AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Closing Bell: ಒಂದೇ ದಿನದಲ್ಲಿ ಹೂಡಿಕೆದಾರರ ಸಂಪತ್ತು 2.7 ಲಕ್ಷ ಕೋಟಿ ರೂ. ಹೆಚ್ಚಳ

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಹಾಗೂ ನಿಫ್ಟಿ ಬುಧವಾರದಂದು ಭರ್ಜರಿ ಏರಿಕೆ ದಾಖಲಿಸಿದವು. ಬಿಎಸ್​​ಇ ಲಿಸ್ಟೆಡ್ ಕಂಪೆನಿಗಳ ಮಾರುಕಟ್ಟೆ ಮೌಲ್ಯ 201.38 ಲಕ್ಷ ಕೋಟಿ ರೂಪಾಯಿಯಿಂದ 204.03 ಲಕ್ಷ ಕೋಟಿ ರೂಪಾಯಿಗೆ ಜಿಗಿಯಿತು. ಹೂಡಿಕೆದಾರರ ಸಂಪತ್ತು 2.7 ಲಕ್ಷ ಕೋಟಿ ರೂಪಾಯಿ ಹೆಚ್ಚಳವಾಯಿತು.

Closing Bell: ಒಂದೇ ದಿನದಲ್ಲಿ ಹೂಡಿಕೆದಾರರ ಸಂಪತ್ತು 2.7 ಲಕ್ಷ ಕೋಟಿ ರೂ. ಹೆಚ್ಚಳ
ಲಾಭದ ನಗದು
Srinivas Mata
| Edited By: |

Updated on:Feb 24, 2021 | 10:24 PM

Share

ಬ್ಯಾಂಕಿಂಗ್ ಮತ್ತು ಹಣಕಾಸು ವಲಯದ ಷೇರುಗಳ ಗಳಿಕೆಯಿಂದಾಗಿ ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಹಾಗೂ ನಿಫ್ಟಿ ಬುಧವಾರದಂದು ಭರ್ಜರಿ ಏರಿಕೆ ದಾಖಲಿಸಿದವು. ಬಿಎಸ್​​ಇ ಲಿಸ್ಟೆಡ್ ಕಂಪೆನಿಗಳ ಮಾರುಕಟ್ಟೆ ಮೌಲ್ಯ 201.38 ಲಕ್ಷ ಕೋಟಿ ರೂಪಾಯಿಯಿಂದ 204.03 ಲಕ್ಷ ಕೋಟಿ ರೂಪಾಯಿಗೆ ಜಿಗಿಯಿತು. ಹೂಡಿಕೆದಾರರ ಸಂಪತ್ತು 2.7 ಲಕ್ಷ ಕೋಟಿ ರೂಪಾಯಿ ಹೆಚ್ಚಳವಾಯಿತು. ಸೆನ್ಸೆಕ್ಸ್ 1030.28 ಪಾಯಿಂಟ್​​ಗಳು ಮೇಲೇರಿ 50,781.69 ಪಾಯಿಂಟ್​ಗಳೊಂದಿಗೆ ವ್ಯವಹಾರ ಮುಗಿಸಿತು. ಇನ್ನು ನಿಫ್ಟಿ 274.20 ಪಾಯಿಂಟ್ ಗಳಿಕೆ ಕಂಡು 14,982 ಪಾಯಿಂಟ್​​ನೊಂದಿಗೆ ದಿನಾಂತ್ಯದ ವಹಿವಾಟು ಮುಗಿಸಿತು.

ಇಂದಿನ ವಹಿವಾಟಿನಲ್ಲಿ ನಿಫ್ಟಿಯ ಎಲ್ಲ ಸೆಗ್ಮೆಂಟ್​​ಗಳಲ್ಲೂ ತಾಂತ್ರಿಕ ದೋಷ ಕಂಡುಬಂದ ಕಾರಣಕ್ಕೆ ಕೆಲ ಕಾಲ ವ್ಯವಹಾರ ಸ್ಥಗಿತಗೊಂಡಿತ್ತು. ಆ ನಂತರ ಭರ್ಜರಿಯಾಗಿ ಏರಿಕೆ ಕಂಡಿತು. ನಿಫ್ಟಿ ಬ್ಯಾಂಕ್ ಮತ್ತು ಖಾಸಗಿ ಬ್ಯಾಂಕ್ ಸೂಚ್ಯಂಕಗಳು ತಲಾ 4 ಪರ್ಸೆಂಟ್ ಹೆಚ್ಚಳವಾದವು. ನಿಫ್ಟಿ ಪಿಎಸ್​ಯು ಬ್ಯಾಂಕ್ ಸೂಚ್ಯಂಕ 3 ಪರ್ಸೆಂಟ್ ಏರಿಕೆ ಕಂಡಿತು. ಮಾಧ್ಯಮ ಮತ್ತು ಲೋಹ ಸೂಚ್ಯಂಕಗಳು ಕೂಡ ಹೆಚ್ಚಳ ದಾಖಲಿಸಿದವು.

ನಿಫ್ಟಿಯಲ್ಲಿ ಏರಿಕೆ ಕಂಡ ಪ್ರಮುಖ ಷೇರುಗಳು ಮತ್ತು ಪರ್ಸೆಂಟ್ ಕೋಲ್ ಇಂಡಿಯಾ- ಶೇ 4.97 ಎಚ್​ಡಿಎಫ್​ಸಿ ಬ್ಯಾಂಕ್- ಶೇ 4.63 ಆಕ್ಸಿಸ್ ಬ್ಯಾಂಕ್- ಶೇ 3.78 ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ- ಶೇ 3.65 ಐಸಿಐಸಿಐ ಬ್ಯಾಂಕ್- ಶೇ 3.59

ನಿಫ್ಟಿಯಲ್ಲಿ ಇಳಿಕೆ ಕಂಡ ಪ್ರಮುಖ ಷೇರುಗಳು ಮತ್ತು ಪರ್ಸೆಂಟ್ ಯುಪಿಎಲ್- ಶೇ 1.62 ಟಿಸಿಎಸ್- ಶೇ 1.02 ಡಾ. ರೆಡ್ಡೀಸ್ ಲ್ಯಾಬ್ಸ್- ಶೇ 0.94 ಗೇಲ್- ಶೇ 0.81 ಪವರ್ ಗ್ರಿಡ್ ಕಾರ್ಪೊರೇಷನ್- ಶೇ 0.55

ಬಿಎಸ್​ಇ ಮಿಡ್ ಕ್ಯಾಪ್ ಸೂಚ್ಯಂಕಗಳು ಶೇ 0.77 ಮತ್ತು ಸ್ಮಾಲ್ ಕ್ಯಾಪ್ ಶೇ 1.08 ಏರಿಕೆ ದಾಖಲಿಸಿದವು. ಫೆಬ್ರವರಿ ತಿಂಗಳ ಫ್ಯೂಚರ್ಸ್ ಅಂಡ್ ಆಪ್ಷನ್ಸ್ ಒಪ್ಪಂದ ಕೊನೆಯಾಗುವ ದಿನ ಹತ್ತಿರ ಇರುವುದರಿಂದ ಗುರುವಾರ ಮತ್ತು ಶುಕ್ರವಾರ ಮಾರುಕಟ್ಟೆಯಲ್ಲಿ ಭಾರೀ ಏರಿಳಿತ ಕಾಣುವ ಸಾಧ್ಯತೆ ಇದ್ದು, ದೊಡ್ಡ ಪ್ರಮಾಣದಲ್ಲಿ ವಹಿವಾಟು ನಡೆಸುವುದರಿಂದ ದೂರ ಇರುವುದು ಉತ್ತಮ ಎಂದು ವಿಶ್ಲೇಷಕರು ಸಲಹೆ ಮಾಡುತ್ತಾರೆ.

ಇದನ್ನೂ ಓದಿ: NSE Nifty Glitches: ತಾಂತ್ರಿಕ ಸಮಸ್ಯೆಯಿಂದ ನಿಫ್ಟಿ ವಹಿವಾಟು ಸ್ಥಗಿತ

Published On - 7:42 pm, Wed, 24 February 21

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ