AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಠಿಣ ಮನಃಸ್ಥಿತಿಯಲ್ಲಿ ಪರೀಕ್ಷೆ ಬರೆದಿದ್ದ ತನುಜಾಗೆ ಈಗ ಮೆಡಿಕಲ್ ಸೀಟ್ ಕಟ್ಟಿಟ್ಟ ಬುತ್ತಿ

ಬೆಂಗಳೂರು: ಕೋವಿಡ್ ಕಾರಣದಿಂದಾಗಿ ನೀಟ್ ಪರೀಕ್ಷೆ ಬರೆಯಲು ಸಾಧ್ಯವಾಗದೆ ಭವಿಷ್ಯದ ಬಗ್ಗೆ ತೀವ್ರ ಆತಂಕದ ಕ್ಷಣಗಳನ್ನು ಎದುರಿಸಿದ್ದ ಒಬ್ಬ ವಿದ್ಯಾರ್ಥಿನಿ, ಕೊನೆಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ನೆರವಿನಲ್ಲಿ ಪರೀಕ್ಷೆ ಬರೆದಿದ್ದು ಎಲ್ಲರಿಗೂ ತಿಳಿದ ವಿಷಯವೇ. ಬಹಳಷ್ಟು ತ್ರಾಸಿನಿಂದ.. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಮಲ್ಲೇನಹಳ್ಳಿಯ ವಿದ್ಯಾರ್ಥಿನಿ ತನುಜಾ ಕರೇಗೌಡ್ರ ಬೆಂಗಳೂರಿನ ಬಸವನಗುಡಿಯ ಕೇಂದ್ರದಲ್ಲಿ ನೀಟ್ ಪರೀಕ್ಷೆ ಬರೆದಿದ್ದಳು . ಕೋವಿಡ್ ನಿಂದಾದ ಬದಲಾವಣೆಗಳು ತನುಜಾಗೆ ನೀಟ್ […]

ಕಠಿಣ ಮನಃಸ್ಥಿತಿಯಲ್ಲಿ ಪರೀಕ್ಷೆ ಬರೆದಿದ್ದ ತನುಜಾಗೆ ಈಗ ಮೆಡಿಕಲ್ ಸೀಟ್ ಕಟ್ಟಿಟ್ಟ ಬುತ್ತಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Oct 17, 2020 | 11:41 AM

Share

ಬೆಂಗಳೂರು: ಕೋವಿಡ್ ಕಾರಣದಿಂದಾಗಿ ನೀಟ್ ಪರೀಕ್ಷೆ ಬರೆಯಲು ಸಾಧ್ಯವಾಗದೆ ಭವಿಷ್ಯದ ಬಗ್ಗೆ ತೀವ್ರ ಆತಂಕದ ಕ್ಷಣಗಳನ್ನು ಎದುರಿಸಿದ್ದ ಒಬ್ಬ ವಿದ್ಯಾರ್ಥಿನಿ, ಕೊನೆಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ನೆರವಿನಲ್ಲಿ ಪರೀಕ್ಷೆ ಬರೆದಿದ್ದು ಎಲ್ಲರಿಗೂ ತಿಳಿದ ವಿಷಯವೇ.

ಬಹಳಷ್ಟು ತ್ರಾಸಿನಿಂದ.. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಮಲ್ಲೇನಹಳ್ಳಿಯ ವಿದ್ಯಾರ್ಥಿನಿ ತನುಜಾ ಕರೇಗೌಡ್ರ ಬೆಂಗಳೂರಿನ ಬಸವನಗುಡಿಯ ಕೇಂದ್ರದಲ್ಲಿ ನೀಟ್ ಪರೀಕ್ಷೆ ಬರೆದಿದ್ದಳು .

ಕೋವಿಡ್ ನಿಂದಾದ ಬದಲಾವಣೆಗಳು ತನುಜಾಗೆ ನೀಟ್ ಪರೀಕ್ಷೆ ಬರೆಯಲು ಅಡ್ಡಿ ಮಾಡಿದ್ದವು. ಈ ಸಮಸ್ಯೆಯನ್ನರಿತು ಮಧ್ಯಪ್ರವೇಶಿಸಿದ್ದ ಮುಖ್ಯಮಂತ್ರಿ ಹಾಗೂ ಸಚಿವರು ಯಾವುದೇ ಅಡ್ಡಿ, ಆತಂಕವಿಲ್ಲದೆ ಆಕೆ ಪರೀಕ್ಷೆ ಬರೆಯುವಂತೆ ಮಾಡಿದ್ದರು.

ಇದೀಗ ಶಿಕಾರಿಪುರದ ವಿದ್ಯಾರ್ಥಿನಿ ತನುಜಾ ಬರೆದಿದ್ದ ನೀಟ್ ಪರೀಕ್ಷೆ ಫಲಿತಾಂಶ ಬಂದಿದೆ. ನಿರೀಕ್ಷೆಯಂತೆ ತನುಜಾ ಉತ್ತಮ ಸಾಧನೆ ತೋರಿದ್ದಾಳೆ. 720 ಕ್ಕೆ 586 ಅಂಕ ಪಡೆದಿದ್ದಾಳೆ! ದುರ್ಭರ ಪರಿಸ್ಥಿತಿ, ಕಠಿಣ ಮನಸ್ಥಿತಿಯಲ್ಲಿ ಪರೀಕ್ಷೆ ಬರೆದಿದ್ದ ತನುಜಾಗೆ ಈಗ ಮೆಡಿಕಲ್ ಸೀಟ್ ಕಟ್ಟಿಟ್ಟ ಬುತ್ತಿ.

ಕೊರೊನಾ ಕಾಲದಲ್ಲಿ ಇಡೀ ಜಗತ್ತು ತತ್ತರಿಸಿದ್ದನ್ನು ಕಂಡು, ಮುಂದೆ ತಾನು ವೈದ್ಯೆಯಾಗಿ ನಾಡಿನ ಜನತೆಗೆ ಸೇವೆ ಸಲ್ಲಿಸುವೆ ಎಂದು ಕಂಕಣ ತೊಟ್ಟಿದ್ದ ತನುಜಾಗೆ ಈಗ ಕನಸು ನನಸಾಗುವ ಕಾಲ ಕೂಡಿಬಂದಿದೆ. ಆಕೆಯ ಮುಂದಿನ ವೈದ್ಯಕೀಯ ವ್ಯಾಸಂಗಕ್ಕೆ ಶುಭವಾಗಲಿ. ಕೊರೊನಾ ಕರಾಳತೆ, ನೀಟ್​ಗೆ ಅಡ್ಡಿ: ವಿದ್ಯಾರ್ಥಿನಿಗೆ ಸಿಎಂ ಯಡಿಯೂರಪ್ಪ, ಆರೋಗ್ಯ ಸಚಿವರ ನೆರವು

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?