AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಟುಂಬ ಸಮೇತ ಮೈಸೂರು ಝೂಗೆ ಶಿವಣ್ಣ ಭೇಟಿ.. ಅಭಿಮಾನದಿಂದ ಎದೆಯುಬ್ಬಿಸಿದ ಫ್ಯಾನ್ಸ್

ಮೈಸೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ತಮ್ಮ ಕುಟುಂಬ ಸಮೇತರಾಗಿ ಮೈಸೂರು ಮೃಗಾಲಯಕ್ಕೆ ಭೇಟಿ ನೀಡಿ ಫುಲ್ ಎಂಜಾಯ್ ಮಾಡಿದ್ದಾರೆ. ಇದೇ ವೇಳೆ, ತಮ್ಮ ನೆಚ್ಚಿನ ನಟನನ್ನು ಕಣ್ತುಂಬಿಕೊಂಡಿರುವ ಅಭಿಮಾನಿಗಳಂತೋ ಆಕಾಶದೆತ್ತರಕ್ಕೆ ಅಭಿಮಾನದಿಂದ ಹಾರಿದ್ದಾರೆ. ಕೊರೊನಾ ದಿಗ್ಬಂಧನದ ಭೀತಿಯಿಂದ ಸ್ವಲ್ಪಮಟ್ಟಿಗೆ ಮುಕ್ತರಾಗಿ ಜನ ಎಂದಿನಂತೆ ಜೀವನ ಸಾಗಿಸಲು ಮುಂದಾಗಿದ್ದಾರೆ. ರಾಜ್ಯದಲ್ಲಿ ಕೊರೊನಾ ಇದ್ದರೂ ಹೊಟ್ಟೆ ತುಂಬಿಸಿಕೊಳ್ಳಲು ಹೋರಾಡಲೇ ಬೇಕು ಎಂದು ಮುಂಜಾಗ್ರತೆಯೊಂದಿಗೆ ತಮ್ಮ ಕೆಲಸ ಕಾರ್ಯಗಳಲ್ಲಿ ತೊಡಗಿಕೊಂಡಿದ್ದಾರೆ. ಈಗ ಶಿವಣ್ಣ ಕೂಡ ಬಿಡುವು ಮಾಡಿಕೊಂಡು ಕುಟುಂಬ ಸಮೇತ […]

ಕುಟುಂಬ ಸಮೇತ ಮೈಸೂರು ಝೂಗೆ ಶಿವಣ್ಣ ಭೇಟಿ.. ಅಭಿಮಾನದಿಂದ ಎದೆಯುಬ್ಬಿಸಿದ ಫ್ಯಾನ್ಸ್
ಆಯೇಷಾ ಬಾನು
|

Updated on: Oct 01, 2020 | 3:20 PM

Share

ಮೈಸೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ತಮ್ಮ ಕುಟುಂಬ ಸಮೇತರಾಗಿ ಮೈಸೂರು ಮೃಗಾಲಯಕ್ಕೆ ಭೇಟಿ ನೀಡಿ ಫುಲ್ ಎಂಜಾಯ್ ಮಾಡಿದ್ದಾರೆ. ಇದೇ ವೇಳೆ, ತಮ್ಮ ನೆಚ್ಚಿನ ನಟನನ್ನು ಕಣ್ತುಂಬಿಕೊಂಡಿರುವ ಅಭಿಮಾನಿಗಳಂತೋ ಆಕಾಶದೆತ್ತರಕ್ಕೆ ಅಭಿಮಾನದಿಂದ ಹಾರಿದ್ದಾರೆ.

ಕೊರೊನಾ ದಿಗ್ಬಂಧನದ ಭೀತಿಯಿಂದ ಸ್ವಲ್ಪಮಟ್ಟಿಗೆ ಮುಕ್ತರಾಗಿ ಜನ ಎಂದಿನಂತೆ ಜೀವನ ಸಾಗಿಸಲು ಮುಂದಾಗಿದ್ದಾರೆ. ರಾಜ್ಯದಲ್ಲಿ ಕೊರೊನಾ ಇದ್ದರೂ ಹೊಟ್ಟೆ ತುಂಬಿಸಿಕೊಳ್ಳಲು ಹೋರಾಡಲೇ ಬೇಕು ಎಂದು ಮುಂಜಾಗ್ರತೆಯೊಂದಿಗೆ ತಮ್ಮ ಕೆಲಸ ಕಾರ್ಯಗಳಲ್ಲಿ ತೊಡಗಿಕೊಂಡಿದ್ದಾರೆ. ಈಗ ಶಿವಣ್ಣ ಕೂಡ ಬಿಡುವು ಮಾಡಿಕೊಂಡು ಕುಟುಂಬ ಸಮೇತ ಶ್ರೀ ಚಾಮರಾಜೇಂದ್ರ ಮೃಗಾಲಯಕ್ಕೆ ಭೇಟಿ ನೀಡಿದ್ದಾರೆ. ಪತ್ನಿ, ಇಬ್ಬರು ಮಕ್ಕಳು ಹಾಗೂ ಅಳಿಯನ ಜೊತೆ ಮೃಗಾಲಯವೆಲ್ಲ ಸುತ್ತಾಡಿ ಎಂಜಾಯ್ ಮಾಡಿದ್ದಾರೆ.

ಹಾಗೂ ತಾವು ದತ್ತು ಪಡೆದ ಪಾರ್ವತಿ ಆನೆಗೆ ಆಹಾರ ತಿನ್ನಿಸಿ ಖುಷಿ ಪಟ್ಟಿದ್ದಾರೆ. ಶಿವರಾಜ್ ಕುಮಾರ್ ಮೃಗಾಲಯದ ನಿರ್ವಹಣೆ ಕಾರ್ಯ ಹೇಗೆ ಸಾಗಿದೆ ಹಾಗೂ ಮೃಗಾಲಯದ ಬಗ್ಗೆ, ಪ್ರಾಣಿಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಇಡೀ ಮೃಗಾಲಯ ಸುತ್ತಾಡಿ ಪ್ರಾಣಿಗಳ ಕಂಡು ಸಂತೋಷ ಪಟ್ಟಿದ್ದಾರೆ.

ಅಪ್ಪಾಜಿ ಜೊತೆಗಿನ ಸಿನಿಮಾ ನೆನಪಾಯ್ತು: ಲಾಕ್​ಡೌನ್ ಮುಗಿದ ಮೇಲೆ ನಾನು ಮೊದಲ ಬಾರಿಗೆ ಬೆಂಗಳೂರು ಬಿಟ್ಟು ಹೊರಗೆ ಬಂದಿದ್ದೇನೆ. 6 ತಿಂಗಳ ನಂತರ ಮೊದಲು ಬಂದಿದ್ದೆ ಮೈಸೂರಿಗೆ. ಇಲ್ಲಿನ ಮೃಗಾಲಯ ನೋಡಿ ಖುಷಿಯಾಗಿದೆ. ಪ್ರಾಣಿಗಳನ್ನ ನೋಡಿದ ತಕ್ಷಣ ಎಂ.ಪಿ.ಶಂಕರ್ ನೆನಪಾದರು. ಅಪ್ಪಾಜಿ ಜೊತೆಗಿನ ಸಿನಿಮಾ ನೆನಪಾಯ್ತು. ಮೃಗಾಲಯ್ಕೆ ಭೇಟಿ ಕೊಟ್ಟಿದ್ದು ಖುಷಿಯಾಯ್ತು ಎಂದು ಮೈಸೂರಿನಲ್ಲಿ ನಟ ಶಿವರಾಜ್‌ಕುಮಾರ್ ಸಂಸತ ಹಂಚಿಕೊಂಡಿದ್ದಾರೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್