AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಟುಂಬ ಸಮೇತ ಮೈಸೂರು ಝೂಗೆ ಶಿವಣ್ಣ ಭೇಟಿ.. ಅಭಿಮಾನದಿಂದ ಎದೆಯುಬ್ಬಿಸಿದ ಫ್ಯಾನ್ಸ್

ಮೈಸೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ತಮ್ಮ ಕುಟುಂಬ ಸಮೇತರಾಗಿ ಮೈಸೂರು ಮೃಗಾಲಯಕ್ಕೆ ಭೇಟಿ ನೀಡಿ ಫುಲ್ ಎಂಜಾಯ್ ಮಾಡಿದ್ದಾರೆ. ಇದೇ ವೇಳೆ, ತಮ್ಮ ನೆಚ್ಚಿನ ನಟನನ್ನು ಕಣ್ತುಂಬಿಕೊಂಡಿರುವ ಅಭಿಮಾನಿಗಳಂತೋ ಆಕಾಶದೆತ್ತರಕ್ಕೆ ಅಭಿಮಾನದಿಂದ ಹಾರಿದ್ದಾರೆ. ಕೊರೊನಾ ದಿಗ್ಬಂಧನದ ಭೀತಿಯಿಂದ ಸ್ವಲ್ಪಮಟ್ಟಿಗೆ ಮುಕ್ತರಾಗಿ ಜನ ಎಂದಿನಂತೆ ಜೀವನ ಸಾಗಿಸಲು ಮುಂದಾಗಿದ್ದಾರೆ. ರಾಜ್ಯದಲ್ಲಿ ಕೊರೊನಾ ಇದ್ದರೂ ಹೊಟ್ಟೆ ತುಂಬಿಸಿಕೊಳ್ಳಲು ಹೋರಾಡಲೇ ಬೇಕು ಎಂದು ಮುಂಜಾಗ್ರತೆಯೊಂದಿಗೆ ತಮ್ಮ ಕೆಲಸ ಕಾರ್ಯಗಳಲ್ಲಿ ತೊಡಗಿಕೊಂಡಿದ್ದಾರೆ. ಈಗ ಶಿವಣ್ಣ ಕೂಡ ಬಿಡುವು ಮಾಡಿಕೊಂಡು ಕುಟುಂಬ ಸಮೇತ […]

ಕುಟುಂಬ ಸಮೇತ ಮೈಸೂರು ಝೂಗೆ ಶಿವಣ್ಣ ಭೇಟಿ.. ಅಭಿಮಾನದಿಂದ ಎದೆಯುಬ್ಬಿಸಿದ ಫ್ಯಾನ್ಸ್
ಆಯೇಷಾ ಬಾನು
|

Updated on: Oct 01, 2020 | 3:20 PM

Share

ಮೈಸೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ತಮ್ಮ ಕುಟುಂಬ ಸಮೇತರಾಗಿ ಮೈಸೂರು ಮೃಗಾಲಯಕ್ಕೆ ಭೇಟಿ ನೀಡಿ ಫುಲ್ ಎಂಜಾಯ್ ಮಾಡಿದ್ದಾರೆ. ಇದೇ ವೇಳೆ, ತಮ್ಮ ನೆಚ್ಚಿನ ನಟನನ್ನು ಕಣ್ತುಂಬಿಕೊಂಡಿರುವ ಅಭಿಮಾನಿಗಳಂತೋ ಆಕಾಶದೆತ್ತರಕ್ಕೆ ಅಭಿಮಾನದಿಂದ ಹಾರಿದ್ದಾರೆ.

ಕೊರೊನಾ ದಿಗ್ಬಂಧನದ ಭೀತಿಯಿಂದ ಸ್ವಲ್ಪಮಟ್ಟಿಗೆ ಮುಕ್ತರಾಗಿ ಜನ ಎಂದಿನಂತೆ ಜೀವನ ಸಾಗಿಸಲು ಮುಂದಾಗಿದ್ದಾರೆ. ರಾಜ್ಯದಲ್ಲಿ ಕೊರೊನಾ ಇದ್ದರೂ ಹೊಟ್ಟೆ ತುಂಬಿಸಿಕೊಳ್ಳಲು ಹೋರಾಡಲೇ ಬೇಕು ಎಂದು ಮುಂಜಾಗ್ರತೆಯೊಂದಿಗೆ ತಮ್ಮ ಕೆಲಸ ಕಾರ್ಯಗಳಲ್ಲಿ ತೊಡಗಿಕೊಂಡಿದ್ದಾರೆ. ಈಗ ಶಿವಣ್ಣ ಕೂಡ ಬಿಡುವು ಮಾಡಿಕೊಂಡು ಕುಟುಂಬ ಸಮೇತ ಶ್ರೀ ಚಾಮರಾಜೇಂದ್ರ ಮೃಗಾಲಯಕ್ಕೆ ಭೇಟಿ ನೀಡಿದ್ದಾರೆ. ಪತ್ನಿ, ಇಬ್ಬರು ಮಕ್ಕಳು ಹಾಗೂ ಅಳಿಯನ ಜೊತೆ ಮೃಗಾಲಯವೆಲ್ಲ ಸುತ್ತಾಡಿ ಎಂಜಾಯ್ ಮಾಡಿದ್ದಾರೆ.

ಹಾಗೂ ತಾವು ದತ್ತು ಪಡೆದ ಪಾರ್ವತಿ ಆನೆಗೆ ಆಹಾರ ತಿನ್ನಿಸಿ ಖುಷಿ ಪಟ್ಟಿದ್ದಾರೆ. ಶಿವರಾಜ್ ಕುಮಾರ್ ಮೃಗಾಲಯದ ನಿರ್ವಹಣೆ ಕಾರ್ಯ ಹೇಗೆ ಸಾಗಿದೆ ಹಾಗೂ ಮೃಗಾಲಯದ ಬಗ್ಗೆ, ಪ್ರಾಣಿಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಇಡೀ ಮೃಗಾಲಯ ಸುತ್ತಾಡಿ ಪ್ರಾಣಿಗಳ ಕಂಡು ಸಂತೋಷ ಪಟ್ಟಿದ್ದಾರೆ.

ಅಪ್ಪಾಜಿ ಜೊತೆಗಿನ ಸಿನಿಮಾ ನೆನಪಾಯ್ತು: ಲಾಕ್​ಡೌನ್ ಮುಗಿದ ಮೇಲೆ ನಾನು ಮೊದಲ ಬಾರಿಗೆ ಬೆಂಗಳೂರು ಬಿಟ್ಟು ಹೊರಗೆ ಬಂದಿದ್ದೇನೆ. 6 ತಿಂಗಳ ನಂತರ ಮೊದಲು ಬಂದಿದ್ದೆ ಮೈಸೂರಿಗೆ. ಇಲ್ಲಿನ ಮೃಗಾಲಯ ನೋಡಿ ಖುಷಿಯಾಗಿದೆ. ಪ್ರಾಣಿಗಳನ್ನ ನೋಡಿದ ತಕ್ಷಣ ಎಂ.ಪಿ.ಶಂಕರ್ ನೆನಪಾದರು. ಅಪ್ಪಾಜಿ ಜೊತೆಗಿನ ಸಿನಿಮಾ ನೆನಪಾಯ್ತು. ಮೃಗಾಲಯ್ಕೆ ಭೇಟಿ ಕೊಟ್ಟಿದ್ದು ಖುಷಿಯಾಯ್ತು ಎಂದು ಮೈಸೂರಿನಲ್ಲಿ ನಟ ಶಿವರಾಜ್‌ಕುಮಾರ್ ಸಂಸತ ಹಂಚಿಕೊಂಡಿದ್ದಾರೆ.

Follow Us
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ