AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಆಫ್ರಿಕಾ ಸೋಂಕು ಎಂದು ರಾಂಗ್​ ರಿಪೋರ್ಟ್​.. ಆರೋಗ್ಯ ಇಲಾಖೆ ವಿರುದ್ಧ ಶಿವಮೊಗ್ಗ ವ್ಯಾಪಾರಿ ಆಕ್ರೋಶ

ಕೊವಿಡ್​ ಟೆಸ್ಟ್​ ವರದಿ ನೀಡುವುದು ವಿಳಂಬ ಮಾಡಿ ಎಡವಟ್ಟು ಮಾಡಲಾಗಿದೆ. ಅನಗತ್ಯವಾಗಿ ರೂಪಾಂತರಿ ವೈರಸ್​ ತಗುಲಿದೆ ಎಂದು ನನ್ನನ್ನು ಮತ್ತು ನನ್ನ ಕುಟುಂಬಸ್ಥರನ್ನು ಕೊವಿಡ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ವಿನಾಕಾರಣ ನನಗೆ, ನನ್ನ ಕುಟುಂಬಕ್ಕೆ ತೊಂದರೆ ಕೊಟ್ಟಿದ್ದಾರೆ ಎಂದು ಶಿವಮೊಗ್ಗ ವ್ಯಕ್ತಿ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ದಕ್ಷಿಣ ಆಫ್ರಿಕಾ ಸೋಂಕು ಎಂದು ರಾಂಗ್​ ರಿಪೋರ್ಟ್​.. ಆರೋಗ್ಯ ಇಲಾಖೆ ವಿರುದ್ಧ ಶಿವಮೊಗ್ಗ ವ್ಯಾಪಾರಿ ಆಕ್ರೋಶ
ನೊಂದ ಕುಟುಂಬದಿಂದ ಅಧಿಕಾರಿಗಳಿಗೆ ತರಾಟೆ
ಆಯೇಷಾ ಬಾನು
| Edited By: |

Updated on:Mar 12, 2021 | 2:51 PM

Share

ಶಿವಮೊಗ್ಗ: ಕೆಲ ದಿನಗಳ ಹಿಂದೆ ದುಬೈನಿಂದ ಬಂದಿದ್ದ ಶಿವಮೊಗ್ಗ ಮೂಲಕದ ವ್ಯಕ್ತಿಯಲ್ಲಿ ದಕ್ಷಿಣ ಆಫ್ರಿಕಾದ ಸೋಂಕು ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿತ್ತು. ಬಳಿಕ ವ್ಯಕ್ತಿಯ ಕುಟುಂಬ ಸೇರಿ ಏರಿಯಾದ ಜನರಿಗೆಲ್ಲ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಸದ್ಯ ಈಗ ವ್ಯಕ್ತಿಯ ಕೊರೊನಾ ವರದಿ ನೆಗೆಟಿವ್ ಬಂದಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆದ್ರೆ ಇಲ್ಲೊಂದು ದೊಡ್ಡ ಎಡವಟ್ಟು ಸಂಭವಿಸಿದ್ದು ನನ್ನ ಬಾಳು ಅತಂತ್ರವಾಗಿದೆ ಎಂದು ಶಿವಮೊಗ್ಗದ ವ್ಯಕ್ತಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಕೊವಿಡ್​ ಟೆಸ್ಟ್​ ವರದಿ ನೀಡುವುದು ವಿಳಂಬ ಮಾಡಿ ಎಡವಟ್ಟು ಮಾಡಲಾಗಿದೆ. ಅನಗತ್ಯವಾಗಿ ರೂಪಾಂತರಿ ವೈರಸ್​ ತಗುಲಿದೆ ಎಂದು ನನ್ನನ್ನು ಮತ್ತು ನನ್ನ ಕುಟುಂಬಸ್ಥರನ್ನು ಕೊವಿಡ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ವಿನಾಕಾರಣ ನನಗೆ, ನನ್ನ ಕುಟುಂಬಕ್ಕೆ ತೊಂದರೆ ಕೊಟ್ಟಿದ್ದಾರೆ ಎಂದು ಶಿವಮೊಗ್ಗ ವ್ಯಕ್ತಿ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಫೆಬ್ರವರಿ 22ರಂದು ಸ್ಯಾಂಪಲ್ ಪಡೆದು ಮಾರ್ಚ್ 10ರಂದು ವರದಿ ನೀಡಲಾಗಿದೆ. ಅಂದು ದಕ್ಷಿಣ ಆಫ್ರಿಕಾ ರೂಪಾಂತರಿ ವೈರಸ್​ ಎಂದು ರಿಪೋರ್ಟ್ ನೀಡಿದ್ದಾರೆ. ಆದ್ರೆ ನಿನ್ನೆ(ಮಾರ್ಚ್ 11) ಬಂದಿರುವ ಕೊವಿಡ್​ ರಿಪೋರ್ಟ್​ನಲ್ಲಿ ನೆಗೆಟಿವ್​ ಇದೆ. ವಿನಾಕಾರಣ ನನ್ನ, ಕುಟುಂಬದ ತೇಜೋವಧೆ ಮಾಡಿದ್ದಾರೆ ಎಂದು ಕೊರೊನಾ ಸೋಂಕಿನಿಂದ ಗುಣಮುಖರಾದ ವ್ಯಕ್ತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮ್ಮ ಏರಿಯಾ ಜನ ನಮ್ಮನೆ ಬಳಿ ಯಾರೂ ಸುಳಿಯುತ್ತಿಲ್ಲ. ದಿನಸಿ ಅಂಗಡಿ ಇಟ್ಟುಕೊಂಡು ಬದುಕ್ತಿದ್ದ ಕುಟುಂಬ ಅತಂತ್ರವಾಗಿದೆ. ನಾವು ಬದುಕುವುದು ಹೇಗೆಂದು ಕುಟುಂಬ ಕಣ್ಣೀರಿಡುತ್ತಿದೆ. ಮನೆ ಬಳಿ ಬಂದಿದ್ದ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ನೊಂದ ಕುಟುಂಬಸ್ಥರು ಮತ್ತು ಸಂಬಂಧಿಕರು ತರಾಟೆಗೆ ತೆಗೆದುಕೊಂಡಿದ್ದಾರೆ. ನಿಮ್ಮ ನಿರ್ಲಕ್ಷ್ಯದಿಂದ ನಮ್ಮ ಕುಟುಂಬಕ್ಕೆ ಹಾನಿಯಾಗಿದೆ. ನಾವು ಮಾನಸಿಕವಾಗಿ ನೋವು ಅನುಭವಿಸುತ್ತಿದ್ದೇವೆ ಎಂದು ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: ಸ್ವಲ್ಪದರಲ್ಲಿ ತಪ್ಪಿತು ಭಾರಿ ಗಂಡಾಂತರ: ಶಿವಮೊಗ್ಗದಿಂದ ತೊಲಗಿತು ದಕ್ಷಿಣ ಆಫ್ರಿಕಾ ರೂಪಾಂತರ

ಮಲೆನಾಡಿನಲ್ಲಿ ಸೌತ್ ಆಫ್ರಿಕಾ ವೈರಸ್.. ದುಬೈನಿಂದ ಮರಳಿದ ಶಿವಮೊಗ್ಗದ ವ್ಯಕ್ತಿಗೆ ಸೋಂಕು

Published On - 2:49 pm, Fri, 12 March 21

ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ