AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಆಫ್ರಿಕಾ ಸೋಂಕು ಎಂದು ರಾಂಗ್​ ರಿಪೋರ್ಟ್​.. ಆರೋಗ್ಯ ಇಲಾಖೆ ವಿರುದ್ಧ ಶಿವಮೊಗ್ಗ ವ್ಯಾಪಾರಿ ಆಕ್ರೋಶ

ಕೊವಿಡ್​ ಟೆಸ್ಟ್​ ವರದಿ ನೀಡುವುದು ವಿಳಂಬ ಮಾಡಿ ಎಡವಟ್ಟು ಮಾಡಲಾಗಿದೆ. ಅನಗತ್ಯವಾಗಿ ರೂಪಾಂತರಿ ವೈರಸ್​ ತಗುಲಿದೆ ಎಂದು ನನ್ನನ್ನು ಮತ್ತು ನನ್ನ ಕುಟುಂಬಸ್ಥರನ್ನು ಕೊವಿಡ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ವಿನಾಕಾರಣ ನನಗೆ, ನನ್ನ ಕುಟುಂಬಕ್ಕೆ ತೊಂದರೆ ಕೊಟ್ಟಿದ್ದಾರೆ ಎಂದು ಶಿವಮೊಗ್ಗ ವ್ಯಕ್ತಿ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ದಕ್ಷಿಣ ಆಫ್ರಿಕಾ ಸೋಂಕು ಎಂದು ರಾಂಗ್​ ರಿಪೋರ್ಟ್​.. ಆರೋಗ್ಯ ಇಲಾಖೆ ವಿರುದ್ಧ ಶಿವಮೊಗ್ಗ ವ್ಯಾಪಾರಿ ಆಕ್ರೋಶ
ನೊಂದ ಕುಟುಂಬದಿಂದ ಅಧಿಕಾರಿಗಳಿಗೆ ತರಾಟೆ
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Mar 12, 2021 | 2:51 PM

Share

ಶಿವಮೊಗ್ಗ: ಕೆಲ ದಿನಗಳ ಹಿಂದೆ ದುಬೈನಿಂದ ಬಂದಿದ್ದ ಶಿವಮೊಗ್ಗ ಮೂಲಕದ ವ್ಯಕ್ತಿಯಲ್ಲಿ ದಕ್ಷಿಣ ಆಫ್ರಿಕಾದ ಸೋಂಕು ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿತ್ತು. ಬಳಿಕ ವ್ಯಕ್ತಿಯ ಕುಟುಂಬ ಸೇರಿ ಏರಿಯಾದ ಜನರಿಗೆಲ್ಲ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಸದ್ಯ ಈಗ ವ್ಯಕ್ತಿಯ ಕೊರೊನಾ ವರದಿ ನೆಗೆಟಿವ್ ಬಂದಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆದ್ರೆ ಇಲ್ಲೊಂದು ದೊಡ್ಡ ಎಡವಟ್ಟು ಸಂಭವಿಸಿದ್ದು ನನ್ನ ಬಾಳು ಅತಂತ್ರವಾಗಿದೆ ಎಂದು ಶಿವಮೊಗ್ಗದ ವ್ಯಕ್ತಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಕೊವಿಡ್​ ಟೆಸ್ಟ್​ ವರದಿ ನೀಡುವುದು ವಿಳಂಬ ಮಾಡಿ ಎಡವಟ್ಟು ಮಾಡಲಾಗಿದೆ. ಅನಗತ್ಯವಾಗಿ ರೂಪಾಂತರಿ ವೈರಸ್​ ತಗುಲಿದೆ ಎಂದು ನನ್ನನ್ನು ಮತ್ತು ನನ್ನ ಕುಟುಂಬಸ್ಥರನ್ನು ಕೊವಿಡ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ವಿನಾಕಾರಣ ನನಗೆ, ನನ್ನ ಕುಟುಂಬಕ್ಕೆ ತೊಂದರೆ ಕೊಟ್ಟಿದ್ದಾರೆ ಎಂದು ಶಿವಮೊಗ್ಗ ವ್ಯಕ್ತಿ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಫೆಬ್ರವರಿ 22ರಂದು ಸ್ಯಾಂಪಲ್ ಪಡೆದು ಮಾರ್ಚ್ 10ರಂದು ವರದಿ ನೀಡಲಾಗಿದೆ. ಅಂದು ದಕ್ಷಿಣ ಆಫ್ರಿಕಾ ರೂಪಾಂತರಿ ವೈರಸ್​ ಎಂದು ರಿಪೋರ್ಟ್ ನೀಡಿದ್ದಾರೆ. ಆದ್ರೆ ನಿನ್ನೆ(ಮಾರ್ಚ್ 11) ಬಂದಿರುವ ಕೊವಿಡ್​ ರಿಪೋರ್ಟ್​ನಲ್ಲಿ ನೆಗೆಟಿವ್​ ಇದೆ. ವಿನಾಕಾರಣ ನನ್ನ, ಕುಟುಂಬದ ತೇಜೋವಧೆ ಮಾಡಿದ್ದಾರೆ ಎಂದು ಕೊರೊನಾ ಸೋಂಕಿನಿಂದ ಗುಣಮುಖರಾದ ವ್ಯಕ್ತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮ್ಮ ಏರಿಯಾ ಜನ ನಮ್ಮನೆ ಬಳಿ ಯಾರೂ ಸುಳಿಯುತ್ತಿಲ್ಲ. ದಿನಸಿ ಅಂಗಡಿ ಇಟ್ಟುಕೊಂಡು ಬದುಕ್ತಿದ್ದ ಕುಟುಂಬ ಅತಂತ್ರವಾಗಿದೆ. ನಾವು ಬದುಕುವುದು ಹೇಗೆಂದು ಕುಟುಂಬ ಕಣ್ಣೀರಿಡುತ್ತಿದೆ. ಮನೆ ಬಳಿ ಬಂದಿದ್ದ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ನೊಂದ ಕುಟುಂಬಸ್ಥರು ಮತ್ತು ಸಂಬಂಧಿಕರು ತರಾಟೆಗೆ ತೆಗೆದುಕೊಂಡಿದ್ದಾರೆ. ನಿಮ್ಮ ನಿರ್ಲಕ್ಷ್ಯದಿಂದ ನಮ್ಮ ಕುಟುಂಬಕ್ಕೆ ಹಾನಿಯಾಗಿದೆ. ನಾವು ಮಾನಸಿಕವಾಗಿ ನೋವು ಅನುಭವಿಸುತ್ತಿದ್ದೇವೆ ಎಂದು ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: ಸ್ವಲ್ಪದರಲ್ಲಿ ತಪ್ಪಿತು ಭಾರಿ ಗಂಡಾಂತರ: ಶಿವಮೊಗ್ಗದಿಂದ ತೊಲಗಿತು ದಕ್ಷಿಣ ಆಫ್ರಿಕಾ ರೂಪಾಂತರ

ಮಲೆನಾಡಿನಲ್ಲಿ ಸೌತ್ ಆಫ್ರಿಕಾ ವೈರಸ್.. ದುಬೈನಿಂದ ಮರಳಿದ ಶಿವಮೊಗ್ಗದ ವ್ಯಕ್ತಿಗೆ ಸೋಂಕು

Published On - 2:49 pm, Fri, 12 March 21

ರಾಹುಲ್ ಬರುವ ಮೊದಲು ಶಾಸಕರ, ಕಾರ್ಯಕರ್ತರ ಸಭೆ: ಶಿವಕುಮಾರ್
ರಾಹುಲ್ ಬರುವ ಮೊದಲು ಶಾಸಕರ, ಕಾರ್ಯಕರ್ತರ ಸಭೆ: ಶಿವಕುಮಾರ್
‘ನಿಂಗ್ಯಾಕೆ ಬೇಕು ಇದೆಲ್ಲ’: ಪ್ರಥಮ್ ವಿರುದ್ಧ ನಿರ್ಮಾಪಕ ಕೆ ಮಂಜು
‘ನಿಂಗ್ಯಾಕೆ ಬೇಕು ಇದೆಲ್ಲ’: ಪ್ರಥಮ್ ವಿರುದ್ಧ ನಿರ್ಮಾಪಕ ಕೆ ಮಂಜು
ಸಿದ್ದರಾಮಯ್ಯರಿಂದ ಶಾಸಕರನ್ನೆಲ್ಲ ತಮ್ಮೆಡೆ ಸೆಳೆದುಕೊಳ್ಳುವ ಹುನ್ನಾರ: ಅಶೋಕ
ಸಿದ್ದರಾಮಯ್ಯರಿಂದ ಶಾಸಕರನ್ನೆಲ್ಲ ತಮ್ಮೆಡೆ ಸೆಳೆದುಕೊಳ್ಳುವ ಹುನ್ನಾರ: ಅಶೋಕ
ಸತೀಶ್ ಜಾರಕಿಹೊಳಿ ಸೇರಿದಂತೆ ಯಾರೂ ತನ್ನ ಪರ ಮಾತಾಡಲಿಲ್ಲ: ಕರೆಮ್ಮ, ಶಾಸಕಿ
ಸತೀಶ್ ಜಾರಕಿಹೊಳಿ ಸೇರಿದಂತೆ ಯಾರೂ ತನ್ನ ಪರ ಮಾತಾಡಲಿಲ್ಲ: ಕರೆಮ್ಮ, ಶಾಸಕಿ
ಧರ್ಮಸ್ಥಳ ಪ್ರಕರಣ: 2ನೇ ದಿನವೂ ಶವಗಳಿಗಾಗಿ ಮುಂದುವರಿದ ಶೋಧ
ಧರ್ಮಸ್ಥಳ ಪ್ರಕರಣ: 2ನೇ ದಿನವೂ ಶವಗಳಿಗಾಗಿ ಮುಂದುವರಿದ ಶೋಧ
ಶಾಸಕರೊಂದಿಗೆ ಸಭೆ ನಡೆಸುವುದು ಸಿಎಂರ ಪರಮೋಚ್ಛ ಅಧಿಕಾರ: ಸುರೇಶ್
ಶಾಸಕರೊಂದಿಗೆ ಸಭೆ ನಡೆಸುವುದು ಸಿಎಂರ ಪರಮೋಚ್ಛ ಅಧಿಕಾರ: ಸುರೇಶ್
ಬೆಳಗಿನ ಜಾವ 3.50ಕ್ಕೆ ಸಂಭವಿಸಿರುವ ಅಪಘಾತ, ಲಾರಿಯ ಆರ್ಧಭಾಗ ರಸ್ತೆ ಮೇಲಿದೆ
ಬೆಳಗಿನ ಜಾವ 3.50ಕ್ಕೆ ಸಂಭವಿಸಿರುವ ಅಪಘಾತ, ಲಾರಿಯ ಆರ್ಧಭಾಗ ರಸ್ತೆ ಮೇಲಿದೆ
ಕೆಎಂಎಫ್​​ಗೆ ಮೆಜಾರಿಟಿ ಇರುವ ಪಕ್ಷದವರು ಅಧ್ಯಕ್ಷರಾಗುತ್ತಾರೆ: ಜಾರಕಿಹೊಳಿ
ಕೆಎಂಎಫ್​​ಗೆ ಮೆಜಾರಿಟಿ ಇರುವ ಪಕ್ಷದವರು ಅಧ್ಯಕ್ಷರಾಗುತ್ತಾರೆ: ಜಾರಕಿಹೊಳಿ
ಪ್ರತಿಭಟನೆ ಸ್ವರೂಪವನ್ನು ಸಿಎಂ, ಡಿಸಿಎಂ ಇನ್ನೂ ನಿರ್ಧರಿಸಿಲ್ಲ: ಪರಮೇಶ್ವರ್
ಪ್ರತಿಭಟನೆ ಸ್ವರೂಪವನ್ನು ಸಿಎಂ, ಡಿಸಿಎಂ ಇನ್ನೂ ನಿರ್ಧರಿಸಿಲ್ಲ: ಪರಮೇಶ್ವರ್
ಪೊಲೀಸರು ಹಿಡಿದಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ
ಪೊಲೀಸರು ಹಿಡಿದಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ