AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಸಚಿವರ ಮನೆ ಪಕ್ಕದಲ್ಲೆ ಕುರಿ ಸಂತೆ, ಕೊವಿಡ್ ನಿಯಮಗಳಿಗೆ ತಿಲಾಂಜಲಿ ಇಟ್ಟ ಜನತೆ

ಸಂತೆಗೆ ಬರುವವರಿಗೆ ಮಾಸ್ಕ್ ಧರಿಸುವಂತೆ ಹೇಳಿ ಜಾಗೃತಿ ಮೂಡಿಸುವ ಕೆಲಸವನ್ನು ಮಾಡ್ತಿಲ್ಲ. ಇದ್ರಿಂದ ಆರೋಗ್ಯ ಸಚಿವರ ಸ್ವಗ್ರಾಮದಲ್ಲಿ ಕೊವಿಡ್ ನಿಯಮಗಳಿಗೆ ತಿಲಾಂಜಲಿ ಇಟ್ಟಿದ್ದು ಸರ್ಕಾರ ಆದೇಶಕ್ಕೆ ಅಪಹಾಸ್ಯ ಮಾಡಿದಂತಾಗಿದೆ.

ಆರೋಗ್ಯ ಸಚಿವರ ಮನೆ ಪಕ್ಕದಲ್ಲೆ ಕುರಿ ಸಂತೆ, ಕೊವಿಡ್ ನಿಯಮಗಳಿಗೆ ತಿಲಾಂಜಲಿ ಇಟ್ಟ ಜನತೆ
ಪೃಥ್ವಿಶಂಕರ
| Edited By: |

Updated on: Nov 30, 2020 | 5:07 PM

Share

ಚಿಕ್ಕಬಳ್ಳಾಪುರ: ಚಳಿಗಾಲದಲ್ಲಿ ಕೊರೊನಾ ಸೋಂಕಿನ ಬಗ್ಗೆ ಸಾಕಷ್ಟು ಜಾಗೃತರಾಗಿ ಇರಬೇಕೆಂದು ಸರ್ಕಾರ ಸೂಚಿಸಿದೆ. ಆದರೂ ನಮ್ಮ ಜನ ಮಾತ್ರ ಕೊರೊನಾ ಬಗ್ಗೆ ನಿರ್ಲಕ್ಷ್ಯ ಧೋರಣೆ ಮುಂದುವರೆಸಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಗ್ರಾಮ ಇದಕ್ಕೆ ತಾಜಾ ಉದಾಹರಣೆ. ಇದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರ ಸ್ವಗ್ರಾಮ ಎನ್ನುವುದು ಗಮನಿಸಬೇಕಾದ ಸಂಗತಿ.

ಸಚಿವರ ಮನೆಯ ಪಕ್ಕದಲ್ಲೇ ಕುರಿ ಸಂತೆ ಸಚಿವರ ಮನೆಯ ಪಕ್ಕದಲ್ಲೆ ಪ್ರತಿ ಸೋಮವಾರ ಅದ್ದೂರಿಯಾಗಿ ಕುರಿ ಸಂತೆ ಆಯೋಜನೆ ಆಗುತ್ತೆ. ಸಂತೆಗೆ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ವಿವಿಧ ರಾಜ್ಯಗಳಿಂದ ಸಾವಿರಾರು ಜನ ಕುರಿ ವರ್ತಕರು ಬರುತ್ತಾರೆ. ಹೀಗೆ ಕುರಿಗಳ ಸಂತೆಗೆ ಬಂದವರು ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದಿಲ್ಲ. ಮಾಸ್ಕ್ ಧರಿಸದೆ ಸಂತೆಯಲ್ಲಿ ಭಾಗಿಯಾಗುವುದು ಮಾಮೂಲು ಸಂಗತಿ. ಅಲ್ಲೊಬ್ಬರು ಇಲ್ಲೊಬ್ಬರು ಮಾತ್ರ ಮಾಸ್ಕ್ ಧರಿಸಿದ್ದು ಕಂಡು ಬಂತು.

ಸಂತೆಗೆ ಬರುವವರಿಗೆ ಕೊರೊನಾ ಜಾಗೃತಿಯಾಗಲಿ ಅಥವಾ ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸುವುದಕ್ಕೆ ಯಾರೊಬ್ಬರೂ ಇಲ್ಲಿರುವುದಿಲ್ಲ. ಸ್ಥಳೀಯ ಪೆರೇಸಂದ್ರ ಗ್ರಾಮ ಪಂಚಾಯತಿ, ಪಶುವೈದ್ಯಕೀಯ ಸೇವಾ ಇಲಾಖೆ, ಎಪಿಎಂಸಿ ಸಿಬ್ಬಂದಿ ಅಥವಾ ಪೊಲೀಸರು ಈ ಬಗ್ಗೆ ಗಮನ ನೀಡುತ್ತಿಲ್ಲ.

ಸಹಕಾರ ಸಂಘದ ಜವಾಬ್ದಾರಿ.. ಕುರಿ ಸಂತೆಯಲ್ಲಿ ಪ್ರತಿ ಸೋಮವಾರ ಸಾವಿರಾರು ಜನ ಸೇರಿ ಸಂತೆ ಮಾಡುವ ಕಾರಣ ಸಂತೆಯ ನಿರ್ವಹಣೆ ಜವಾಬ್ದಾರಿಯನ್ನು ಸ್ಥಳಿಯ ಭೋಗನಂದೀಶ್ವರ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಕ್ಕೆ ಒಪ್ಪಿಸಲಾಗಿದೆ. ಸಂತೆಯಲ್ಲಿ ಖರೀದಿಯಾಗುವ ಪ್ರತಿಯೊಂದು ಕುರಿಗೂ ಕುರಿಗಳ ವರ್ತಕರಿಂದ ₹ 5 ರೂಪಾಯಿ ಹಣ ಸಂಗ್ರಹಿಸುತ್ತಿದೆ. ಆದರೆ ಸಂತೆಗೆ ಬರುವ ರೈತರು ವರ್ತಕರ ಹಿತ ಮಾತ್ರ ಕಾಯುತ್ತಿಲ್ಲ.

ಸಂತೆಗೆ ಬರುವವರಿಗೆ ಮಾಸ್ಕ್ ಧರಿಸುವಂತೆ ಹೇಳಿ ಜಾಗೃತಿ ಮೂಡಿಸುವ ಕೆಲಸವನ್ನು ಮಾಡ್ತಿಲ್ಲ. ಇದ್ರಿಂದ ಆರೋಗ್ಯ ಸಚಿವರ ಸ್ವಗ್ರಾಮದಲ್ಲಿ ಕೊವಿಡ್ ನಿಯಮಗಳಿಗೆ ತಿಲಾಂಜಲಿ ಇಟ್ಟಿದ್ದು ಸರ್ಕಾರ ಆದೇಶಕ್ಕೆ ಅಪಹಾಸ್ಯ ಮಾಡಿದಂತಾಗಿದೆ.

-ಭೀಮಪ್ಪ ಪಾಟೀಲ

ಇದನ್ನೂ ಓದಿ: ಎಚ್ಚರ, ಎಚ್ಚರ… ಮರುಸೋಂಕಿಗೆ ಒಳಗಾದರೆ ಅಪಾಯ ಹೆಚ್ಚು!

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು