AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಿಲ್‌ಕುಮಾರ್‌ ಎತ್ತಂಗಡಿಗೆ ಒಂದೇ ಕಾರಣ ಇಲ್ವಂತೆ, ಹಾಗಿದ್ರೆ ಇನ್ನೆಷ್ಟು ಕಾರಣ?

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ವಿಪತ್ತು ಎದುರಿಸುವಲ್ಲಿ ಹೈಕೋರ್ಟ್‌ನಿಂದ ಮತ್ತು ಸಾರ್ವಜನಿಕರಿಂದ ತೀವ್ರ ಮುಜುಗರ ಅನುಭವಿಸಿದ ರಾಜ್ಯ ಸರ್ಕಾರ ಬಿಬಿಎಂಪಿ ಆಯುಕ್ತ ಅನಿಲ್‌ಕುಮಾರ್‌ ಅವರನ್ನು ಎತ್ತಂಗಡಿ ಮಾಡಿದೆ. ಆದ್ರೆ ರಾಜ್ಯ ಸರ್ಕಾರದ ಹಿರಿಯ ಸಚಿವ ಸುರೇಶ್‌ಕುಮಾರ್‌ ಮಾತ್ರ, ಅನಿಲ್‌ಕುಮಾರ್‌ ವರ್ಗಾವಣೆಗೆ ಅದೊಂದೆ ಕಾರಣವಲ್ಲ ಎನ್ನುವ ಮೂಲಕ ಕುತೂಹಲಕಾರಿ ಸ್ಟೇಟ್‌ಮೆಂಟ್‌ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಸುರೇಶ್‌ಕುಮಾರ್‌, ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ವರ್ಗಾವಣೆಗೆ ಕೇವಲ ಒಂದೇ ವಿಚಾರ ಇಲ್ಲ, ಹೈಕೋರ್ಟ್ ನಲ್ಲಿ ಬಿಬಿಎಂಪಿ ಬಗ್ಗೆ ಕೆಲವು […]

ಅನಿಲ್‌ಕುಮಾರ್‌ ಎತ್ತಂಗಡಿಗೆ ಒಂದೇ ಕಾರಣ ಇಲ್ವಂತೆ, ಹಾಗಿದ್ರೆ ಇನ್ನೆಷ್ಟು ಕಾರಣ?
Guru
| Edited By: |

Updated on: Jul 18, 2020 | 6:53 PM

Share

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ವಿಪತ್ತು ಎದುರಿಸುವಲ್ಲಿ ಹೈಕೋರ್ಟ್‌ನಿಂದ ಮತ್ತು ಸಾರ್ವಜನಿಕರಿಂದ ತೀವ್ರ ಮುಜುಗರ ಅನುಭವಿಸಿದ ರಾಜ್ಯ ಸರ್ಕಾರ ಬಿಬಿಎಂಪಿ ಆಯುಕ್ತ ಅನಿಲ್‌ಕುಮಾರ್‌ ಅವರನ್ನು ಎತ್ತಂಗಡಿ ಮಾಡಿದೆ. ಆದ್ರೆ ರಾಜ್ಯ ಸರ್ಕಾರದ ಹಿರಿಯ ಸಚಿವ ಸುರೇಶ್‌ಕುಮಾರ್‌ ಮಾತ್ರ, ಅನಿಲ್‌ಕುಮಾರ್‌ ವರ್ಗಾವಣೆಗೆ ಅದೊಂದೆ ಕಾರಣವಲ್ಲ ಎನ್ನುವ ಮೂಲಕ ಕುತೂಹಲಕಾರಿ ಸ್ಟೇಟ್‌ಮೆಂಟ್‌ ನೀಡಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಸುರೇಶ್‌ಕುಮಾರ್‌, ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ವರ್ಗಾವಣೆಗೆ ಕೇವಲ ಒಂದೇ ವಿಚಾರ ಇಲ್ಲ, ಹೈಕೋರ್ಟ್ ನಲ್ಲಿ ಬಿಬಿಎಂಪಿ ಬಗ್ಗೆ ಕೆಲವು ಘಟನೆಗಳಾಗಿವೆ. ಜೊತೆಗೆ ಮಂಜುನಾಥ್ ಪ್ರಸಾದ್‌ಗೆ ಕೂಡಾ ಈ ಹಿಂದೆ ಆಯುಕ್ತರಾಗಿ ಕಾರ್ಯನಿರ್ವಹಿಸಿದ ಅನುಭವ ಇದೆ, ಅಧಿಕಾರಿಗಳಿಗೆ ಯಾವುದೇ ಹುದ್ದೆ ಶಾಶ್ವತ ಅಲ್ಲ, ಯಾವ್ಯಾವ ಅಧಿಕಾರಿ ಎಲ್ಲಿ ಕೆಲಸ ಮಾಡಬೇಕು ಅನ್ನೋದು ಸಿಎಂ ವಿವೇಚನೆಗೆ ಬಿಟ್ಟ ನಿರ್ಧಾರ, ಇದು ಎಲ್ಲರ ಸಹಮತದ ಪ್ರಶ್ನೆ ಅಲ್ಲ ಎನ್ನುವ ಮೂಲಕ ಅದು ಕೇವಲ ಸಿಎಂ ಅವರ ನಿರ್ಧಾರ ಎಂದು ಪರೋಕ್ಷವಾಗಿ ತಿಳಿಸಿದ್ದಾರೆ.

ಕೋರ್ಟ್ ತೀರ್ಪು, ಕೋವಿಡ್ ಸ್ಥಿತಿ ಆಧರಿಸಿ ಸಿಎಂ ಆದೇಶ ಮಾಡಿದ್ದಾರೆ.  ಅನಿಲ್ ಕುಮಾರ್ ಸಮರ್ಥ ಅಧಿಕಾರಿಯಾಗಿದ್ದರು ಹಾಗೇನೇ ಮಂಜುನಾಥ್ ಪ್ರಸಾದ್ ಕೂಡಾ ಸಮರ್ಥರಿದ್ದಾರೆ ಎಂದು ಅಡ್ಡಗೊಡೆ ಮೇಲೆ ದೀಪ ಇಟ್ಟಂತೆ ತಮಗೂ ವರ್ಗಾವಣೆಗೂ ಯಾವುದೇ ಸಂಬಂಧವಿಲ್ಲ ಎಂದು ಸೂಚ್ಯವಾಗಿ ಹೊರಹಾಕಿದ್ದಾರೆ.

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ