AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಆಫ್ರಿಕಾ ಸೋಂಕು ಎಂದು ರಾಂಗ್​ ರಿಪೋರ್ಟ್​.. ಆರೋಗ್ಯ ಇಲಾಖೆ ವಿರುದ್ಧ ಶಿವಮೊಗ್ಗ ವ್ಯಾಪಾರಿ ಆಕ್ರೋಶ

ಕೊವಿಡ್​ ಟೆಸ್ಟ್​ ವರದಿ ನೀಡುವುದು ವಿಳಂಬ ಮಾಡಿ ಎಡವಟ್ಟು ಮಾಡಲಾಗಿದೆ. ಅನಗತ್ಯವಾಗಿ ರೂಪಾಂತರಿ ವೈರಸ್​ ತಗುಲಿದೆ ಎಂದು ನನ್ನನ್ನು ಮತ್ತು ನನ್ನ ಕುಟುಂಬಸ್ಥರನ್ನು ಕೊವಿಡ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ವಿನಾಕಾರಣ ನನಗೆ, ನನ್ನ ಕುಟುಂಬಕ್ಕೆ ತೊಂದರೆ ಕೊಟ್ಟಿದ್ದಾರೆ ಎಂದು ಶಿವಮೊಗ್ಗ ವ್ಯಕ್ತಿ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ದಕ್ಷಿಣ ಆಫ್ರಿಕಾ ಸೋಂಕು ಎಂದು ರಾಂಗ್​ ರಿಪೋರ್ಟ್​.. ಆರೋಗ್ಯ ಇಲಾಖೆ ವಿರುದ್ಧ ಶಿವಮೊಗ್ಗ ವ್ಯಾಪಾರಿ ಆಕ್ರೋಶ
ನೊಂದ ಕುಟುಂಬದಿಂದ ಅಧಿಕಾರಿಗಳಿಗೆ ತರಾಟೆ
ಆಯೇಷಾ ಬಾನು
| Edited By: |

Updated on:Mar 12, 2021 | 2:51 PM

Share

ಶಿವಮೊಗ್ಗ: ಕೆಲ ದಿನಗಳ ಹಿಂದೆ ದುಬೈನಿಂದ ಬಂದಿದ್ದ ಶಿವಮೊಗ್ಗ ಮೂಲಕದ ವ್ಯಕ್ತಿಯಲ್ಲಿ ದಕ್ಷಿಣ ಆಫ್ರಿಕಾದ ಸೋಂಕು ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿತ್ತು. ಬಳಿಕ ವ್ಯಕ್ತಿಯ ಕುಟುಂಬ ಸೇರಿ ಏರಿಯಾದ ಜನರಿಗೆಲ್ಲ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಸದ್ಯ ಈಗ ವ್ಯಕ್ತಿಯ ಕೊರೊನಾ ವರದಿ ನೆಗೆಟಿವ್ ಬಂದಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆದ್ರೆ ಇಲ್ಲೊಂದು ದೊಡ್ಡ ಎಡವಟ್ಟು ಸಂಭವಿಸಿದ್ದು ನನ್ನ ಬಾಳು ಅತಂತ್ರವಾಗಿದೆ ಎಂದು ಶಿವಮೊಗ್ಗದ ವ್ಯಕ್ತಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಕೊವಿಡ್​ ಟೆಸ್ಟ್​ ವರದಿ ನೀಡುವುದು ವಿಳಂಬ ಮಾಡಿ ಎಡವಟ್ಟು ಮಾಡಲಾಗಿದೆ. ಅನಗತ್ಯವಾಗಿ ರೂಪಾಂತರಿ ವೈರಸ್​ ತಗುಲಿದೆ ಎಂದು ನನ್ನನ್ನು ಮತ್ತು ನನ್ನ ಕುಟುಂಬಸ್ಥರನ್ನು ಕೊವಿಡ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ವಿನಾಕಾರಣ ನನಗೆ, ನನ್ನ ಕುಟುಂಬಕ್ಕೆ ತೊಂದರೆ ಕೊಟ್ಟಿದ್ದಾರೆ ಎಂದು ಶಿವಮೊಗ್ಗ ವ್ಯಕ್ತಿ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಫೆಬ್ರವರಿ 22ರಂದು ಸ್ಯಾಂಪಲ್ ಪಡೆದು ಮಾರ್ಚ್ 10ರಂದು ವರದಿ ನೀಡಲಾಗಿದೆ. ಅಂದು ದಕ್ಷಿಣ ಆಫ್ರಿಕಾ ರೂಪಾಂತರಿ ವೈರಸ್​ ಎಂದು ರಿಪೋರ್ಟ್ ನೀಡಿದ್ದಾರೆ. ಆದ್ರೆ ನಿನ್ನೆ(ಮಾರ್ಚ್ 11) ಬಂದಿರುವ ಕೊವಿಡ್​ ರಿಪೋರ್ಟ್​ನಲ್ಲಿ ನೆಗೆಟಿವ್​ ಇದೆ. ವಿನಾಕಾರಣ ನನ್ನ, ಕುಟುಂಬದ ತೇಜೋವಧೆ ಮಾಡಿದ್ದಾರೆ ಎಂದು ಕೊರೊನಾ ಸೋಂಕಿನಿಂದ ಗುಣಮುಖರಾದ ವ್ಯಕ್ತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮ್ಮ ಏರಿಯಾ ಜನ ನಮ್ಮನೆ ಬಳಿ ಯಾರೂ ಸುಳಿಯುತ್ತಿಲ್ಲ. ದಿನಸಿ ಅಂಗಡಿ ಇಟ್ಟುಕೊಂಡು ಬದುಕ್ತಿದ್ದ ಕುಟುಂಬ ಅತಂತ್ರವಾಗಿದೆ. ನಾವು ಬದುಕುವುದು ಹೇಗೆಂದು ಕುಟುಂಬ ಕಣ್ಣೀರಿಡುತ್ತಿದೆ. ಮನೆ ಬಳಿ ಬಂದಿದ್ದ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ನೊಂದ ಕುಟುಂಬಸ್ಥರು ಮತ್ತು ಸಂಬಂಧಿಕರು ತರಾಟೆಗೆ ತೆಗೆದುಕೊಂಡಿದ್ದಾರೆ. ನಿಮ್ಮ ನಿರ್ಲಕ್ಷ್ಯದಿಂದ ನಮ್ಮ ಕುಟುಂಬಕ್ಕೆ ಹಾನಿಯಾಗಿದೆ. ನಾವು ಮಾನಸಿಕವಾಗಿ ನೋವು ಅನುಭವಿಸುತ್ತಿದ್ದೇವೆ ಎಂದು ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: ಸ್ವಲ್ಪದರಲ್ಲಿ ತಪ್ಪಿತು ಭಾರಿ ಗಂಡಾಂತರ: ಶಿವಮೊಗ್ಗದಿಂದ ತೊಲಗಿತು ದಕ್ಷಿಣ ಆಫ್ರಿಕಾ ರೂಪಾಂತರ

ಮಲೆನಾಡಿನಲ್ಲಿ ಸೌತ್ ಆಫ್ರಿಕಾ ವೈರಸ್.. ದುಬೈನಿಂದ ಮರಳಿದ ಶಿವಮೊಗ್ಗದ ವ್ಯಕ್ತಿಗೆ ಸೋಂಕು

Published On - 2:49 pm, Fri, 12 March 21

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು