AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗುಂಬೆ ಘಾಟ್ ಬಳಿ ರಾತ್ರಿ ವೇಳೆ.. ಚಲಿಸುವ ಕಾರ್​ನಿಂದ ಬಿದ್ದ 5 ವರ್ಷದ ಮಗು!

ಶಿವಮೊಗ್ಗ: ಚಲಿಸುವ ಕಾರಿನಿಂದ ಐದು ವರ್ಷದ ಹೆಣ್ಣು ಮಗು ಕೆಳಗೆ ಬಿದ್ದ ಘಟನೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟ್ ಬಳಿ ನಡೆದಿದೆ. ನಿನ್ನೆ ರಾತ್ರಿ ಸುಮಾರು 9.30ರ ಸಮಯದಲ್ಲಿ ಕಾರಿನಲ್ಲಿ ಮಂಗಳೂರಿನಿಂದ ಚಿಕ್ಕಮಗಳೂರಿನ ಎನ್.ಆರ್.ಪುರಕ್ಕೆ ಹೋಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಕಾರು ಚಲಾಯಿಸುವ ವೇಳೆ ಪೋಷಕರು ನಿದ್ರೆಗೆ ಜಾರಿದ್ದಾರೆ. ಈ ವೇಳೆ ಅನಿರೀಕ್ಷಿತವಾಗಿ ಕಾರ್ ಡೋರ್ ತೆರೆದುಕೊಂಡಿದೆ. ಈ ಪರಿಣಾಮ ಐದು ವರ್ಷದ ಹೆಣ್ಣು ಮಗು ಆನ್ವಿ ಕಾರ್​ನಿಂದ ಕೆಳಕ್ಕೆ ಬಿದ್ದಿದ್ದಾಳೆ. ಅದೇ ರಸ್ತೆಯಲ್ಲಿ ಹೋಗುತ್ತಿದ್ದ […]

ಆಗುಂಬೆ ಘಾಟ್ ಬಳಿ ರಾತ್ರಿ ವೇಳೆ.. ಚಲಿಸುವ ಕಾರ್​ನಿಂದ ಬಿದ್ದ 5 ವರ್ಷದ ಮಗು!
ಸಾಧು ಶ್ರೀನಾಥ್​
|

Updated on:Jan 31, 2020 | 4:34 PM

Share

ಶಿವಮೊಗ್ಗ: ಚಲಿಸುವ ಕಾರಿನಿಂದ ಐದು ವರ್ಷದ ಹೆಣ್ಣು ಮಗು ಕೆಳಗೆ ಬಿದ್ದ ಘಟನೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟ್ ಬಳಿ ನಡೆದಿದೆ. ನಿನ್ನೆ ರಾತ್ರಿ ಸುಮಾರು 9.30ರ ಸಮಯದಲ್ಲಿ ಕಾರಿನಲ್ಲಿ ಮಂಗಳೂರಿನಿಂದ ಚಿಕ್ಕಮಗಳೂರಿನ ಎನ್.ಆರ್.ಪುರಕ್ಕೆ ಹೋಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.

ಕಾರು ಚಲಾಯಿಸುವ ವೇಳೆ ಪೋಷಕರು ನಿದ್ರೆಗೆ ಜಾರಿದ್ದಾರೆ. ಈ ವೇಳೆ ಅನಿರೀಕ್ಷಿತವಾಗಿ ಕಾರ್ ಡೋರ್ ತೆರೆದುಕೊಂಡಿದೆ. ಈ ಪರಿಣಾಮ ಐದು ವರ್ಷದ ಹೆಣ್ಣು ಮಗು ಆನ್ವಿ ಕಾರ್​ನಿಂದ ಕೆಳಕ್ಕೆ ಬಿದ್ದಿದ್ದಾಳೆ. ಅದೇ ರಸ್ತೆಯಲ್ಲಿ ಹೋಗುತ್ತಿದ್ದ ಮತ್ತೊಬ್ಬ ಕಾರ್ ಚಾಲಕ ರಸ್ತೆ ಬದಿಯಲ್ಲಿ ಅಳುತ್ತಿರುವ ಮಗುವನ್ನು ಕಂಡು ಆಗುಂಬೆ ಪೊಲೀಸರಿಗೆ ಒಪ್ಪಿಸಿದ್ದಾನೆ.

ಮಗುವಿಲ್ಲದೆ ಕೊಪ್ಪದ ವರೆಗೆ ಪ್ರಯಾಣಿಸಿದ ಪೋಷಕರು, ಬಳಿಕ ಮಗು ಇಲ್ಲದನ್ನು ಗಮನಿಸಿ ಬಂದ ದಾರಿಯಲ್ಲೇ ವಾಪಸ್ ಮಗುವಿಗಾಗಿ ಹುಡುಕಾಟ ನಡೆಸಿದ್ದಾರೆ. ಆಗುಂಬೆ ಚೆಕ್ ಪೋಸ್ಟ್ ನಲ್ಲಿ ವಿಚಾರಿಸಿದ್ದಾರೆ. ನಂತರ ಮಗು ಆಗುಂಬೆ ಪೊಲೀಸ್ ಠಾಣೆಯಲ್ಲಿ ಸುರಕ್ಷಿತವಾಗಿ ಇರುವುದು ಗೊತ್ತಾಗಿದೆ. ಬಳಿಕ ಮಗುವನ್ನು ಠಾಣೆಯಿಂದ ಪಡೆದು ತೆರಳಿದ್ದಾರೆ.

Published On - 4:10 pm, Fri, 31 January 20

Follow Us
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!