AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ನಿಂದ ರಾಜಭವನ ಚಲೋ.. ಟ್ರಾಫಿಕ್ ಜಾಮ್ ಸಮಸ್ಯೆ, ಪೊಲೀಸರಿಂದ ಪರ್ಯಾಯ ಮಾರ್ಗ

ಬೆಂಗಳೂರಿನ ಕೆಲ ಮಾರ್ಗಗಳಲ್ಲಿ ವಾಹನ ಸಂಚಾರ ಬದಲಾವಣೆ ಮಾಡಲಾಗಿದೆ. ಕಾರ್ಪೊರೇಷನ್, ವಿಧಾನಸೌಧ, ಬನಶಂಕರಿಯತ್ತ ತೆರಳುವ ವಾಹನಗಳ ಸಂಚಾರ ಮಾರ್ಗ ಬದಲಾಯಿಸಿಲಾಗಿದೆ. ಓಕಳಿಪುರಂ ಜಂಕ್ಷನ್‌ಗೆ ವಾಹನಗಳಿಗೆ ಪ್ರವೇಶ ಇಲ್ಲ. ಓಕಳಿಪುರಂನಿಂದ ಕೃಷ್ಣ ಫ್ಲೋರ್ ಮಿಲ್ ಕಡೆ ಡೈವರ್ಟ್ ಮಾಡಲಾಗಿದೆ.

ಕಾಂಗ್ರೆಸ್​ನಿಂದ ರಾಜಭವನ ಚಲೋ.. ಟ್ರಾಫಿಕ್ ಜಾಮ್ ಸಮಸ್ಯೆ, ಪೊಲೀಸರಿಂದ ಪರ್ಯಾಯ ಮಾರ್ಗ
ಸಂಗ್ರಹ ಚಿತ್ರ
ಆಯೇಷಾ ಬಾನು
|

Updated on: Jan 20, 2021 | 9:50 AM

Share

ಬೆಂಗಳೂರು: ಸಿಲಿಕಾನ್ ಸಿಟಿಯಲಿಂದು ಕಾಂಗ್ರೆಸ್​ನಿಂದ ಬೃಹತ್ ಪ್ರತಿಭಟನಾ ಱಲಿ ಹಮ್ಮಿಕೊಳ್ಳಲಾಗಿದೆ. ಕೃಷಿ ಕಾಯ್ದೆ, ಬೆಲೆ ಏರಿಕೆ ಖಂಡಿಸಿ ರಾಜಭವನ ಚಲೋ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಪರ್ಯಾಯ ಮಾರ್ಗ ಕಂಡುಕೊಂಡಿದ್ದಾರೆ.

ಬೆಂಗಳೂರಿನ ಕೆಲ ಮಾರ್ಗಗಳಲ್ಲಿ ವಾಹನ ಸಂಚಾರ ಬದಲಾವಣೆ ಮಾಡಲಾಗಿದೆ. ಕಾರ್ಪೊರೇಷನ್, ವಿಧಾನಸೌಧ, ಬನಶಂಕರಿಯತ್ತ ತೆರಳುವ ವಾಹನಗಳ ಸಂಚಾರ ಮಾರ್ಗ ಬದಲಾಯಿಸಲಾಗಿದೆ. ಓಕಳಿಪುರಂ ಜಂಕ್ಷನ್‌ಗೆ ವಾಹನಗಳಿಗೆ ಪ್ರವೇಶ ಇಲ್ಲ. ಓಕಳಿಪುರಂನಿಂದ ಕೃಷ್ಣ ಫ್ಲೋರ್ ಮಿಲ್ ಕಡೆ ಡೈವರ್ಟ್ ಮಾಡಲಾಗಿದೆ. ಶಾಂತಲಾ ಸಿಲ್ಕ್ ನಿಂದ ಮೆಜೆಸ್ಟಿಕ್ ಗೆ ಬರುವ ವಾಹನ ಡೈವರ್ಟ್ ಮಾಡಲಾಗಿದೆ. ಮಲ್ಲೇಶ್ವರಂ ಸರ್ಕಲ್‌ನಲ್ಲಿಯೇ ವಾಹನಗಳ ಡೈವರ್ಟ್ ಮಾಡಲಾಗಿದ್ದು ರೇಸ್‌ಕೋರ್ಸ್ ರಸ್ತೆ ಮೂಲಕ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಱಲಿ ಆರಂಭವಾಗುತ್ತಿದ್ದಂತೆ ಕೆಲ ರಸ್ತೆಗಳಲ್ಲಿ ಸಂಚಾರ ಬಂದ್ ಆಗಿದೆ. ಕೆಎಸ್ಆರ್ ರೈಲ್ವೆ ನಿಲ್ದಾಣದಿಂದ ಇಂದು ಱಲಿ ಆರಂಭವಾಗುತ್ತಿದ್ದಂತೆ ಶೇಷಾದ್ರಿ ರೋಡ್ ಕ್ಲೋಸ್ ಆಗಿದೆ. ಟ್ರಾಫಿಕ್ ನಿಯಂತ್ರಣಕ್ಕೆ 220 ಟ್ರಾಫಿಕ್ ಪೊಲೀಸರ ನಿಯೋಜನೆ ಮಾಡಲಾಗಿದೆ.

ರಾಜಧಾನಿ ಬೆಂಗಳೂರಲ್ಲಿ ಪೊಲೀಸ್ ಬಿಗಿಬಂದೋಬಸ್ತ್ ಸಿಟಿ ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್ ವರೆಗೂ ಭದ್ರತೆ ಕೈಗೊಳ್ಳಲಾಗಿದೆ. ಪಶ್ಚಿಮ ವಿಭಾಗ ಡಿಸಿಪಿ, ಕೇಂದ್ರ ವಿಭಾಗ ಡಿಸಿಪಿ ನೇತೃತ್ವದಲ್ಲಿ 500ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. 6ಕ್ಕೂ ಹೆಚ್ಚು ಕೆಎಸ್​ಆರ್​​ಪಿ ತುಕಡಿ ನಿಯೋಜನೆಗೊಂಡಿದೆ.

ಕೃಷಿ ಕಾಯಿದೆ ವಿರೋಧಿಸಿ ಬೆಂಗಳೂರಿನಲ್ಲಿ ಮೊಳಗಲಿದೆ ‘ಕೈ’ ನಾಯಕರ ಕಹಳೆ, ಮೆಜೆಸ್ಟಿಕ್ ಸುತ್ತಮುತ್ತ ಟ್ರಾಫಿಕ್ ಜಾಮ್

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್