿರಲಿಲ್ಲ. ನಿನ್ನೆ ಸಂಜೆ 5ರಿಂದ ರಾತ್ರಿ 8 ಗಂಟೆಯವರೆಗೆ ಕಾದಿದ್ದಾರೆ. ಠಾಣೆ ಎದುರು ನವೀನ್‌ನನ್ನು ಬಂಧಿಸುವಂತೆ ಆಗ್ರಹಿಸಿ ಕಾದಿದ್ದಾರೆ. ಆದ್ರೆ ರಾತ್ರಿ 8ಕ್ಕೆ ಡಿಸಿಪಿ ಶರಣಪ್ಪ ಎಫ್‌ಐಆರ್ ದಾಖಲಿಸಿದ್ರು ಎಂದು ಪೊಲೀಸರ ಮೇಲೆಯೇ ಆರೋಪ ಮಾಡಿದ್ದಾರೆ.

ನಿನ್ನೆ ನಡೆದ ಗಲಾಟೆಯಲ್ಲಿ ಮೂವರು ಧರಣಿ ನಿರತರು ಬಲಿಯಾಗಿದ್ದು ಖಂಡನೀಯ. SDPI ಸದಸ್ಯರನ್ನ ಬಂಧಿಸಿ ಅವರ ಮೇಲೆ ಘಟನೆ ಆರೋಪ ಹೊರಿಸುತ್ತಿರುವುದೂ ಖಂಡನೀಯ. ಘಟನೆಗೆ ಪೊಲೀಸರ ನಿರ್ಲಕ್ಷ್ಯವೇ ಕಾರಣ, ಅದರಿಂದಾಗಿಯೇ ನಿನ್ನೆ ಘರ್ಷಣೆ ಸಂಭವಿಸಿದೆ ಎಂದು SDPI ಮುಖಂಡರು ಪೊಲೀಸರ ಮೇಲೆಯೇ ಆರೋಪ ಮಾಡಿದ್ದಾರೆ.

ಪತ್ರಿಕಾಗೊಷ್ಟಿಯಲ್ಲಿ ಇದ್ದ ಮತ್ತೊಬ್ಬ SDPI ಮುಖಂಡ ಮಂಗಳೂರು ಮೂಲದ ಇಲಿಯಾಸ್ ತುಂಬೆ, ನವೀನ್ ಎಂಬುವವನು ಬಹಳ‌ ದಿನಗಳಿಂದ ಸಮುದಾಯದ ನಿಂದನೆ ಮಾಡುತ್ತಿದ್ದ. ಆದರೂ ಯಾಕೆ ಪೊಲೀಸರು ಪ್ರಕರಣ ದಾಖಲಿಸಿ ನವೀನ್ ನನ್ನು ಅರೆಸ್ಟ್ ಮಾಡಿರಲಿಲ್ಲ? ಪೊಲೀಸರ ನಿರ್ಲಕ್ಷ, ಗುಪ್ತಚರ ಮಾಹಿತಿ ಕೊರತೆಯಿಂದ ಘಟನೆ ನಡೆದಿದೆ ಎಂದು ಆರೋಪಿಸಿದ್ದಾನೆ.

Published On - 3:21 pm, Wed, 12 August 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!