AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶಮಂತ್​ಗೆ ಕ್ಯಾಪ್ಟನ್ಸಿ ಕೊಟ್ಟಿದ್ದ ನನಗೆ ನಾನೇ ಚಪ್ಪಲ್ಲಿಯಲ್ಲಿ ಹೊಡೆದುಕೊಳ್ಳಬೇಕು’

ಮೊದಲ ವಾರ ಬಿಗ್​ ಬಾಸ್​ ಮನೆಯಲ್ಲಿ ಶಮಂತ್​ ಕ್ಯಾಪ್ಟನ್​ ಆಗಿದ್ದರು. ನಂತರ ಎರಡನೇ ವಾರವೂ ಬಿಗ್​ ಬಾಸ್​ ಮನೆಯಲ್ಲಿ ಶಮಂತ್​ ನಾಯಕನಾಗಿ ಮುಂದುವರಿದಿದ್ದರು.

'ಶಮಂತ್​ಗೆ ಕ್ಯಾಪ್ಟನ್ಸಿ ಕೊಟ್ಟಿದ್ದ ನನಗೆ ನಾನೇ ಚಪ್ಪಲ್ಲಿಯಲ್ಲಿ ಹೊಡೆದುಕೊಳ್ಳಬೇಕು'
ಬಿಗ್​ಬಾಸ್​ ಸ್ಪರ್ಧಿ ಶಮಂತ್​
ರಾಜೇಶ್ ದುಗ್ಗುಮನೆ
| Edited By: |

Updated on: Mar 20, 2021 | 10:41 AM

Share

ಬಿಗ್​ ಬಾಸ್​ ಮನೆಯಲ್ಲಿ ಶಮಂತ್​ ತುಂಬಾನೇ ಚರ್ಚೆ ಆದ ಸ್ಪರ್ಧಿ. ಶಮಂತ್​ ಎರಡು ವಾರಗಳ ಕಾಲ ಬಿಗ್​ ಬಾಸ್​ ಮನೆಯಲ್ಲಿ ಕ್ಯಾಪ್ಟನ್​ ಆಗಿದ್ದರು. ಬಿಗ್​ ಬಾಸ್​ ಇತಿಹಾಸದಲ್ಲಿ ಸ್ಪರ್ಧಿಯೋರ್ವ ಈ ರೀತಿ ಎರಡು ವಾರ ಕ್ಯಾಪ್ಟನ್ಸಿ ಪಡೆದುಕೊಂಡಿದ್ದು ಇದೇ ಮೊದಲಂತೆ. ಅವರಿಗೆ ಕ್ಯಾಪ್ಟನ್ಸಿ ನೀಡಿದ ವಿಚಾರ ಮೂರನೇ ವಾರವೂ ಚರ್ಚೆ ಆಗುತ್ತಿದೆ. ಅಷ್ಟೇ ಅಲ್ಲ ಶಮಂತ್​ಗೆ ಕ್ಯಾಪ್ಟನ್ಸಿ ನೀಡಿದ್ದಕ್ಕೆ ಮರುಗಿದ್ದಾರೆ ರಾಜೀವ್​.

ಮೊದಲ ವಾರ ಬಿಗ್​ ಬಾಸ್​ ಮನೆಯಲ್ಲಿ ಶಮಂತ್​ ಕ್ಯಾಪ್ಟನ್​ ಆಗಿದ್ದರು. ಮೊದಲ ವಾರ ಪೂರ್ಣಗೊಳ್ಳುವಾಗ ಸ್ಪರ್ಧಿಗಳಿಗೆ ಬಿಗ್​ ಬಾಸ್​ ಒಂದು ಆಯ್ಕೆ ನೀಡಿದ್ದರು. ಎರಡನೇ ವಾರವೂ ಶಮಂತ್​ ಕ್ಯಾಪ್ಟನ್​ ಆಗಿ ಮುಂದುವರಿಯಬೇಕೇ ಬೇಡವೇ ಎಂಬುದನ್ನು ನಿರ್ಧರಿಸಲು ವೋಟಿಂಗ್ ಮಾಡಲಾಗಿತ್ತು​ . ಮೊದಲಿಗೆ 8 ಜನ ‘ಬೇಡ’ ಎಂದು, ಇನ್ನುಳಿದ 8 ಜನರು ‘ಬೇಕು’ ಎಂದು ವೋಟ್​ ಮಾಡಿದ್ದರು. ಸರಿಯಾಗಿ ಇನ್ನೊಮ್ಮೆ ಯೋಚಿಸಿನೋಡಿ ಎಂದು ಬಿಗ್ ಬಾಸ್​ ಹೇಳಿದಾಗ ನಿರ್ಮಲಾ ಚೆನ್ನಪ್ಪ ಮನಸ್ಸು ಬದಲಾಯಿಸಿ ‘ಬೇಕು’ ಎಂದು ವೋಟ್​ ಮಾಡಿದ್ದರು. ಹಾಗಾಗಿ ಎರಡನೇ ವಾರವೂ ಕ್ಯಾಪ್ಟನ್​ ಆಗುವ ಅವಕಾಶ ಶಮಂತ್​ಗೆ ಸಿಕ್ಕಿತ್ತು.

ಈ ವಿಚಾರ ಮೂರನವೇ ವಾರವೂ ಚರ್ಚೆ ಆಗುತ್ತಿದೆ. ಶಮಂತ್​ಗೆ ಏನೂ ಅರ್ಥವಾಗುವುದೇ ಇಲ್ಲ. ಅವನು ಬಿಗ್​ ಬಾಸ್​ ಮನೆಗೆ ಬಂದಿದ್ದಾನೆ ಎನ್ನುವುದು ಅರ್ಥವಾಗಿಲ್ಲ ಅನಿಸುತ್ತದೆ ಎಂದರು ದಿವ್ಯಾ ಸುರೇಶ್​. ಈ ವೇಳೆ ಅಲ್ಲಿದ್ದ ರಾಜೀವ್​ ಈ ಬಗ್ಗೆ ಮಾತನಾಡಿದ್ದಾರೆ. ಶಮಂತ್​ಗೆ ಎರಡು ಕಾಲ ಕ್ಯಾಪ್ಟನ್ಸಿ ನೀಡಿದ್ದಕ್ಕೆ ನನ್ನ ಚಪ್ಪಲ್ಲಿಯಲ್ಲಿ ನಾನೇ ಹೊಡೆದುಕೊಳ್ಳಬೇಕು ಎಂದು ಮರುಗಿದ್ದಾರೆ.

ಇದನ್ನೂ ಓದಿ: Bigg Boss Kannada: ಕಾಯಿಲೆ ಬಿದ್ದ ತಂದೆ ಜೊತೆ 2 ವರ್ಷದಿಂದ ಮಾತನಾಡಿಲ್ಲ ಬಿಗ್​ ಬಾಸ್​ ರಾಜೀವ್​! ಕಾರಣ ಏನು?

ಬಿಗ್ ಬಾಸ್ ಧನುಶ್ರೀ ಗೆ ಸಿನಿಮಾ ಆಫರ್ ಗಳು ಹರಿದು ಬರುತ್ತಿವೆಯಂತೆ..!

Follow Us
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ