AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sensex: ದಾಖಲೆಯ ದಾರಿಯಲ್ಲಿ ಷೇರು ಮಾರುಕಟ್ಟೆ, 51 ಸಾವಿರದ ಗಡಿ ದಾಟಿದ ಸೆನ್ಸೆಕ್ಸ್​.. ಕಾರಣವೇನು?

Sensex Gains: ಆರ್ಥಿಕ ತಜ್ಞರು ಹೇಳುವಂತೆ ದೇಶದ ಪ್ರಸ್ತುತ ಆರ್ಥಿಕ ಪರಿಸ್ಥಿತಿ ಮೇಲೆ ಮಾರುಕಟ್ಟೆಯನ್ನು ಅಳೆಯುವುದೇ ದೊಡ್ಡ ತಪ್ಪು. ಮಾರುಕಟ್ಟೆಯ ಬೆಳವಣಿಗೆಯನ್ನು ನಿರ್ಧರಿಸುವುದೇ ಭವಿಷ್ಯದ ಆರ್ಥಿಕತೆ

Sensex: ದಾಖಲೆಯ ದಾರಿಯಲ್ಲಿ ಷೇರು ಮಾರುಕಟ್ಟೆ, 51 ಸಾವಿರದ ಗಡಿ ದಾಟಿದ ಸೆನ್ಸೆಕ್ಸ್​.. ಕಾರಣವೇನು?
ಪ್ರಾತಿನಿಧಿಕ ಚಿತ್ರ
Skanda
|

Updated on:Feb 05, 2021 | 11:52 AM

Share

ಭಾರತದ ಷೇರು ಮಾರುಕಟ್ಟೆ ಕಂಡುಕೇಳರಿಯದ ದಾಖಲೆಗೆ ಸಾಕ್ಷಿಯಾಗಿದೆ. ಷೇರು ಮಾರುಕಟ್ಟೆ ಸೂಚ್ಯಂಕ ನಿಫ್ಟಿ 15,000ದ ಗಡಿ ದಾಟಿದ್ದು, ಸೆನ್ಸೆಕ್ಸ್​ 51,000ದ ಆಸುಪಾಸಿಗೆ ಹೋಗಿ ಸಾರ್ವಕಾಲಿಕ ದಾಖಲೆ ನಿರ್ಮಿಸಿದೆ. ಒಂದೆಡೆ ಕೊರೊನಾದಿಂದ ಆರ್ಥಿಕತೆ ಮುಳುಗಿದೆ, ರೈತರ ಹೋರಾಟದಿಂದ ಪರಿಸ್ಥಿತಿ ಹದಗೆಡುತ್ತಿದೆ ಎಂಬ ಹತ್ತು ಹಲವು ವಾದಗಳ ನಡುವೆಯೂ ಷೇರುಪೇಟೆ ಈ ತೆರನಾದ ಅದ್ಭುತ ಬೆಳವಣಿಗೆ ಕಾಣಲು ಕಾರಣವೇನು ಎನ್ನುವ ಕುರಿತಾದ ಸಂಕ್ಷಿಪ್ತ ಮಾಹಿತಿ ಇಲ್ಲಿದೆ. ಆರ್ಥಿಕ ತಜ್ಞರು ಹೇಳುವಂತೆ ದೇಶದ ಪ್ರಸ್ತುತ ಆರ್ಥಿಕ ಪರಿಸ್ಥಿತಿ ಮೇಲೆ ಮಾರುಕಟ್ಟೆಯನ್ನು ಅಳೆಯುವುದೇ ದೊಡ್ಡ ತಪ್ಪು. ಮಾರುಕಟ್ಟೆಯ ಬೆಳವಣಿಗೆಯನ್ನು ನಿರ್ಧರಿಸುವುದೇ ಭವಿಷ್ಯದ ಆರ್ಥಿಕತೆ ಎನ್ನುವುದನ್ನು ಅರಿತುಕೊಳ್ಳಬೇಕಿದೆ. ಅಂದರೆ ಇಂದು ಷೇರು ಮಾರುಕಟ್ಟೆ ಅತ್ಯುತ್ತಮ ಪ್ರಗತಿ ತೋರಿಸುತ್ತಿದೆ ಎಂದರೆ ಮುಂದಿನ ದಿನಗಳಲ್ಲಿ ಭಾರತದ ಆರ್ಥಿಕತೆ ಪುಟಿದೇಳಲಿದೆ ಎಂಬ ಸೂಚನೆ.

ಕೊರೊನಾ ಬಂದ ನಂತರ ಕಳೆದ 2020-21ನೇ ಸಾಲಿನ ದೇಶದ ಜಿಡಿಪಿ ಶೇ.9.5ರಿಂದ ಶೇ.10ರಷ್ಟು ಕುಸಿತ ಕಾಣಬಹುದು ಎಂದೇ ಎಲ್ಲರೂ ನಿರೀಕ್ಷಿಸಿದ್ದರು. ಆದರೆ, ಎಲ್ಲಾ ಸಂಕಷ್ಟಗಳ ನಡುವೆಯೂ ಮಾರುಕಟ್ಟೆ ಜಿಡಿಪಿ ಕೇವಲ ಶೇ.6ರಿಂದ ಶೇ.6.5ರಷ್ಟು ಮಾತ್ರ ಕುಸಿತ ಕಂಡಿದೆ. ಇಷ್ಟಾದ ನಂತರವೂ ಜನ ಶೇ.6.5ರಷ್ಟು ಕುಸಿತ ಕಂಡರೂ ಮಾರುಕಟ್ಟೆ ಏರುತ್ತಿದೆಯಲ್ಲಾ ಎಂದು ಯೋಚಿಸುತ್ತಿದ್ದಾರೆಯೇ ವಿನಃ ನಿರೀಕ್ಷೆಗಿಂತಲೂ ಕಡಿಮೆ ಕುಸಿತ ಕಂಡಿರುವುದು ಆಶಾದಾಯಕ ಬೆಳವಣಿಗೆ ಎನ್ನುವುದನ್ನು ಯೋಚಿಸುವುದಿಲ್ಲ. ಈ ನಡುವೆ 2021-22ನೇ ಸಾಲಿನ ಜಿಡಿಪಿ ಶೇ.3ರಿಂದ ಶೇ.4ರಷ್ಟು ಏರಿಕೆ ಕಾಣಬಹುದು ಎಂಬ ನಿರೀಕ್ಷೆ ಇತ್ತು. ಆದರೆ, ಈಗ ಬರುತ್ತಿರುವ ಸೂಚನೆಯ ಪ್ರಕಾರ ಜಿಡಿಪಿ ಶೇ.11ರಿಂದ ಶೇ.11.5ರಷ್ಟು ಏರಿಕೆ ಕಾಣಲಿದೆ ಎನ್ನಲಾಗುತ್ತಿದೆ. ಈ ಬೆಳವಣಿಗೆಯ ಪ್ರತಿಫಲನವೇ ಷೇರು ಮಾರುಕಟ್ಟೆಯ ಅಭೂತಪೂರ್ವ ದಾಖಲೆ.

ಇನ್ನೊಂದೆಡೆ ಕೇಂದ್ರ ಬಜೆಟ್​ 2021 ಷೇರು ಮಾರುಕಟ್ಟೆಗೆ ವರದಾನವಾಗಿದೆ. ಬಜೆಟ್​ ಪೂರ್ವದಲ್ಲಿ ಎಲ್ಲರ ಲೆಕ್ಕಾಚಾರವೂ ಸರ್ಕಾರ ಆದಾಯ ಕ್ರೋಢೀಕರಿಸಲು ತೆರಿಗೆ ಹೆಚ್ಚಳ ಮಾಡಬಹುದು, ಕೊವಿಡ್​ ಸೆಸ್​ ವಿಧಿಸಬಹುದು, ಶ್ರೀಮಂತರ ಸಂಪತ್ತಿನ ಮೇಲೆ ಕಣ್ಣು ಹಾಕಬಹುದು ಎಂದಿತ್ತು. Security Transactional Tax (STT) Long Term Capital Gain Tax (LTCG) ಏರಿಸಬಹುದು ಎನ್ನುವ ಊಹೆಯಿತ್ತು. ಆದರೆ, ಈ ನಿರೀಕ್ಷೆಗಳನ್ನು ಹುಸಿಗೊಳಿಸಿ ಬಜೆಟ್​ನಲ್ಲಿ ಕೃಷಿ ಸೆಸ್​ ವಿಧಿಸಿದ್ದನ್ನು ಹೊರತುಪಡಿಸಿದರೆ ತೆರಿಗೆಯಲ್ಲಿ ಯಾವುದೇ ಬದಲಾವಣೆ ತರಲಿಲ್ಲ. ಜೊತೆಗೆ, ಆದಾಯವನ್ನು ಹೆಚ್ಚಿಸಲಿಕ್ಕಾಗಿ ತೆರಿಗೆ ಸೋರಿಕೆಯನ್ನು ತಡೆಗಟ್ಟುತ್ತೀವಿ ಎಂಬ ಜಾಣ ನಡೆಯನ್ನಿಟ್ಟಿತು. ದೇಶದ ಒಟ್ಟಾರೆ ಜನಸಂಖ್ಯೆಯಲ್ಲಿ ಶೇ.3ರಿಂದ ಶೇ.4ರಷ್ಟು ಮಂದಿ ತೆರಿಗೆ ಕಟ್ಟುತ್ತಿದ್ದಾರೆ. ಇವರ ಮೇಲೆ ಪದೇಪದೇ ಬರೆ ಹಾಕುವ ಬದಲು ತೆರಿಗೆ ವ್ಯಾಪ್ತಿಗೆ ಹೆಚ್ಚು ಜನರನ್ನು ತರುವ ಯೋಚನೆಯನ್ನು ಮಾಡಲಾಗಿದೆ. ಇದೆಲ್ಲದರ ಪರಿಣಾಮವಾಗಿ ಷೇರುಮಾರುಕಟ್ಟೆಯಲ್ಲಿ ಬಜೆಟ್​ ನಂತರ ಮೇಲ್ಮುಖವಾಗಿ ಚಲಿಸುತ್ತಿದೆ.

ಮಾಹಿತಿ: ರುದ್ರಮೂರ್ತಿ, ಆರ್ಥಿಕ ತಜ್ಞ

50 ಸಾವಿರ ಗಡಿ ದಾಟಿಯೇ ಬಿಟ್ಟಿತು ಭಾರತೀಯ ಷೇರು ಮಾರುಕಟ್ಟೆ ಸೂಚ್ಯಂಕ..! ರಿಲಯನ್ಸ್​, ಇನ್ಪೋಸಿಸ್​ ಷೇರುಗಳಿಗೆ ಹೆಚ್ಚು ಲಾಭ

Published On - 11:44 am, Fri, 5 February 21

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!