AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಆದೇಶಕ್ಕೂ ಕವಡೆ ಕಾಸಿನ ಕಿಮ್ಮತ್ತಿಲ್ಲ, ಕೆ.ಆರ್ ಮಾರ್ಕೆಟ್, ಕಲಾಸಿಪಾಳ್ಯದಲ್ಲಿ ಜನಜಂಗುಳಿ

ಬೆಂಗಳೂರು: ನಗರದಲ್ಲಿ ದಿನೇದಿನೆ ಕೊರೊನಾ ಕೇಸ್​ಗಳು ಏರಿಕೆಯಾಗುತ್ತಿದೆ. ಹೀಗಾಗಿ ಲಾಕ್​ಡೌನ್ ಬ್ರಹ್ಮಾಸ್ತ್ರ ಪ್ರಯೋಗಿಸಲು ಬಿಬಿಎಂಪಿ ಮುಂದಾಗಿತ್ತು. ನಿನ್ನೆ ಸಿಎಂ ಜೊತೆ ನಡೆದ ಸಭೆಯಲ್ಲಿ ಪ್ರಮುಖ ನಾಲ್ಕು ಏರಿಯಾಗಳನ್ನು ಸೀಲ್​ಡೌನ್ ಮಾಡಲು ಸೂಚಿಸಲಾಗಿತ್ತು. ಆದ್ರೆ ಕೆ.ಆರ್​.ಮಾರುಕಟ್ಟೆಯಲ್ಲಿ ಸೀಲ್​​​ಡೌನ್​​ಗೆ ಕ್ಯಾರೇ ಅಂತಿಲ್ಲ ಜನ. ಎಲ್ಲಿ ನೋಡಿದ್ರೂ ಜನವೋ ಜನ ಕಂಡು ಬರ್ತಿದ್ದಾರೆ. ಬೆಳ್ಳಂಬೆಳಗ್ಗೆ ಕೆ.ಆರ್.ಮಾರುಕಟ್ಟೆಯಲ್ಲಿ ಭರ್ಜರಿ ವ್ಯಾಪಾರ ನಡೆಯುತ್ತಿದೆ. ಹೂ, ತರಕಾರಿ ಖರೀದಿಯಲ್ಲಿ ಜನ ಬ್ಯುಸಿಯಾಗಿದ್ದಾರೆ. ಸೀಲ್​​​ಡೌನ್ ಆದೇಶವಿದ್ದರೂ ಮಾರ್ಕೆಟ್​ನಲ್ಲಿ ಜನ ಜಾತ್ರೆ ಕಂಡು ಬಂದಿದೆ. ಇನ್ನು ಕಲಾಸಿಪಾಳ್ಯ ಮಾರ್ಕೆಟ್​ನಲ್ಲೂ […]

ಸಿಎಂ ಆದೇಶಕ್ಕೂ ಕವಡೆ ಕಾಸಿನ ಕಿಮ್ಮತ್ತಿಲ್ಲ, ಕೆ.ಆರ್ ಮಾರ್ಕೆಟ್, ಕಲಾಸಿಪಾಳ್ಯದಲ್ಲಿ ಜನಜಂಗುಳಿ
ಆಯೇಷಾ ಬಾನು
|

Updated on:Jun 23, 2020 | 8:31 AM

Share

ಬೆಂಗಳೂರು: ನಗರದಲ್ಲಿ ದಿನೇದಿನೆ ಕೊರೊನಾ ಕೇಸ್​ಗಳು ಏರಿಕೆಯಾಗುತ್ತಿದೆ. ಹೀಗಾಗಿ ಲಾಕ್​ಡೌನ್ ಬ್ರಹ್ಮಾಸ್ತ್ರ ಪ್ರಯೋಗಿಸಲು ಬಿಬಿಎಂಪಿ ಮುಂದಾಗಿತ್ತು. ನಿನ್ನೆ ಸಿಎಂ ಜೊತೆ ನಡೆದ ಸಭೆಯಲ್ಲಿ ಪ್ರಮುಖ ನಾಲ್ಕು ಏರಿಯಾಗಳನ್ನು ಸೀಲ್​ಡೌನ್ ಮಾಡಲು ಸೂಚಿಸಲಾಗಿತ್ತು.

ಆದ್ರೆ ಕೆ.ಆರ್​.ಮಾರುಕಟ್ಟೆಯಲ್ಲಿ ಸೀಲ್​​​ಡೌನ್​​ಗೆ ಕ್ಯಾರೇ ಅಂತಿಲ್ಲ ಜನ. ಎಲ್ಲಿ ನೋಡಿದ್ರೂ ಜನವೋ ಜನ ಕಂಡು ಬರ್ತಿದ್ದಾರೆ. ಬೆಳ್ಳಂಬೆಳಗ್ಗೆ ಕೆ.ಆರ್.ಮಾರುಕಟ್ಟೆಯಲ್ಲಿ ಭರ್ಜರಿ ವ್ಯಾಪಾರ ನಡೆಯುತ್ತಿದೆ. ಹೂ, ತರಕಾರಿ ಖರೀದಿಯಲ್ಲಿ ಜನ ಬ್ಯುಸಿಯಾಗಿದ್ದಾರೆ. ಸೀಲ್​​​ಡೌನ್ ಆದೇಶವಿದ್ದರೂ ಮಾರ್ಕೆಟ್​ನಲ್ಲಿ ಜನ ಜಾತ್ರೆ ಕಂಡು ಬಂದಿದೆ.

ಇನ್ನು ಕಲಾಸಿಪಾಳ್ಯ ಮಾರ್ಕೆಟ್​ನಲ್ಲೂ ಇದೇ ಪರಿಸ್ಥಿತಿ. ಎಂದಿನಂತೆ ತರಕಾರಿ ಖರೀದಿಸಲು ಜನರು ಮುಗಿಬಿದ್ದಿದ್ದಾರೆ. ಕಲಾಸಿಪಾಳ್ಯ ಭಾಗದಲ್ಲಿ 20ಕ್ಕೂ ಹೆಚ್ಚು ಕೊರೊನಾ ಕೇಸ್​ಗಳು ಪತ್ತೆಯಾಗಿವೆ. ದೈಹಿಕ ಅಂತರ ಇಲ್ಲದೆ ಜನರಿಂದ ಹೂ, ತರಕಾರಿ ಖರೀದಿಯಾಗುತ್ತಿದೆ. ಜನ ಮರುಳೋ ಜಾತ್ರೆ ಮರುಳೋ ಎಂಬಂತಿದೆ. ಇದನ್ನು ನೋಡಿದ್ರೆ ಸೀಲ್​ಡೌನ್- ಲಾಕ್​ಡೌನ್ ಮಾಡುವಲ್ಲಿ ಸರ್ಕಾರ ಹಿಂದೇಟು ಹಾಕ್ತಿರೋದೆಕೆ? ಈಗಾಗಲೇ 20 ಕ್ಕು ಹೆಚ್ಚು ಕೇಸ್​ಗಳು ಇರೂ ಭಾಗದಲ್ಲಿ ಬಿಬಿಎಂಪಿ ನಿರ್ಲಕ್ಷ್ಯ ತೋರಿಸುತ್ತಿರೋದ್ಯಾಕೆ ಎಂಬ ಪ್ರಶ್ನೆ ಎದ್ದಿದೆ.

ಕಲಾಸಿಪಾಳ್ಯ ಕೊನೆಗೂ ಸೀಲ್​ಡೌನ್: ಟಿವಿ9ನಲ್ಲಿ ವರದಿ ಪ್ರಸಾರ ಬಳಿಕ ಎಚ್ಚೆತ್ತ ಅಧಿಕಾರಿಗಳು ಕೆ.ಆರ್.ಮಾರ್ಕೆಟ್‌ನಲ್ಲಿ ವ್ಯಾಪಾರಸ್ಥರನ್ನು ತೆರವು ಮಾಡಿದ್ದಾರೆ. ಮಾರ್ಕೆಟ್‌ನ ಮುಖ್ಯರಸ್ತೆಗಳಿಗೆ ಬ್ಯಾರಿಕೇಡ್ ಹಾಕಿ ಬಂದ್ ಮಾಡಿದ್ದಾರೆ. ಮಾರುಕಟ್ಟೆಯ ಪ್ರತಿ ಅಂಗಡಿಗೆ ತೆರಳಿ ಬಾಗಿಲು ಹಾಕುವಂತೆ ತಿಳಿಸಿದ್ದಾರೆ. ಬಿಬಿಎಂಪಿ ಸಿಬ್ಬಂದಿ ಮಾರುಕಟ್ಟೆ ಅಂಗಳವನ್ನ ಗುಡಿಸಿ ಸ್ವಚ್ಛ ಮಾಡುತ್ತಿದ್ದಾರೆ. ಹಾಗೂ ಕಲಾಸಿಪಾಳ್ಯವನ್ನು ಬ್ಯಾರಿಕೇಡ್ ಹಾಕಿ ಸೀಲ್​ಡೌನ್ ಮಾಡಿದ್ದಾರೆ.

Published On - 8:07 am, Tue, 23 June 20

ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ