AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಕಂಡಕ್ಟರ್ಸ್​ಗೆ BMTCಯಿಂದ ಗುಡ್‌ ನ್ಯೂಸ್.. ಇವತ್ತಿನಿಂದ ಶಿಫ್ಟ್​ ವೈಸ್ ಕೆಲಸ

Shift Wise Work for BMTC Women Conductors | ಇವತ್ತಿನಿಂದ ಮಹಿಳಾ ಸಿಬ್ಬಂದಿಗೆ ಶಿಫ್ಟ್ ಹಾಕಲು ಬಿಎಂಟಿಸಿ ನಿರ್ಧರಿಸಿದೆ. ವಿಶೇಷವಾಗಿ ಗರ್ಭಿಣಿಯರು, ಚಿಕ್ಕ ಮಕ್ಕಳಿರುವ ಮಹಿಳಾ ಸಿಬ್ಬಂದಿಗೆ ಅನುಕೂಲವಾಗುವ ಶಿಫ್ಟ್‌ಗೆ ಒಪ್ಪಿಗೆ ನೀಡಿದ್ದು ಬಿಎಂಟಿಸಿ ಅಧ್ಯಕ್ಷರ ಸೂಚನೆಯ ಮೇರೆಗೆ ಸಿಟಿಎಂರಿಂದ ಎಲ್ಲಾ ಬಿಎಂಟಿಸಿ ಡಿಸಿಗಳಿಗೆ ಸುತ್ತೋಲೆ ಕಳಿಸಲಾಗಿದೆ.

ಮಹಿಳಾ ಕಂಡಕ್ಟರ್ಸ್​ಗೆ BMTCಯಿಂದ ಗುಡ್‌ ನ್ಯೂಸ್.. ಇವತ್ತಿನಿಂದ ಶಿಫ್ಟ್​ ವೈಸ್ ಕೆಲಸ
BMTC ಮಹಿಳಾ ನಿರ್ವಾಹಕಿಯರಿಗೆ ಮೊದಲ ಪಾಳಿ, ಸಾಮಾನ್ಯ ಪಾಳಿ ನೀಡುವುದಕ್ಕೆ ಸುತ್ತೋಲೆ
ಆಯೇಷಾ ಬಾನು
|

Updated on: Feb 12, 2021 | 9:57 AM

Share

ಬೆಂಗಳೂರು: ಮಹಿಳಾ ನಿರ್ವಾಹಕಿಯರಿಗೆ BMTC ಕೊನೆಗೂ ಗುಡ್ ‌ನ್ಯೂಸ್ ಕೊಟ್ಟಿದೆ. ಇವತ್ತಿನಿಂದ ಮಹಿಳಾ ಸಿಬ್ಬಂದಿಗೆ ಶಿಫ್ಟ್ ಹಾಕಲು ಬಿಎಂಟಿಸಿ ನಿರ್ಧರಿಸಿದೆ. ಮೊದಲ ಪಾಳಿ, ಸಾಮಾನ್ಯ ಪಾಳಿ ನೀಡುವುದಕ್ಕೆ ಸುತ್ತೋಲೆ ಕಳಿಸಿದೆ. ವಿಶೇಷವಾಗಿ ಗರ್ಭಿಣಿಯರು, ಚಿಕ್ಕ ಮಕ್ಕಳಿರುವ ಮಹಿಳಾ ಸಿಬ್ಬಂದಿಗೆ ಅನುಕೂಲವಾಗುವ ಶಿಫ್ಟ್‌ಗೆ ಒಪ್ಪಿಗೆ ನೀಡಿದ್ದು ಬಿಎಂಟಿಸಿ ಅಧ್ಯಕ್ಷರ ಸೂಚನೆಯ ಮೇರೆಗೆ CTMರಿಂದ ಎಲ್ಲಾ BMTC ಡಿಸಿಗಳಿಗೆ ಸುತ್ತೋಲೆ ಕಳಿಸಲಾಗಿದೆ.

ಕೆಲ ದಿನಗಳ ಹಿಂದೆ ಟಿವಿ9 ವಾಹಿನಿ ಮಹಿಳಾ ಕಂಡಕ್ಟರ್‌ಗಳ ಸಮಸ್ಯೆ ಬಗ್ಗೆ ವರದಿ ಮಾಡಿತ್ತು. ಅವರ ನೋವನ್ನು ಬಿಚ್ಚಿಡುವ ಪ್ರಯತ್ನ ಮಾಡಿತ್ತು. ಅದಕ್ಕೆ ಫಲಶೃತಿಯಾಗಿ BMTC ಹೊಸ ನಿರ್ಧಾರ ಕೈಗೊಂಡಿದೆ. ಕೊನೆಗೂ ಬೇಡಿಕೆ ಈಡೇರಿಸಲು ಮುಂದಾಗಿದೆ. ಇವತ್ತಿನಿಂದ ಮಹಿಳಾ ಸಿಬ್ಬಂದಿಗೆ ಶಿಫ್ಟ್​ ವೈಸ್ ಕೆಲಸ ನೀಡಲು ನಿರ್ಧರಿಸಿದೆ. ಇತ್ತೀಚೆಗೆ BMTC ಅಧ್ಯಕ್ಷ ನಂದೀಶ್ ರೆಡ್ಡಿಯನ್ನ ಮಹಿಳಾ ಸಿಬ್ಬಂದಿ ಭೇಟಿಯಾಗಿ ಶಿಫ್ಟ್ ವಿಚಾರವಾಗಿ ಮಾತನಾಡಿ ತಮ್ಮ ಸಮಸ್ಯೆಯನ್ನು ಹೇಳಿಕೊಂಡಿದ್ದರು. ಈ ವೇಳೆ ಮಹಿಳಾ ಸಿಬ್ಬಂದಿಗೆ ಅನುಕೂಲವಾಗುವಂತ ಶಿಫ್ಟ್​ಗಳನ್ನ ನೀಡಲಾಗುತ್ತೆ ಎಂದು ನಂದೀಶ್ ರೆಡ್ಡಿ ಭರವಸೆ ನೀಡಿದ್ದರು. ಅದರಂತೆಯೇ ಈಗ ಅಧ್ಯಕ್ಷರ ಸೂಚನೆ ಮೇರೆಗೆ, CTMO ರಿಂದ ಎಲ್ಲಾ ಬಿಎಂಟಿಸಿ ಡಿಸಿಗಳಿಗೆ ಸುತ್ತೋಲೆ ಕಳಿಸಲಾಗಿದೆ.

ಇನ್ನು ಮುಂದೆ ಮಹಿಳಾ ಸಿಬ್ಬಂದಿಗೆ ಮಾರ್ನಿಂಗ್ ಹಾಗೂ ಜನರಲ್ ಶೀಫ್ಟ್ ನೀಡಲಾಗುತ್ತೆ. ಜೊತೆಗೆ ಬಸ್​ಗಳ ರೂಟ್ ನೀಡುವಾಗ ಮಹಿಳಾ ನಿರ್ವಾಹಕಿಯರಿಗೆ ಮೊದಲ ಆದ್ಯತೆ ನೀಡುವುದು. ವಿಶೇಷವಾಗಿ ಗರ್ಭಿಣಿಯರಿಗೆ ಹಾಗೂ ಚಿಕ್ಕ ಮಕ್ಕಳಿರುವ ಮಹಿಳಾ ಸಿಬ್ಬಂದಿಗೆ ಆದ್ಯತೆ ಕೊಡಲಾಗುತ್ತೆ. ಸಾಧ್ಯವಾದಷ್ಟು ಅವರು ಕೇಳುವ ಮಾರ್ಗ ನೀಡುವುದು. ನೈಟ್ ಔಟ್ ಶೆಡ್ಯೂಲ್ ಮಾಡಲು ಆಸಕ್ತಿಯಿದ್ದಲ್ಲಿ ಲಿಖಿತ ಮನವಿ ಪತ್ರವನ್ನು ಪಡೆದು ಡ್ಯೂಟಿ ನೀಡಬೇಕೆಂದು ಸೂಚಿಸಲಾಗಿದೆ.

ಇದನ್ನೂ ಓದಿ: ಕೆಲಸದ ಅವಧಿ 8 ಗಂಟೆಗೆ ಇಳಿಸಲು ಮಹಿಳಾ ಕಂಡಕ್ಟರ್ಸ್ ಮನವಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?