AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಆದೇಶಕ್ಕೂ ಕವಡೆ ಕಾಸಿನ ಕಿಮ್ಮತ್ತಿಲ್ಲ, ಕೆ.ಆರ್ ಮಾರ್ಕೆಟ್, ಕಲಾಸಿಪಾಳ್ಯದಲ್ಲಿ ಜನಜಂಗುಳಿ

ಬೆಂಗಳೂರು: ನಗರದಲ್ಲಿ ದಿನೇದಿನೆ ಕೊರೊನಾ ಕೇಸ್​ಗಳು ಏರಿಕೆಯಾಗುತ್ತಿದೆ. ಹೀಗಾಗಿ ಲಾಕ್​ಡೌನ್ ಬ್ರಹ್ಮಾಸ್ತ್ರ ಪ್ರಯೋಗಿಸಲು ಬಿಬಿಎಂಪಿ ಮುಂದಾಗಿತ್ತು. ನಿನ್ನೆ ಸಿಎಂ ಜೊತೆ ನಡೆದ ಸಭೆಯಲ್ಲಿ ಪ್ರಮುಖ ನಾಲ್ಕು ಏರಿಯಾಗಳನ್ನು ಸೀಲ್​ಡೌನ್ ಮಾಡಲು ಸೂಚಿಸಲಾಗಿತ್ತು. ಆದ್ರೆ ಕೆ.ಆರ್​.ಮಾರುಕಟ್ಟೆಯಲ್ಲಿ ಸೀಲ್​​​ಡೌನ್​​ಗೆ ಕ್ಯಾರೇ ಅಂತಿಲ್ಲ ಜನ. ಎಲ್ಲಿ ನೋಡಿದ್ರೂ ಜನವೋ ಜನ ಕಂಡು ಬರ್ತಿದ್ದಾರೆ. ಬೆಳ್ಳಂಬೆಳಗ್ಗೆ ಕೆ.ಆರ್.ಮಾರುಕಟ್ಟೆಯಲ್ಲಿ ಭರ್ಜರಿ ವ್ಯಾಪಾರ ನಡೆಯುತ್ತಿದೆ. ಹೂ, ತರಕಾರಿ ಖರೀದಿಯಲ್ಲಿ ಜನ ಬ್ಯುಸಿಯಾಗಿದ್ದಾರೆ. ಸೀಲ್​​​ಡೌನ್ ಆದೇಶವಿದ್ದರೂ ಮಾರ್ಕೆಟ್​ನಲ್ಲಿ ಜನ ಜಾತ್ರೆ ಕಂಡು ಬಂದಿದೆ. ಇನ್ನು ಕಲಾಸಿಪಾಳ್ಯ ಮಾರ್ಕೆಟ್​ನಲ್ಲೂ […]

ಸಿಎಂ ಆದೇಶಕ್ಕೂ ಕವಡೆ ಕಾಸಿನ ಕಿಮ್ಮತ್ತಿಲ್ಲ, ಕೆ.ಆರ್ ಮಾರ್ಕೆಟ್, ಕಲಾಸಿಪಾಳ್ಯದಲ್ಲಿ ಜನಜಂಗುಳಿ
ಆಯೇಷಾ ಬಾನು
|

Updated on:Jun 23, 2020 | 8:31 AM

Share

ಬೆಂಗಳೂರು: ನಗರದಲ್ಲಿ ದಿನೇದಿನೆ ಕೊರೊನಾ ಕೇಸ್​ಗಳು ಏರಿಕೆಯಾಗುತ್ತಿದೆ. ಹೀಗಾಗಿ ಲಾಕ್​ಡೌನ್ ಬ್ರಹ್ಮಾಸ್ತ್ರ ಪ್ರಯೋಗಿಸಲು ಬಿಬಿಎಂಪಿ ಮುಂದಾಗಿತ್ತು. ನಿನ್ನೆ ಸಿಎಂ ಜೊತೆ ನಡೆದ ಸಭೆಯಲ್ಲಿ ಪ್ರಮುಖ ನಾಲ್ಕು ಏರಿಯಾಗಳನ್ನು ಸೀಲ್​ಡೌನ್ ಮಾಡಲು ಸೂಚಿಸಲಾಗಿತ್ತು.

ಆದ್ರೆ ಕೆ.ಆರ್​.ಮಾರುಕಟ್ಟೆಯಲ್ಲಿ ಸೀಲ್​​​ಡೌನ್​​ಗೆ ಕ್ಯಾರೇ ಅಂತಿಲ್ಲ ಜನ. ಎಲ್ಲಿ ನೋಡಿದ್ರೂ ಜನವೋ ಜನ ಕಂಡು ಬರ್ತಿದ್ದಾರೆ. ಬೆಳ್ಳಂಬೆಳಗ್ಗೆ ಕೆ.ಆರ್.ಮಾರುಕಟ್ಟೆಯಲ್ಲಿ ಭರ್ಜರಿ ವ್ಯಾಪಾರ ನಡೆಯುತ್ತಿದೆ. ಹೂ, ತರಕಾರಿ ಖರೀದಿಯಲ್ಲಿ ಜನ ಬ್ಯುಸಿಯಾಗಿದ್ದಾರೆ. ಸೀಲ್​​​ಡೌನ್ ಆದೇಶವಿದ್ದರೂ ಮಾರ್ಕೆಟ್​ನಲ್ಲಿ ಜನ ಜಾತ್ರೆ ಕಂಡು ಬಂದಿದೆ.

ಇನ್ನು ಕಲಾಸಿಪಾಳ್ಯ ಮಾರ್ಕೆಟ್​ನಲ್ಲೂ ಇದೇ ಪರಿಸ್ಥಿತಿ. ಎಂದಿನಂತೆ ತರಕಾರಿ ಖರೀದಿಸಲು ಜನರು ಮುಗಿಬಿದ್ದಿದ್ದಾರೆ. ಕಲಾಸಿಪಾಳ್ಯ ಭಾಗದಲ್ಲಿ 20ಕ್ಕೂ ಹೆಚ್ಚು ಕೊರೊನಾ ಕೇಸ್​ಗಳು ಪತ್ತೆಯಾಗಿವೆ. ದೈಹಿಕ ಅಂತರ ಇಲ್ಲದೆ ಜನರಿಂದ ಹೂ, ತರಕಾರಿ ಖರೀದಿಯಾಗುತ್ತಿದೆ. ಜನ ಮರುಳೋ ಜಾತ್ರೆ ಮರುಳೋ ಎಂಬಂತಿದೆ. ಇದನ್ನು ನೋಡಿದ್ರೆ ಸೀಲ್​ಡೌನ್- ಲಾಕ್​ಡೌನ್ ಮಾಡುವಲ್ಲಿ ಸರ್ಕಾರ ಹಿಂದೇಟು ಹಾಕ್ತಿರೋದೆಕೆ? ಈಗಾಗಲೇ 20 ಕ್ಕು ಹೆಚ್ಚು ಕೇಸ್​ಗಳು ಇರೂ ಭಾಗದಲ್ಲಿ ಬಿಬಿಎಂಪಿ ನಿರ್ಲಕ್ಷ್ಯ ತೋರಿಸುತ್ತಿರೋದ್ಯಾಕೆ ಎಂಬ ಪ್ರಶ್ನೆ ಎದ್ದಿದೆ.

ಕಲಾಸಿಪಾಳ್ಯ ಕೊನೆಗೂ ಸೀಲ್​ಡೌನ್: ಟಿವಿ9ನಲ್ಲಿ ವರದಿ ಪ್ರಸಾರ ಬಳಿಕ ಎಚ್ಚೆತ್ತ ಅಧಿಕಾರಿಗಳು ಕೆ.ಆರ್.ಮಾರ್ಕೆಟ್‌ನಲ್ಲಿ ವ್ಯಾಪಾರಸ್ಥರನ್ನು ತೆರವು ಮಾಡಿದ್ದಾರೆ. ಮಾರ್ಕೆಟ್‌ನ ಮುಖ್ಯರಸ್ತೆಗಳಿಗೆ ಬ್ಯಾರಿಕೇಡ್ ಹಾಕಿ ಬಂದ್ ಮಾಡಿದ್ದಾರೆ. ಮಾರುಕಟ್ಟೆಯ ಪ್ರತಿ ಅಂಗಡಿಗೆ ತೆರಳಿ ಬಾಗಿಲು ಹಾಕುವಂತೆ ತಿಳಿಸಿದ್ದಾರೆ. ಬಿಬಿಎಂಪಿ ಸಿಬ್ಬಂದಿ ಮಾರುಕಟ್ಟೆ ಅಂಗಳವನ್ನ ಗುಡಿಸಿ ಸ್ವಚ್ಛ ಮಾಡುತ್ತಿದ್ದಾರೆ. ಹಾಗೂ ಕಲಾಸಿಪಾಳ್ಯವನ್ನು ಬ್ಯಾರಿಕೇಡ್ ಹಾಕಿ ಸೀಲ್​ಡೌನ್ ಮಾಡಿದ್ದಾರೆ.

Published On - 8:07 am, Tue, 23 June 20

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?