AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕರ ರಾಶಿಗೆ ಶನಿ ಪ್ರವೇಶ: ಆಸ್ತಿಕ ಭಕ್ತ ಸಾಗರದಿಂದ ವಿಶೇಷ ಪೂಜೆ, ಹೋಮ

ಮಂಡ್ಯ: ಅಮಾವಾಸ್ಯೆ ಹಿನ್ನೆಲೆಯಲ್ಲಿ ಮಹಾಕಾಳಿ ದೇವಾಲಯಕ್ಕೆ ಭಕ್ತ ಸಾಗರ ಹರಿದು ಬರ್ತಿದೆ. ಇಂದಿನ ವಿಶೇಷ ಏನಂದ್ರೆ ಮಕರ ರಾಶಿಗೆ ಶನಿ ಪ್ರವೇಶವಾಗುತ್ತಿರೋ ಹಿನ್ನೆಲೆಯಲ್ಲಿ ಭಕ್ತರು ಕಾಳಿ ದೇವಿಯ ಮೊರೆ ಹೋಗ್ತಿದ್ದಾರೆ. ಪಶ್ಚಿಮಾಭಿಮುಖವಾಗಿರೋ ಜಿಲ್ಲೆಯ ಏಕೈಕ ಮಹಾಕಾಳಿ ದೇವಾಲಯ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಟಿ.ಎಂ.ಹೊಸೂರು ಗೇಟ್ ಬಳಿ ಇದೆ. ಶನಿ ದೇವರ ಪ್ರಭಾವಕ್ಕೆ ಹೆದರಿ ಆಸ್ತಿಕರು ಮಹಾಕಾಳಿ ಬಳಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಮಕರ ರಾಶಿಯ ಹೆಸರಿರೋ ಬಹುತೇಕ ಭಕ್ತರಿಂದ ಕಾಳಿ ದೇವಿಗೆ ವಿಶೇಷ ಪೂಜೆ ನಡೆಯುತ್ತಿದ್ದು, ಶನಿ […]

ಮಕರ ರಾಶಿಗೆ ಶನಿ ಪ್ರವೇಶ: ಆಸ್ತಿಕ ಭಕ್ತ ಸಾಗರದಿಂದ ವಿಶೇಷ ಪೂಜೆ, ಹೋಮ
ಸಾಧು ಶ್ರೀನಾಥ್​
|

Updated on:Jan 24, 2020 | 12:20 PM

Share

ಮಂಡ್ಯ: ಅಮಾವಾಸ್ಯೆ ಹಿನ್ನೆಲೆಯಲ್ಲಿ ಮಹಾಕಾಳಿ ದೇವಾಲಯಕ್ಕೆ ಭಕ್ತ ಸಾಗರ ಹರಿದು ಬರ್ತಿದೆ. ಇಂದಿನ ವಿಶೇಷ ಏನಂದ್ರೆ ಮಕರ ರಾಶಿಗೆ ಶನಿ ಪ್ರವೇಶವಾಗುತ್ತಿರೋ ಹಿನ್ನೆಲೆಯಲ್ಲಿ ಭಕ್ತರು ಕಾಳಿ ದೇವಿಯ ಮೊರೆ ಹೋಗ್ತಿದ್ದಾರೆ.

ಪಶ್ಚಿಮಾಭಿಮುಖವಾಗಿರೋ ಜಿಲ್ಲೆಯ ಏಕೈಕ ಮಹಾಕಾಳಿ ದೇವಾಲಯ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಟಿ.ಎಂ.ಹೊಸೂರು ಗೇಟ್ ಬಳಿ ಇದೆ. ಶನಿ ದೇವರ ಪ್ರಭಾವಕ್ಕೆ ಹೆದರಿ ಆಸ್ತಿಕರು ಮಹಾಕಾಳಿ ಬಳಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಮಕರ ರಾಶಿಯ ಹೆಸರಿರೋ ಬಹುತೇಕ ಭಕ್ತರಿಂದ ಕಾಳಿ ದೇವಿಗೆ ವಿಶೇಷ ಪೂಜೆ ನಡೆಯುತ್ತಿದ್ದು, ಶನಿ ಪ್ರಭಾವ ಬೀರದಂತೆ ದೇವಾಲಯದಲ್ಲಿ ವಿಶೇಷ ಪೂಜೆ, ಹೋಮ ಹವನ ನಡೆಯುತ್ತಿದೆ. ತಮಗೆ ಶನಿ ಪ್ರಭಾವ ತಾಕದಂತೆ ಭಕ್ತರು ತಾಯತ ಕಟ್ಟಿಸಿಕೊಂಡು ತಡೆ ಒಡ್ಡಿಸಿಕೊಳ್ತಿದ್ದಾರೆ. ಬೆಳಗ್ಗೆಯಿಂದಲೇ ದೇವಾಲಯದಲ್ಲಿ ಪ್ರತ್ಯಂಗಿರಾ ಹಾಗೂ ಶನಿಶಾಂತಿ ಹೋಮ ನಡೆಯುತ್ತಿದೆ.

ಕೋಲಾರ: ಜಿಲ್ಲೆಯ ವಿವಿಧ ದೇವಾಲಯಗಳಲ್ಲಿ ಶನಿ ಶಾಂತಿ ಹೋಮ, ಮಕರ ರಾಶಿಯಯವರಿಗೆ ವಿಶೇಷ ಶಾಂತಿ ಹೋಮ ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳಲಾಗಿದೆ. ಬಂಗಾರಪೇಟೆ ತಾಲೂಕಿನ ಹಂಚಾಳ ಬಳಿ ಇರುವ ನಂಜುಡೇಶ್ವರಸ್ವಾಮಿ ಸಮೇತ ನವಗ್ರಹ ದೇಗುಲ ಓಂಕಾರ ಕ್ಷೇತ್ರದಲ್ಲಿ ಲೋಕಲ್ಯಾಣರ್ಥ ಜೇಷ್ಠಾದೇವಿ ಸಮೇತ ಶನೈಶ್ಚರಸ್ವಾಮಿ ಶಾಂತಿಹೋಮ ಮಹಾಯಜ್ಞ ನಡೆಯಲಿದೆ.

ಧನುಸ್ಸು ರಾಶಿಯಿಂದ ಮಕರ ರಾಶಿಗೆ ಶನಿ ಪ್ರವೇಶ: ನವಗ್ರಹಗಳಲ್ಲಿ ಒಂದಾದ ಶನಿಗ್ರಹವು ಇಂದಿನಿಂದ ಧನುಸ್ಸು ರಾಶಿಯಿಂದ ಮಕರ ರಾಶಿಗೆ ಪ್ರವೇಶಿಸಲಿದ್ದಾನೆ. ಈ ಹಿನ್ನೆಲೆಯಲ್ಲಿ ವಿವಿಧ ದೇವಾಲಯಗಳಲ್ಲಿ ಶನಿ ಶಾಂತಿ ಹೋಮ, ಮಕರ ರಾಶಿಯವರಿಗೆ ವಿಶೇಷ ಶಾಂತಿ ಹೋಮ ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳಲಾಗಿದೆ. ಸ್ವಸ್ತಿಶ್ರೀ ವಿಕಾರಿ ನಾಮ ಸಂವತ್ಸರದ ಪುಷ್ಯ ಬಹಳ ಚತುರ್ಥಿ ಶುಕ್ರವಾರ ಶನೈಶ್ಚರಸ್ವಾಮಿಯು ಧನಸ್ಸು ರಾಶಿಯಿಂದ ಮಕರ ರಾಶಿಗೆ ಪ್ರವೇಶ ಮಾಡಲಿದ್ದಾರೆ.

Published On - 12:12 pm, Fri, 24 January 20

ಗವಿಸಿದ್ದಪ್ಪ ಕೊಲೆಗೆ ಮತ್ತೊಂದು ಟ್ವಿಸ್ಟ್: ಸ್ಫೋಟಕ ಅಂಶ ಬಿಚ್ಚಿಟ್ಟ ತಾಯಿ
ಗವಿಸಿದ್ದಪ್ಪ ಕೊಲೆಗೆ ಮತ್ತೊಂದು ಟ್ವಿಸ್ಟ್: ಸ್ಫೋಟಕ ಅಂಶ ಬಿಚ್ಚಿಟ್ಟ ತಾಯಿ
ಆತ್ಮಹತ್ಯೆಗೆ ಯತ್ನಿಸಿದವನಿಗೆ ಕೊನೆ ಕ್ಷಣದಲ್ಲಿ ಹುಟ್ಟಿತು ಬದುಕಬೇಕೆಂಬ ಆಸೆ
ಆತ್ಮಹತ್ಯೆಗೆ ಯತ್ನಿಸಿದವನಿಗೆ ಕೊನೆ ಕ್ಷಣದಲ್ಲಿ ಹುಟ್ಟಿತು ಬದುಕಬೇಕೆಂಬ ಆಸೆ
ಪ್ರವಾಹದಲ್ಲಿ ಸಿಲುಕಿದ್ದ ಶಾಲಾ ಮಕ್ಕಳನ್ನು ಕಾಪಾಡಿದ ಮುಂಬೈ ಪೊಲೀಸರು
ಪ್ರವಾಹದಲ್ಲಿ ಸಿಲುಕಿದ್ದ ಶಾಲಾ ಮಕ್ಕಳನ್ನು ಕಾಪಾಡಿದ ಮುಂಬೈ ಪೊಲೀಸರು
ಮನೆಗೆ ಬಂದ ಶುಭಾಂಶು ಶುಕ್ಲಾಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ
ಮನೆಗೆ ಬಂದ ಶುಭಾಂಶು ಶುಕ್ಲಾಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ
ಜೈಲು ಚೆಕ್ ಪೋಸ್ಟ್ ಬಳಿ ವಿಜಯಲಕ್ಷ್ಮಿ ದರ್ಶನ್​ ಕಾರು ತಡೆದ ಜೈಲು ಸಿಬ್ಬಂದಿ
ಜೈಲು ಚೆಕ್ ಪೋಸ್ಟ್ ಬಳಿ ವಿಜಯಲಕ್ಷ್ಮಿ ದರ್ಶನ್​ ಕಾರು ತಡೆದ ಜೈಲು ಸಿಬ್ಬಂದಿ
ಧರ್ಮಸ್ಥಳ ಪ್ರಕರಣ ತನಿಖೆಯಲ್ಲಿ ಏನೇನಾಯ್ತು? ಗೃಹ ಸಚಿವ ಕೊಟ್ಟ ಮಾಹಿತಿ
ಧರ್ಮಸ್ಥಳ ಪ್ರಕರಣ ತನಿಖೆಯಲ್ಲಿ ಏನೇನಾಯ್ತು? ಗೃಹ ಸಚಿವ ಕೊಟ್ಟ ಮಾಹಿತಿ
ದರ್ಶನ್ ಇಲ್ಲದಿದ್ದರೂ ಈ ವರ್ಷವೇ ಬಿಡುಗಡೆ ಆಗುತ್ತಾ ‘ದಿ ಡೆವಿಲ್’ ಸಿನಿಮಾ?
ದರ್ಶನ್ ಇಲ್ಲದಿದ್ದರೂ ಈ ವರ್ಷವೇ ಬಿಡುಗಡೆ ಆಗುತ್ತಾ ‘ದಿ ಡೆವಿಲ್’ ಸಿನಿಮಾ?
ಅಲೆಗಳ ಅಬ್ಬರಕ್ಕೆ ಕಡಲ ತೀರಕ್ಕೆ ಬಂದ ಡಾಲ್ಫಿನ್ ಮೀನು
ಅಲೆಗಳ ಅಬ್ಬರಕ್ಕೆ ಕಡಲ ತೀರಕ್ಕೆ ಬಂದ ಡಾಲ್ಫಿನ್ ಮೀನು
ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಎಲ್ಲರಿಗೂ ಇದೆ ಮಾರಿ ಹಬ್ಬ
ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಎಲ್ಲರಿಗೂ ಇದೆ ಮಾರಿ ಹಬ್ಬ
ದಾರಿಯುಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮುಖ ಕಚ್ಚಿದ ಬೀದಿ ನಾಯಿ
ದಾರಿಯುಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮುಖ ಕಚ್ಚಿದ ಬೀದಿ ನಾಯಿ