ನಗರಸಭೆ ಅರಾಜಕತೆ, ಸರ್ಕಾರಿ ರೇಷ್ಮೆಗೂಡಿನ ಮಾರುಕಟ್ಟೆ ಸ್ಥಳಾಂತರ ವಿರೋಧಿಸಿ ಇಂದು ರಾಮನಗರ ಬಂದ್

ಜಿಲ್ಲೆಯ ನಗರಸಭೆ ಅರಾಜಕತೆ ಹಾಗೂ ರಾಮನಗರದ ಸರ್ಕಾರಿ ರೇಷ್ಮೆಗೂಡಿನ ಮಾರುಕಟ್ಟೆ ಸ್ಥಳಾಂತರ ವಿರೋಧಿಸಿ ಇಂದು ರಾಮನಗರ ನಗರ ಬಂದ್​ಗೆ ಕರೆ ನೀಡಲಾಗಗಿದೆ.

ನಗರಸಭೆ ಅರಾಜಕತೆ, ಸರ್ಕಾರಿ ರೇಷ್ಮೆಗೂಡಿನ ಮಾರುಕಟ್ಟೆ ಸ್ಥಳಾಂತರ ವಿರೋಧಿಸಿ ಇಂದು ರಾಮನಗರ ಬಂದ್
ರಾಮನಗರ ಬಂದ್​

Updated on: Feb 20, 2021 | 9:34 AM

ರಾಮನಗರ: ಜಿಲ್ಲೆಯ ನಗರಸಭೆ ಅರಾಜಕತೆ ಹಾಗೂ ರಾಮನಗರದ ಸರ್ಕಾರಿ ರೇಷ್ಮೆಗೂಡಿನ ಮಾರುಕಟ್ಟೆ ಸ್ಥಳಾಂತರ ವಿರೋಧಿಸಿ ಇಂದು ರಾಮನಗರ ನಗರ ಬಂದ್​ಗೆ ಕರೆ ನೀಡಲಾಗಗಿದೆ. ಜಾನ ಜಾಗೃತಿ ವೇದಿಕೆವತಿಯಿಂದ ಬಂದ್​ಗೆ ಕರೆ ನೀಡಲಾಗಿದ್ದು, ಬಂದ್ ಹಿನ್ನೆಲೆಯಿಂದಾಗಿ ಬೆಳಗ್ಗೆಯಿಂದಲೇ ಅಂಗಡಿ ಮುಂಗಟ್ಟುಗಳು ಮುಚ್ಚಿವೆ.

ವ್ಯಾಪರಸ್ಥರು ಸ್ವಯಂ ಪ್ರೇರಿತವಾಗಿ ಅಂಗಡಿಗಳನ್ನ ಬಂದ್ ಮಾಡಿದ್ದಾರೆ. ಬಂದ್ ಹಿನ್ನೆಲೆಯಿಂದಾಗಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಈಗಾಗಲೇ ನಗರಸಭಾ ವ್ಯಾಪ್ತಿಯಲ್ಲಿ ನಿಷೇಧಾಜ್ಷೆ ಜಾರಿಯಾಗಿದೆ. ಅಲ್ಲದೆ ಬಂದ್​ಗೆ ಮಾಜಿ ಸಿಎಂ ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ರಾಮನಗರ ನಗರ ಬಂದ್ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ಈಗಾಗಲೇ ನಗರದಾದ್ಯಂತ ಬೈಕ್ ರ್ಯಾಲಿ‌ ನಡೆಸಿ ಬಂದ್​ಗೆ ಬೆಂಬಲ ವ್ಯಕ್ತಪಡಿಸುವಂತೆ ಮನವಿ ಮಾಡಲಾಗಿತ್ತು.

Published On - 9:15 am, Sat, 20 February 21

pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us