AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಆದೇಶಕ್ಕೂ ಕವಡೆ ಕಾಸಿನ ಕಿಮ್ಮತ್ತಿಲ್ಲ, ಕೆ.ಆರ್ ಮಾರ್ಕೆಟ್, ಕಲಾಸಿಪಾಳ್ಯದಲ್ಲಿ ಜನಜಂಗುಳಿ

ಬೆಂಗಳೂರು: ನಗರದಲ್ಲಿ ದಿನೇದಿನೆ ಕೊರೊನಾ ಕೇಸ್​ಗಳು ಏರಿಕೆಯಾಗುತ್ತಿದೆ. ಹೀಗಾಗಿ ಲಾಕ್​ಡೌನ್ ಬ್ರಹ್ಮಾಸ್ತ್ರ ಪ್ರಯೋಗಿಸಲು ಬಿಬಿಎಂಪಿ ಮುಂದಾಗಿತ್ತು. ನಿನ್ನೆ ಸಿಎಂ ಜೊತೆ ನಡೆದ ಸಭೆಯಲ್ಲಿ ಪ್ರಮುಖ ನಾಲ್ಕು ಏರಿಯಾಗಳನ್ನು ಸೀಲ್​ಡೌನ್ ಮಾಡಲು ಸೂಚಿಸಲಾಗಿತ್ತು. ಆದ್ರೆ ಕೆ.ಆರ್​.ಮಾರುಕಟ್ಟೆಯಲ್ಲಿ ಸೀಲ್​​​ಡೌನ್​​ಗೆ ಕ್ಯಾರೇ ಅಂತಿಲ್ಲ ಜನ. ಎಲ್ಲಿ ನೋಡಿದ್ರೂ ಜನವೋ ಜನ ಕಂಡು ಬರ್ತಿದ್ದಾರೆ. ಬೆಳ್ಳಂಬೆಳಗ್ಗೆ ಕೆ.ಆರ್.ಮಾರುಕಟ್ಟೆಯಲ್ಲಿ ಭರ್ಜರಿ ವ್ಯಾಪಾರ ನಡೆಯುತ್ತಿದೆ. ಹೂ, ತರಕಾರಿ ಖರೀದಿಯಲ್ಲಿ ಜನ ಬ್ಯುಸಿಯಾಗಿದ್ದಾರೆ. ಸೀಲ್​​​ಡೌನ್ ಆದೇಶವಿದ್ದರೂ ಮಾರ್ಕೆಟ್​ನಲ್ಲಿ ಜನ ಜಾತ್ರೆ ಕಂಡು ಬಂದಿದೆ. ಇನ್ನು ಕಲಾಸಿಪಾಳ್ಯ ಮಾರ್ಕೆಟ್​ನಲ್ಲೂ […]

ಸಿಎಂ ಆದೇಶಕ್ಕೂ ಕವಡೆ ಕಾಸಿನ ಕಿಮ್ಮತ್ತಿಲ್ಲ, ಕೆ.ಆರ್ ಮಾರ್ಕೆಟ್, ಕಲಾಸಿಪಾಳ್ಯದಲ್ಲಿ ಜನಜಂಗುಳಿ
ಆಯೇಷಾ ಬಾನು
|

Updated on:Jun 23, 2020 | 8:31 AM

Share

ಬೆಂಗಳೂರು: ನಗರದಲ್ಲಿ ದಿನೇದಿನೆ ಕೊರೊನಾ ಕೇಸ್​ಗಳು ಏರಿಕೆಯಾಗುತ್ತಿದೆ. ಹೀಗಾಗಿ ಲಾಕ್​ಡೌನ್ ಬ್ರಹ್ಮಾಸ್ತ್ರ ಪ್ರಯೋಗಿಸಲು ಬಿಬಿಎಂಪಿ ಮುಂದಾಗಿತ್ತು. ನಿನ್ನೆ ಸಿಎಂ ಜೊತೆ ನಡೆದ ಸಭೆಯಲ್ಲಿ ಪ್ರಮುಖ ನಾಲ್ಕು ಏರಿಯಾಗಳನ್ನು ಸೀಲ್​ಡೌನ್ ಮಾಡಲು ಸೂಚಿಸಲಾಗಿತ್ತು.

ಆದ್ರೆ ಕೆ.ಆರ್​.ಮಾರುಕಟ್ಟೆಯಲ್ಲಿ ಸೀಲ್​​​ಡೌನ್​​ಗೆ ಕ್ಯಾರೇ ಅಂತಿಲ್ಲ ಜನ. ಎಲ್ಲಿ ನೋಡಿದ್ರೂ ಜನವೋ ಜನ ಕಂಡು ಬರ್ತಿದ್ದಾರೆ. ಬೆಳ್ಳಂಬೆಳಗ್ಗೆ ಕೆ.ಆರ್.ಮಾರುಕಟ್ಟೆಯಲ್ಲಿ ಭರ್ಜರಿ ವ್ಯಾಪಾರ ನಡೆಯುತ್ತಿದೆ. ಹೂ, ತರಕಾರಿ ಖರೀದಿಯಲ್ಲಿ ಜನ ಬ್ಯುಸಿಯಾಗಿದ್ದಾರೆ. ಸೀಲ್​​​ಡೌನ್ ಆದೇಶವಿದ್ದರೂ ಮಾರ್ಕೆಟ್​ನಲ್ಲಿ ಜನ ಜಾತ್ರೆ ಕಂಡು ಬಂದಿದೆ.

ಇನ್ನು ಕಲಾಸಿಪಾಳ್ಯ ಮಾರ್ಕೆಟ್​ನಲ್ಲೂ ಇದೇ ಪರಿಸ್ಥಿತಿ. ಎಂದಿನಂತೆ ತರಕಾರಿ ಖರೀದಿಸಲು ಜನರು ಮುಗಿಬಿದ್ದಿದ್ದಾರೆ. ಕಲಾಸಿಪಾಳ್ಯ ಭಾಗದಲ್ಲಿ 20ಕ್ಕೂ ಹೆಚ್ಚು ಕೊರೊನಾ ಕೇಸ್​ಗಳು ಪತ್ತೆಯಾಗಿವೆ. ದೈಹಿಕ ಅಂತರ ಇಲ್ಲದೆ ಜನರಿಂದ ಹೂ, ತರಕಾರಿ ಖರೀದಿಯಾಗುತ್ತಿದೆ. ಜನ ಮರುಳೋ ಜಾತ್ರೆ ಮರುಳೋ ಎಂಬಂತಿದೆ. ಇದನ್ನು ನೋಡಿದ್ರೆ ಸೀಲ್​ಡೌನ್- ಲಾಕ್​ಡೌನ್ ಮಾಡುವಲ್ಲಿ ಸರ್ಕಾರ ಹಿಂದೇಟು ಹಾಕ್ತಿರೋದೆಕೆ? ಈಗಾಗಲೇ 20 ಕ್ಕು ಹೆಚ್ಚು ಕೇಸ್​ಗಳು ಇರೂ ಭಾಗದಲ್ಲಿ ಬಿಬಿಎಂಪಿ ನಿರ್ಲಕ್ಷ್ಯ ತೋರಿಸುತ್ತಿರೋದ್ಯಾಕೆ ಎಂಬ ಪ್ರಶ್ನೆ ಎದ್ದಿದೆ.

ಕಲಾಸಿಪಾಳ್ಯ ಕೊನೆಗೂ ಸೀಲ್​ಡೌನ್: ಟಿವಿ9ನಲ್ಲಿ ವರದಿ ಪ್ರಸಾರ ಬಳಿಕ ಎಚ್ಚೆತ್ತ ಅಧಿಕಾರಿಗಳು ಕೆ.ಆರ್.ಮಾರ್ಕೆಟ್‌ನಲ್ಲಿ ವ್ಯಾಪಾರಸ್ಥರನ್ನು ತೆರವು ಮಾಡಿದ್ದಾರೆ. ಮಾರ್ಕೆಟ್‌ನ ಮುಖ್ಯರಸ್ತೆಗಳಿಗೆ ಬ್ಯಾರಿಕೇಡ್ ಹಾಕಿ ಬಂದ್ ಮಾಡಿದ್ದಾರೆ. ಮಾರುಕಟ್ಟೆಯ ಪ್ರತಿ ಅಂಗಡಿಗೆ ತೆರಳಿ ಬಾಗಿಲು ಹಾಕುವಂತೆ ತಿಳಿಸಿದ್ದಾರೆ. ಬಿಬಿಎಂಪಿ ಸಿಬ್ಬಂದಿ ಮಾರುಕಟ್ಟೆ ಅಂಗಳವನ್ನ ಗುಡಿಸಿ ಸ್ವಚ್ಛ ಮಾಡುತ್ತಿದ್ದಾರೆ. ಹಾಗೂ ಕಲಾಸಿಪಾಳ್ಯವನ್ನು ಬ್ಯಾರಿಕೇಡ್ ಹಾಕಿ ಸೀಲ್​ಡೌನ್ ಮಾಡಿದ್ದಾರೆ.

Published On - 8:07 am, Tue, 23 June 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್