AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶಮಂತ್​ಗೆ ಕ್ಯಾಪ್ಟನ್ಸಿ ಕೊಟ್ಟಿದ್ದ ನನಗೆ ನಾನೇ ಚಪ್ಪಲ್ಲಿಯಲ್ಲಿ ಹೊಡೆದುಕೊಳ್ಳಬೇಕು’

ಮೊದಲ ವಾರ ಬಿಗ್​ ಬಾಸ್​ ಮನೆಯಲ್ಲಿ ಶಮಂತ್​ ಕ್ಯಾಪ್ಟನ್​ ಆಗಿದ್ದರು. ನಂತರ ಎರಡನೇ ವಾರವೂ ಬಿಗ್​ ಬಾಸ್​ ಮನೆಯಲ್ಲಿ ಶಮಂತ್​ ನಾಯಕನಾಗಿ ಮುಂದುವರಿದಿದ್ದರು.

'ಶಮಂತ್​ಗೆ ಕ್ಯಾಪ್ಟನ್ಸಿ ಕೊಟ್ಟಿದ್ದ ನನಗೆ ನಾನೇ ಚಪ್ಪಲ್ಲಿಯಲ್ಲಿ ಹೊಡೆದುಕೊಳ್ಳಬೇಕು'
ಬಿಗ್​ಬಾಸ್​ ಸ್ಪರ್ಧಿ ಶಮಂತ್​
ರಾಜೇಶ್ ದುಗ್ಗುಮನೆ
| Edited By: |

Updated on: Mar 20, 2021 | 10:41 AM

Share

ಬಿಗ್​ ಬಾಸ್​ ಮನೆಯಲ್ಲಿ ಶಮಂತ್​ ತುಂಬಾನೇ ಚರ್ಚೆ ಆದ ಸ್ಪರ್ಧಿ. ಶಮಂತ್​ ಎರಡು ವಾರಗಳ ಕಾಲ ಬಿಗ್​ ಬಾಸ್​ ಮನೆಯಲ್ಲಿ ಕ್ಯಾಪ್ಟನ್​ ಆಗಿದ್ದರು. ಬಿಗ್​ ಬಾಸ್​ ಇತಿಹಾಸದಲ್ಲಿ ಸ್ಪರ್ಧಿಯೋರ್ವ ಈ ರೀತಿ ಎರಡು ವಾರ ಕ್ಯಾಪ್ಟನ್ಸಿ ಪಡೆದುಕೊಂಡಿದ್ದು ಇದೇ ಮೊದಲಂತೆ. ಅವರಿಗೆ ಕ್ಯಾಪ್ಟನ್ಸಿ ನೀಡಿದ ವಿಚಾರ ಮೂರನೇ ವಾರವೂ ಚರ್ಚೆ ಆಗುತ್ತಿದೆ. ಅಷ್ಟೇ ಅಲ್ಲ ಶಮಂತ್​ಗೆ ಕ್ಯಾಪ್ಟನ್ಸಿ ನೀಡಿದ್ದಕ್ಕೆ ಮರುಗಿದ್ದಾರೆ ರಾಜೀವ್​.

ಮೊದಲ ವಾರ ಬಿಗ್​ ಬಾಸ್​ ಮನೆಯಲ್ಲಿ ಶಮಂತ್​ ಕ್ಯಾಪ್ಟನ್​ ಆಗಿದ್ದರು. ಮೊದಲ ವಾರ ಪೂರ್ಣಗೊಳ್ಳುವಾಗ ಸ್ಪರ್ಧಿಗಳಿಗೆ ಬಿಗ್​ ಬಾಸ್​ ಒಂದು ಆಯ್ಕೆ ನೀಡಿದ್ದರು. ಎರಡನೇ ವಾರವೂ ಶಮಂತ್​ ಕ್ಯಾಪ್ಟನ್​ ಆಗಿ ಮುಂದುವರಿಯಬೇಕೇ ಬೇಡವೇ ಎಂಬುದನ್ನು ನಿರ್ಧರಿಸಲು ವೋಟಿಂಗ್ ಮಾಡಲಾಗಿತ್ತು​ . ಮೊದಲಿಗೆ 8 ಜನ ‘ಬೇಡ’ ಎಂದು, ಇನ್ನುಳಿದ 8 ಜನರು ‘ಬೇಕು’ ಎಂದು ವೋಟ್​ ಮಾಡಿದ್ದರು. ಸರಿಯಾಗಿ ಇನ್ನೊಮ್ಮೆ ಯೋಚಿಸಿನೋಡಿ ಎಂದು ಬಿಗ್ ಬಾಸ್​ ಹೇಳಿದಾಗ ನಿರ್ಮಲಾ ಚೆನ್ನಪ್ಪ ಮನಸ್ಸು ಬದಲಾಯಿಸಿ ‘ಬೇಕು’ ಎಂದು ವೋಟ್​ ಮಾಡಿದ್ದರು. ಹಾಗಾಗಿ ಎರಡನೇ ವಾರವೂ ಕ್ಯಾಪ್ಟನ್​ ಆಗುವ ಅವಕಾಶ ಶಮಂತ್​ಗೆ ಸಿಕ್ಕಿತ್ತು.

ಈ ವಿಚಾರ ಮೂರನವೇ ವಾರವೂ ಚರ್ಚೆ ಆಗುತ್ತಿದೆ. ಶಮಂತ್​ಗೆ ಏನೂ ಅರ್ಥವಾಗುವುದೇ ಇಲ್ಲ. ಅವನು ಬಿಗ್​ ಬಾಸ್​ ಮನೆಗೆ ಬಂದಿದ್ದಾನೆ ಎನ್ನುವುದು ಅರ್ಥವಾಗಿಲ್ಲ ಅನಿಸುತ್ತದೆ ಎಂದರು ದಿವ್ಯಾ ಸುರೇಶ್​. ಈ ವೇಳೆ ಅಲ್ಲಿದ್ದ ರಾಜೀವ್​ ಈ ಬಗ್ಗೆ ಮಾತನಾಡಿದ್ದಾರೆ. ಶಮಂತ್​ಗೆ ಎರಡು ಕಾಲ ಕ್ಯಾಪ್ಟನ್ಸಿ ನೀಡಿದ್ದಕ್ಕೆ ನನ್ನ ಚಪ್ಪಲ್ಲಿಯಲ್ಲಿ ನಾನೇ ಹೊಡೆದುಕೊಳ್ಳಬೇಕು ಎಂದು ಮರುಗಿದ್ದಾರೆ.

ಇದನ್ನೂ ಓದಿ: Bigg Boss Kannada: ಕಾಯಿಲೆ ಬಿದ್ದ ತಂದೆ ಜೊತೆ 2 ವರ್ಷದಿಂದ ಮಾತನಾಡಿಲ್ಲ ಬಿಗ್​ ಬಾಸ್​ ರಾಜೀವ್​! ಕಾರಣ ಏನು?

ಬಿಗ್ ಬಾಸ್ ಧನುಶ್ರೀ ಗೆ ಸಿನಿಮಾ ಆಫರ್ ಗಳು ಹರಿದು ಬರುತ್ತಿವೆಯಂತೆ..!

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್