AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಗೂರು: ಅಪಾರ್ಟ್ಮೆಂಟ್ ಬಳಿ ಆಟವಾಡ್ತಿದ್ದ ಬಾಲಕ ನೀರು ತುಂಬಿದ ​ಗುಂಡಿಗೆ ಬಿದ್ದು ಸಾವು

ಬೆಂಗಳೂರು: ಕಟ್ಟಡ ನಿರ್ಮಾಣ ಕಾರ್ಮಿಕರು ತಮ್ಮ ಮಕ್ಕಳನ್ನ ಮನೆಯಲ್ಲೇ ಬಿಟ್ಟು ಹೋಗಲಾಗದೆ ಕೆಲಸದ ಸ್ಥಳಕ್ಕೆ ಮಕ್ಕಳನ್ನ ಕರೆದುಕೊಂಡು ಹೋಗ್ತಾರೆ. ಆದರೆ ಆ ಮಕ್ಕಳನ್ನ ಯಾರು ನೋಡಿಕೊಳ್ಳುವವರಿಲ್ಲದೆ ಮಣ್ಣಿನಲ್ಲಿ ಆಟವಾಡಿ ಅಲ್ಲಿ ಇಲ್ಲಿ ಬಿದ್ದು ಗಲೀಜು, ಗಾಯ ಮಾಡಿಕೊಳ್ಳುತ್ತಾರೆ. ಆದರೆ ಇದರಿಂದ ಎಂತಹ ಅನಾಹುತವಾಗಬಹುದು ಗೊತ್ತೇ? ಅದಕ್ಕೆ ಇಲ್ಲಿದೆ ಸಾಕ್ಷಿ.. ಕೆಲಸ ನಡೆಯುತ್ತಿದ್ದ ಅಪಾರ್ಟ್ಮೆಂಟ್​ ಬಳಿ ಆಟವಾಡುತ್ತಿದ್ದ 7 ವರ್ಷದ ಬಾಲಕ ಪ್ರಾಣ ಕಳೆದುಕೊಂಡಿರುವ ದುರಂತ ಘಟನೆ ನಗರದ ಬೇಗೂರಿನಲ್ಲಿ ನಡೆದಿದೆ. ಅಪಾರ್ಟ್ಮೆಂಟ್ ಕಟ್ಟಡ ಕೆಲಸಕ್ಕಾಗಿ ಗುಂಡಿ ತೆಗೆದು […]

ಬೇಗೂರು: ಅಪಾರ್ಟ್ಮೆಂಟ್ ಬಳಿ ಆಟವಾಡ್ತಿದ್ದ ಬಾಲಕ ನೀರು ತುಂಬಿದ ​ಗುಂಡಿಗೆ ಬಿದ್ದು ಸಾವು
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Oct 12, 2020 | 3:48 PM

Share

ಬೆಂಗಳೂರು: ಕಟ್ಟಡ ನಿರ್ಮಾಣ ಕಾರ್ಮಿಕರು ತಮ್ಮ ಮಕ್ಕಳನ್ನ ಮನೆಯಲ್ಲೇ ಬಿಟ್ಟು ಹೋಗಲಾಗದೆ ಕೆಲಸದ ಸ್ಥಳಕ್ಕೆ ಮಕ್ಕಳನ್ನ ಕರೆದುಕೊಂಡು ಹೋಗ್ತಾರೆ. ಆದರೆ ಆ ಮಕ್ಕಳನ್ನ ಯಾರು ನೋಡಿಕೊಳ್ಳುವವರಿಲ್ಲದೆ ಮಣ್ಣಿನಲ್ಲಿ ಆಟವಾಡಿ ಅಲ್ಲಿ ಇಲ್ಲಿ ಬಿದ್ದು ಗಲೀಜು, ಗಾಯ ಮಾಡಿಕೊಳ್ಳುತ್ತಾರೆ. ಆದರೆ ಇದರಿಂದ ಎಂತಹ ಅನಾಹುತವಾಗಬಹುದು ಗೊತ್ತೇ? ಅದಕ್ಕೆ ಇಲ್ಲಿದೆ ಸಾಕ್ಷಿ..

ಕೆಲಸ ನಡೆಯುತ್ತಿದ್ದ ಅಪಾರ್ಟ್ಮೆಂಟ್​ ಬಳಿ ಆಟವಾಡುತ್ತಿದ್ದ 7 ವರ್ಷದ ಬಾಲಕ ಪ್ರಾಣ ಕಳೆದುಕೊಂಡಿರುವ ದುರಂತ ಘಟನೆ ನಗರದ ಬೇಗೂರಿನಲ್ಲಿ ನಡೆದಿದೆ. ಅಪಾರ್ಟ್ಮೆಂಟ್ ಕಟ್ಟಡ ಕೆಲಸಕ್ಕಾಗಿ ಗುಂಡಿ ತೆಗೆದು ಬಿಡಲಾಗಿತ್ತು. ಮೊನ್ನೆ ಸುರಿದ ಭಾರಿ ಮಳೆಯಿಂದಾಗಿ ಗುಂಡಿಯಲ್ಲಿ ನೀರು ತುಂಬಿಕೊಂಡಿತ್ತು.

ಅಲ್ಲಿಯೇ ಆಟವಾಡುತ್ತಿದ್ದ ಹುಡುಗ ಗುಂಡಿಯಲ್ಲಿ ಜಾರಿ ಬಿದ್ದು ಸಾವನ್ನಪ್ಪಿದ್ದಾನೆ. ಮೃತ ಮಗನನ್ನು ಕಂಡು ದಿಕ್ಕುತೋಚದೆ ತಂದೆ ತಾಯಿ ಕಣ್ಣೀರು ಸುರಿಸುತ್ತಿದ್ದಾರೆ. ಒಂದು ಚಿಕ್ಕ ನಿರ್ಲಕ್ಷ್ಯಕ್ಕೆ ಮಗು ಪ್ರಾಣ ಕಳೆದುಕೊಂಡಿದೆ. ಕೆಲ ದಿನಗಳ ಹಿಂದೆ ಇದೇ ರೀತಿ ತಾಯಿ ಊಟ ಮಾಡಿಸುತ್ತಿದ್ದ ಪುಟ್ಟ ಮಗು ಬಿದ್ದು ಮೃತಪಟ್ಟ ಘಟನೆ ಮಂಡ್ಯದಲ್ಲಿ ನಡೆದಿತ್ತು.

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು