AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಗಲಾಟೆಗೆ ರಾಜಕೀಯ ಪ್ರೇರಣೆ ಮತ್ತು ಪೊಲೀಸ್‌ ನಿರ್ಲಕ್ಷ್ಯ ಕಾರಣ -SDPI ಆರೋಪ

ಬೆಂಗಳೂರು: ಬೆಂಗಳೂರಿನ ಕೆ.ಜಿ.ಹಳ್ಳಿ-ಡಿ.ಜೆ.ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಿಂಸಾಚಾರ ಪ್ರಕರಣ ರಾಜಕೀಯ ಪ್ರೇರಿತ ಎಂದು SDPI ಸಂಘಟನೆ ಆರೋಪಿಸಿದೆ. ರಾತ್ರಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ದಿಢೀರ್ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿರುವ SDPI ಸಂಘಟನೆಯ ಮುಖಂಡರು, ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವುದು ಎಲ್ಲರ ಕೆಲಸ. ನಿನ್ನೆ ರಾತ್ರಿ ನಡೆದಿರುವ ಘಟನೆ ರಾಜಕೀಯ ಪ್ರೇರಿತ. ನಮ್ಮ ಕಾರ್ಯಕರ್ತ ಮುಜಾಮಿಲ್‌ನನ್ನ ಟಾರ್ಗೆಟ್ ಮಾಡಿದ್ದಾರೆ. ಮುಜಾಮಿಲ್ ಪಾಷಾ ಈ ಗಲಭೆಯನ್ನು ಸೃಷ್ಟಿಸಿಲ್ಲ ಎಂದು ಸಂಘಟನೆ ಮೇಲೆ ಕೇಳಿ ಬರುತ್ತಿರುವ ಆರೋಪವನ್ನು ನಿರಾಕರಿಸಿದ್ದಾರೆ. ಒಂದು […]

ಬೆಂಗಳೂರು ಗಲಾಟೆಗೆ ರಾಜಕೀಯ ಪ್ರೇರಣೆ ಮತ್ತು ಪೊಲೀಸ್‌ ನಿರ್ಲಕ್ಷ್ಯ ಕಾರಣ -SDPI ಆರೋಪ
Guru
|

Updated on:Aug 12, 2020 | 3:56 PM

Share

ಬೆಂಗಳೂರು: ಬೆಂಗಳೂರಿನ ಕೆ.ಜಿ.ಹಳ್ಳಿ-ಡಿ.ಜೆ.ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಿಂಸಾಚಾರ ಪ್ರಕರಣ ರಾಜಕೀಯ ಪ್ರೇರಿತ ಎಂದು SDPI ಸಂಘಟನೆ ಆರೋಪಿಸಿದೆ.

ರಾತ್ರಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ದಿಢೀರ್ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿರುವ SDPI ಸಂಘಟನೆಯ ಮುಖಂಡರು, ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವುದು ಎಲ್ಲರ ಕೆಲಸ. ನಿನ್ನೆ ರಾತ್ರಿ ನಡೆದಿರುವ ಘಟನೆ ರಾಜಕೀಯ ಪ್ರೇರಿತ. ನಮ್ಮ ಕಾರ್ಯಕರ್ತ ಮುಜಾಮಿಲ್‌ನನ್ನ ಟಾರ್ಗೆಟ್ ಮಾಡಿದ್ದಾರೆ. ಮುಜಾಮಿಲ್ ಪಾಷಾ ಈ ಗಲಭೆಯನ್ನು ಸೃಷ್ಟಿಸಿಲ್ಲ ಎಂದು ಸಂಘಟನೆ ಮೇಲೆ ಕೇಳಿ ಬರುತ್ತಿರುವ ಆರೋಪವನ್ನು ನಿರಾಕರಿಸಿದ್ದಾರೆ.

ಒಂದು ಧರ್ಮದ ಪ್ರವಾದಿಯನ್ನು ನಿಂದಿಸುವುದು ತಪ್ಪು. ಈ ಹಿಂದೆಯೂ ನವೀನ್, ಮುಸ್ಲಿಮರನ್ನು ನಿಂದಿಸಿದ್ದಾನೆ. ಈ ಬಗ್ಗೆ ದೂರು ನೀಡಿದ್ದರೂ ಸರಿಯಾಗಿ ಸ್ಪಂದಿಸಿರಲಿಲ್ಲ. ನಿನ್ನೆ ಸಂಜೆ 5ರಿಂದ ರಾತ್ರಿ 8 ಗಂಟೆಯವರೆಗೆ ಕಾದಿದ್ದಾರೆ. ಠಾಣೆ ಎದುರು ನವೀನ್‌ನನ್ನು ಬಂಧಿಸುವಂತೆ ಆಗ್ರಹಿಸಿ ಕಾದಿದ್ದಾರೆ. ಆದ್ರೆ ರಾತ್ರಿ 8ಕ್ಕೆ ಡಿಸಿಪಿ ಶರಣಪ್ಪ ಎಫ್‌ಐಆರ್ ದಾಖಲಿಸಿದ್ರು ಎಂದು ಪೊಲೀಸರ ಮೇಲೆಯೇ ಆರೋಪ ಮಾಡಿದ್ದಾರೆ.

ನಿನ್ನೆ ನಡೆದ ಗಲಾಟೆಯಲ್ಲಿ ಮೂವರು ಧರಣಿ ನಿರತರು ಬಲಿಯಾಗಿದ್ದು ಖಂಡನೀಯ. SDPI ಸದಸ್ಯರನ್ನ ಬಂಧಿಸಿ ಅವರ ಮೇಲೆ ಘಟನೆ ಆರೋಪ ಹೊರಿಸುತ್ತಿರುವುದೂ ಖಂಡನೀಯ. ಘಟನೆಗೆ ಪೊಲೀಸರ ನಿರ್ಲಕ್ಷ್ಯವೇ ಕಾರಣ, ಅದರಿಂದಾಗಿಯೇ ನಿನ್ನೆ ಘರ್ಷಣೆ ಸಂಭವಿಸಿದೆ ಎಂದು SDPI ಮುಖಂಡರು ಪೊಲೀಸರ ಮೇಲೆಯೇ ಆರೋಪ ಮಾಡಿದ್ದಾರೆ.

ಪತ್ರಿಕಾಗೊಷ್ಟಿಯಲ್ಲಿ ಇದ್ದ ಮತ್ತೊಬ್ಬ SDPI ಮುಖಂಡ ಮಂಗಳೂರು ಮೂಲದ ಇಲಿಯಾಸ್ ತುಂಬೆ, ನವೀನ್ ಎಂಬುವವನು ಬಹಳ‌ ದಿನಗಳಿಂದ ಸಮುದಾಯದ ನಿಂದನೆ ಮಾಡುತ್ತಿದ್ದ. ಆದರೂ ಯಾಕೆ ಪೊಲೀಸರು ಪ್ರಕರಣ ದಾಖಲಿಸಿ ನವೀನ್ ನನ್ನು ಅರೆಸ್ಟ್ ಮಾಡಿರಲಿಲ್ಲ? ಪೊಲೀಸರ ನಿರ್ಲಕ್ಷ, ಗುಪ್ತಚರ ಮಾಹಿತಿ ಕೊರತೆಯಿಂದ ಘಟನೆ ನಡೆದಿದೆ ಎಂದು ಆರೋಪಿಸಿದ್ದಾನೆ.

Published On - 3:21 pm, Wed, 12 August 20

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು