AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಆಫ್ರಿಕಾ ಸೋಂಕು ಎಂದು ರಾಂಗ್​ ರಿಪೋರ್ಟ್​.. ಆರೋಗ್ಯ ಇಲಾಖೆ ವಿರುದ್ಧ ಶಿವಮೊಗ್ಗ ವ್ಯಾಪಾರಿ ಆಕ್ರೋಶ

ಕೊವಿಡ್​ ಟೆಸ್ಟ್​ ವರದಿ ನೀಡುವುದು ವಿಳಂಬ ಮಾಡಿ ಎಡವಟ್ಟು ಮಾಡಲಾಗಿದೆ. ಅನಗತ್ಯವಾಗಿ ರೂಪಾಂತರಿ ವೈರಸ್​ ತಗುಲಿದೆ ಎಂದು ನನ್ನನ್ನು ಮತ್ತು ನನ್ನ ಕುಟುಂಬಸ್ಥರನ್ನು ಕೊವಿಡ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ವಿನಾಕಾರಣ ನನಗೆ, ನನ್ನ ಕುಟುಂಬಕ್ಕೆ ತೊಂದರೆ ಕೊಟ್ಟಿದ್ದಾರೆ ಎಂದು ಶಿವಮೊಗ್ಗ ವ್ಯಕ್ತಿ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ದಕ್ಷಿಣ ಆಫ್ರಿಕಾ ಸೋಂಕು ಎಂದು ರಾಂಗ್​ ರಿಪೋರ್ಟ್​.. ಆರೋಗ್ಯ ಇಲಾಖೆ ವಿರುದ್ಧ ಶಿವಮೊಗ್ಗ ವ್ಯಾಪಾರಿ ಆಕ್ರೋಶ
ನೊಂದ ಕುಟುಂಬದಿಂದ ಅಧಿಕಾರಿಗಳಿಗೆ ತರಾಟೆ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Mar 12, 2021 | 2:51 PM

ಶಿವಮೊಗ್ಗ: ಕೆಲ ದಿನಗಳ ಹಿಂದೆ ದುಬೈನಿಂದ ಬಂದಿದ್ದ ಶಿವಮೊಗ್ಗ ಮೂಲಕದ ವ್ಯಕ್ತಿಯಲ್ಲಿ ದಕ್ಷಿಣ ಆಫ್ರಿಕಾದ ಸೋಂಕು ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿತ್ತು. ಬಳಿಕ ವ್ಯಕ್ತಿಯ ಕುಟುಂಬ ಸೇರಿ ಏರಿಯಾದ ಜನರಿಗೆಲ್ಲ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಸದ್ಯ ಈಗ ವ್ಯಕ್ತಿಯ ಕೊರೊನಾ ವರದಿ ನೆಗೆಟಿವ್ ಬಂದಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆದ್ರೆ ಇಲ್ಲೊಂದು ದೊಡ್ಡ ಎಡವಟ್ಟು ಸಂಭವಿಸಿದ್ದು ನನ್ನ ಬಾಳು ಅತಂತ್ರವಾಗಿದೆ ಎಂದು ಶಿವಮೊಗ್ಗದ ವ್ಯಕ್ತಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಕೊವಿಡ್​ ಟೆಸ್ಟ್​ ವರದಿ ನೀಡುವುದು ವಿಳಂಬ ಮಾಡಿ ಎಡವಟ್ಟು ಮಾಡಲಾಗಿದೆ. ಅನಗತ್ಯವಾಗಿ ರೂಪಾಂತರಿ ವೈರಸ್​ ತಗುಲಿದೆ ಎಂದು ನನ್ನನ್ನು ಮತ್ತು ನನ್ನ ಕುಟುಂಬಸ್ಥರನ್ನು ಕೊವಿಡ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ವಿನಾಕಾರಣ ನನಗೆ, ನನ್ನ ಕುಟುಂಬಕ್ಕೆ ತೊಂದರೆ ಕೊಟ್ಟಿದ್ದಾರೆ ಎಂದು ಶಿವಮೊಗ್ಗ ವ್ಯಕ್ತಿ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಫೆಬ್ರವರಿ 22ರಂದು ಸ್ಯಾಂಪಲ್ ಪಡೆದು ಮಾರ್ಚ್ 10ರಂದು ವರದಿ ನೀಡಲಾಗಿದೆ. ಅಂದು ದಕ್ಷಿಣ ಆಫ್ರಿಕಾ ರೂಪಾಂತರಿ ವೈರಸ್​ ಎಂದು ರಿಪೋರ್ಟ್ ನೀಡಿದ್ದಾರೆ. ಆದ್ರೆ ನಿನ್ನೆ(ಮಾರ್ಚ್ 11) ಬಂದಿರುವ ಕೊವಿಡ್​ ರಿಪೋರ್ಟ್​ನಲ್ಲಿ ನೆಗೆಟಿವ್​ ಇದೆ. ವಿನಾಕಾರಣ ನನ್ನ, ಕುಟುಂಬದ ತೇಜೋವಧೆ ಮಾಡಿದ್ದಾರೆ ಎಂದು ಕೊರೊನಾ ಸೋಂಕಿನಿಂದ ಗುಣಮುಖರಾದ ವ್ಯಕ್ತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮ್ಮ ಏರಿಯಾ ಜನ ನಮ್ಮನೆ ಬಳಿ ಯಾರೂ ಸುಳಿಯುತ್ತಿಲ್ಲ. ದಿನಸಿ ಅಂಗಡಿ ಇಟ್ಟುಕೊಂಡು ಬದುಕ್ತಿದ್ದ ಕುಟುಂಬ ಅತಂತ್ರವಾಗಿದೆ. ನಾವು ಬದುಕುವುದು ಹೇಗೆಂದು ಕುಟುಂಬ ಕಣ್ಣೀರಿಡುತ್ತಿದೆ. ಮನೆ ಬಳಿ ಬಂದಿದ್ದ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ನೊಂದ ಕುಟುಂಬಸ್ಥರು ಮತ್ತು ಸಂಬಂಧಿಕರು ತರಾಟೆಗೆ ತೆಗೆದುಕೊಂಡಿದ್ದಾರೆ. ನಿಮ್ಮ ನಿರ್ಲಕ್ಷ್ಯದಿಂದ ನಮ್ಮ ಕುಟುಂಬಕ್ಕೆ ಹಾನಿಯಾಗಿದೆ. ನಾವು ಮಾನಸಿಕವಾಗಿ ನೋವು ಅನುಭವಿಸುತ್ತಿದ್ದೇವೆ ಎಂದು ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: ಸ್ವಲ್ಪದರಲ್ಲಿ ತಪ್ಪಿತು ಭಾರಿ ಗಂಡಾಂತರ: ಶಿವಮೊಗ್ಗದಿಂದ ತೊಲಗಿತು ದಕ್ಷಿಣ ಆಫ್ರಿಕಾ ರೂಪಾಂತರ

ಮಲೆನಾಡಿನಲ್ಲಿ ಸೌತ್ ಆಫ್ರಿಕಾ ವೈರಸ್.. ದುಬೈನಿಂದ ಮರಳಿದ ಶಿವಮೊಗ್ಗದ ವ್ಯಕ್ತಿಗೆ ಸೋಂಕು

Published On - 2:49 pm, Fri, 12 March 21

ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ