ಆಗುಂಬೆ ಘಾಟ್ ಬಳಿ ರಾತ್ರಿ ವೇಳೆ.. ಚಲಿಸುವ ಕಾರ್​ನಿಂದ ಬಿದ್ದ 5 ವರ್ಷದ ಮಗು!

ಶಿವಮೊಗ್ಗ: ಚಲಿಸುವ ಕಾರಿನಿಂದ ಐದು ವರ್ಷದ ಹೆಣ್ಣು ಮಗು ಕೆಳಗೆ ಬಿದ್ದ ಘಟನೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟ್ ಬಳಿ ನಡೆದಿದೆ. ನಿನ್ನೆ ರಾತ್ರಿ ಸುಮಾರು 9.30ರ ಸಮಯದಲ್ಲಿ ಕಾರಿನಲ್ಲಿ ಮಂಗಳೂರಿನಿಂದ ಚಿಕ್ಕಮಗಳೂರಿನ ಎನ್.ಆರ್.ಪುರಕ್ಕೆ ಹೋಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಕಾರು ಚಲಾಯಿಸುವ ವೇಳೆ ಪೋಷಕರು ನಿದ್ರೆಗೆ ಜಾರಿದ್ದಾರೆ. ಈ ವೇಳೆ ಅನಿರೀಕ್ಷಿತವಾಗಿ ಕಾರ್ ಡೋರ್ ತೆರೆದುಕೊಂಡಿದೆ. ಈ ಪರಿಣಾಮ ಐದು ವರ್ಷದ ಹೆಣ್ಣು ಮಗು ಆನ್ವಿ ಕಾರ್​ನಿಂದ ಕೆಳಕ್ಕೆ ಬಿದ್ದಿದ್ದಾಳೆ. ಅದೇ ರಸ್ತೆಯಲ್ಲಿ ಹೋಗುತ್ತಿದ್ದ […]

ಆಗುಂಬೆ ಘಾಟ್ ಬಳಿ ರಾತ್ರಿ ವೇಳೆ.. ಚಲಿಸುವ ಕಾರ್​ನಿಂದ ಬಿದ್ದ 5 ವರ್ಷದ ಮಗು!
ಸಾಧು ಶ್ರೀನಾಥ್​

Updated on: Jan 31, 2020 | 4:34 PM

ಶಿವಮೊಗ್ಗ: ಚಲಿಸುವ ಕಾರಿನಿಂದ ಐದು ವರ್ಷದ ಹೆಣ್ಣು ಮಗು ಕೆಳಗೆ ಬಿದ್ದ ಘಟನೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟ್ ಬಳಿ ನಡೆದಿದೆ. ನಿನ್ನೆ ರಾತ್ರಿ ಸುಮಾರು 9.30ರ ಸಮಯದಲ್ಲಿ ಕಾರಿನಲ್ಲಿ ಮಂಗಳೂರಿನಿಂದ ಚಿಕ್ಕಮಗಳೂರಿನ ಎನ್.ಆರ್.ಪುರಕ್ಕೆ ಹೋಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.

ಕಾರು ಚಲಾಯಿಸುವ ವೇಳೆ ಪೋಷಕರು ನಿದ್ರೆಗೆ ಜಾರಿದ್ದಾರೆ. ಈ ವೇಳೆ ಅನಿರೀಕ್ಷಿತವಾಗಿ ಕಾರ್ ಡೋರ್ ತೆರೆದುಕೊಂಡಿದೆ. ಈ ಪರಿಣಾಮ ಐದು ವರ್ಷದ ಹೆಣ್ಣು ಮಗು ಆನ್ವಿ ಕಾರ್​ನಿಂದ ಕೆಳಕ್ಕೆ ಬಿದ್ದಿದ್ದಾಳೆ. ಅದೇ ರಸ್ತೆಯಲ್ಲಿ ಹೋಗುತ್ತಿದ್ದ ಮತ್ತೊಬ್ಬ ಕಾರ್ ಚಾಲಕ ರಸ್ತೆ ಬದಿಯಲ್ಲಿ ಅಳುತ್ತಿರುವ ಮಗುವನ್ನು ಕಂಡು ಆಗುಂಬೆ ಪೊಲೀಸರಿಗೆ ಒಪ್ಪಿಸಿದ್ದಾನೆ.

ಮಗುವಿಲ್ಲದೆ ಕೊಪ್ಪದ ವರೆಗೆ ಪ್ರಯಾಣಿಸಿದ ಪೋಷಕರು, ಬಳಿಕ ಮಗು ಇಲ್ಲದನ್ನು ಗಮನಿಸಿ ಬಂದ ದಾರಿಯಲ್ಲೇ ವಾಪಸ್ ಮಗುವಿಗಾಗಿ ಹುಡುಕಾಟ ನಡೆಸಿದ್ದಾರೆ. ಆಗುಂಬೆ ಚೆಕ್ ಪೋಸ್ಟ್ ನಲ್ಲಿ ವಿಚಾರಿಸಿದ್ದಾರೆ. ನಂತರ ಮಗು ಆಗುಂಬೆ ಪೊಲೀಸ್ ಠಾಣೆಯಲ್ಲಿ ಸುರಕ್ಷಿತವಾಗಿ ಇರುವುದು ಗೊತ್ತಾಗಿದೆ. ಬಳಿಕ ಮಗುವನ್ನು ಠಾಣೆಯಿಂದ ಪಡೆದು ತೆರಳಿದ್ದಾರೆ.

Published On - 4:10 pm, Fri, 31 January 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us