AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಯಣ ನಂತರ ಶಿರೂರು ಮಠಕ್ಕೆ ಉತ್ತರಾಧಿಕಾರಿ ಘೋಷಣೆ -ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ

ಶಿರೂರು ಮಠಕ್ಕೆ ಉತ್ತರಾಯಣ ನಂತರ ಉತ್ತರಾಧಿಕಾರಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಸೋದೆ ಮಠಾಧೀಶ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಘೋಷಣೆ ಮಾಡಿದ್ದಾರೆ.

ಉತ್ತರಾಯಣ ನಂತರ ಶಿರೂರು ಮಠಕ್ಕೆ ಉತ್ತರಾಧಿಕಾರಿ ಘೋಷಣೆ -ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ
ಆಯೇಷಾ ಬಾನು
ಆಯೇಷಾ ಬಾನು|

Updated on: Dec 06, 2020 | 11:49 AM

Share

ಉಡುಪಿ: ಜಿಲ್ಲೆಯ ಶಿರೂರು ಮಠಕ್ಕೆ ಉತ್ತರಾಯಣ ನಂತರ ಉತ್ತರಾಧಿಕಾರಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಸೋದೆ ಮಠಾಧೀಶ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಘೋಷಣೆ ಮಾಡಿದ್ದಾರೆ.

ಉಡುಪಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಶಿರೂರು ಮಠಕ್ಕೆ ಉತ್ತರಾಧಿಕಾರಿ ಯಾರು ಎಂಬ ನಿರೀಕ್ಷೆ ಎಲ್ಲರಲ್ಲಿತ್ತು. ಉತ್ತರಾಧಿಕಾರಿ ಮಕರ ಸಂಕ್ರಾಂತಿಯ ಉತ್ತರಾಯಣ ನಂತರ ಆಗಲಿದೆ. ಯೋಗ್ಯ ವಟುವನ್ನು ಆಯ್ಕೆ ಮಾಡಲಾಗಿದೆ. ಆ ವಟುವಿಗೆ ಈಗ ತರಬೇತಿ ನಡೆಯುತ್ತಿದೆ. ಮುಂದಿನ ವರ್ಷದ ಉತ್ತರಾಯಣದಲ್ಲಿ ಅವರಿಗೆ ಪಟ್ಟಾಭಿಷೇಕ ನಡೆಯಲಿದೆ.

ಶಿರೂರು ಮಠದ ಭಕ್ತರ ಸಹಕಾರದಿಂದ, ಅಷ್ಟ ಮಠದ ಹಿರಿಯ ಯತಿಗಳ ಸಹಕಾರ, ಪ್ರೋತ್ಸಾಹದಿಂದ ಶೀರೂರು ಮಠ ಉತ್ತಮ ಸ್ಥಿತಿಯಲ್ಲಿ ಮುನ್ನಡೆಯಬೇಕು ಎಂಬುವುದು ನನ್ನ ದೇವರಲ್ಲಿ ಪ್ರಾರ್ಥನೆ. ಉತ್ತರಾಧಿಕಾರಿ ಯಾರು ಎಂದು ಮುಂದಿನ ದಿನಗಳಲ್ಲಿ ಘೋಷಣೆ ಮಾಡುತ್ತೇನೆ. ಈಗಲೇ ಘೋಷಣೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.

ಲಕ್ಷ್ಮೀವರ ತೀರ್ಥರ ಕೃಷ್ಣೈಕ್ಯರಾದ ನಂತರ ತೆರವಾಗಿದ್ದ ಪೀಠ, ಜುಲೈ 19,2018 ರಿಂದ ಖಾಲಿಯಾಗಿತ್ತು. ಶೀರೂರು ಮಠದ ಆರ್ಥಿಕ ಸಂಕಷ್ಟಗಳಿಗೂ ಪರಿಹಾರ ಕಂಡುಕೊಳ್ಳಲಾಗುತ್ತಿದೆ. ಮಠದ ತೆರಿಗೆ ಬಾಕಿ, ಕಟ್ಟಡ ವಿವಾದ ಇತ್ಯರ್ಥ ಆಗುವ ಭರವಸೆ ಇದೆ ಎಂದು ಸೋದೆ ಮಠಾಧೀಶ ವಿಶ್ವವಲ್ಲಭ ತೀರ್ಥರು ತಿಳಿಸಿದ್ರು.

Follow Us
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ