AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ ಮಲಯಾಳಿ ಸಿನಿಮಾ ಚಿತ್ರೀಕರಣ: ಸ್ಥಳೀಯರಲ್ಲಿ ಹೆಚ್ಚಿದ ಕೊರೊನಾ ಆತಂಕ, DHO ಭೇಟಿ

ಜಿಲ್ಲೆಯಲ್ಲಿ ಮಲಯಾಳಿ ಸಿನಿಮಾ ಚಿತ್ರೀಕರಣ ನಡೆಯುತ್ತಿದ್ದು, ಈಗ ಆ ಭಾಗದ ಜನರಲ್ಲಿ ಕೊರೊನಾ ಹರಡುವ ಆತಂಕ ಎದುರಾಗಿದೆ. ಮಲಯಾಳಿ ಸಿನಿಮಾ ಚಿತ್ರೀಕರಣಕ್ಕಾಗಿ ಕೇರಳದಿಂದ ನೂರಾರು ಕಲಾವಿದರು, ಚಿತ್ರ ತಂತ್ರಜ್ಞರು ಹಾಸನಕ್ಕೆ ಆಗಮಿಸಿದ್ದಾರೆ.

ಹಾಸನದಲ್ಲಿ ಮಲಯಾಳಿ ಸಿನಿಮಾ ಚಿತ್ರೀಕರಣ: ಸ್ಥಳೀಯರಲ್ಲಿ ಹೆಚ್ಚಿದ ಕೊರೊನಾ ಆತಂಕ, DHO ಭೇಟಿ
ಶೂಟಿಂಗ್​ ನಡೆಯುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿದ DHO ಸತೀಶ್
ಪೃಥ್ವಿಶಂಕರ
| Edited By: |

Updated on: Mar 05, 2021 | 9:32 AM

Share

ಹಾಸನ: ಜಿಲ್ಲೆಯಲ್ಲಿ ಮಲಯಾಳಿ ಸಿನಿಮಾ ಚಿತ್ರೀಕರಣ ನಡೆಯುತ್ತಿದ್ದು, ಈಗ ಆ ಭಾಗದ ಜನರಲ್ಲಿ ಕೊರೊನಾ ಹರಡುವ ಆತಂಕ ಎದುರಾಗಿದೆ. ಮಲಯಾಳಿ ಸಿನಿಮಾ ಚಿತ್ರೀಕರಣಕ್ಕಾಗಿ ಕೇರಳದಿಂದ ನೂರಾರು ಕಲಾವಿದರು, ಚಿತ್ರ ತಂತ್ರಜ್ಞರು ಹಾಸನಕ್ಕೆ ಆಗಮಿಸಿದ್ದಾರೆ. ಹೀಗಾಗಿ ಅವರಿಂದ ಕೊರೊನಾ ಹರಡುವ ಭೀತಿ ಎದುರಾಗಿದೆ.

ಕೇರಳದಲ್ಲಿ ಕೊರೊನಾ ಎರಡನೆ ಅಲೆ ಆರಂಭವಾಗಿದ್ದು, ಕರ್ನಾಟಕಕ್ಕೂ ಆವರಿಸೋ ಭೀತಿ ಉಂಟಾಗಿದೆ. ಹಾಸನದ ಶೆಟ್ಟಿಹಳ್ಳಿ ಬಳಿ ಮಿನ್ನೆಲ್‌ ಮುರುಳಿ ಸಿನಿಮಾ ಚಿತ್ರೀಕರಣ ನಡೆಯುತ್ತಿದೆ. ಹೀಗಾಗಿ ಶೂಟಿಂಗ್ ಸ್ಥಳಕ್ಕೆ ಅರೋಗ್ಯ ಇಲಾಖೆ ಅಧಿಕಾರಿಗಳ ತಂಡ ಭೇಟಿ‌ ನೀಡಿ ಪರಿಶೀಲನೆ ನಡೆಸಿದೆ. ಜೊತೆಗೆ ಡಿಎಚ್ಓ ಡಾ‌.ಸತೀಶ್ ಅವರು ಪ್ರೊಡಕ್ಷನ್ ತಂಡಕ್ಕೆ ಎಚ್ಚರಿಕೆ ಸಹ ನೀಡಿದ್ದಾರೆ.

ಎಲ್ಲರಿಗೂ ಕಡ್ಡಾಯವಾಗಿ ಕೊರೊನಾ ಟೆಸ್ಟ್ ಮಾಡಿಸಲು ಸೂಚನೆ ನೀಡಿದ್ದಾರೆ. ಅದು ಸಾಲದೆಂಬಂತೆ ಕೇರಳ ಕಲಾವಿದರ ಜೊತೆ ಚಿತ್ರೀಕರಣದಲ್ಲಿ‌ ಸಾವಿರಾರು ಸಂಖ್ಯೆಯ ಸ್ಥಳೀಯರು ಸಹ ಭಾಗಿಯಾಗಿದ್ದಾರೆ. ಹೀಗಾಗಿ ಸೂಕ್ತ ಮುನ್ನೆಚ್ಚರಿಕೆ ವಹಿಸದಿದ್ದರೆ ಅಪಾಯ ಕಟ್ಟಿಟ್ಟಬುತ್ತಿಯಾಗಿದೆ. ಕಳೆದ 8 ದಿನಗಳಿಂದ ನಡೆಯುತ್ತಿರೋ ಶೂಟಿಂಗ್​ನಿಂದಾಗಿ ಸ್ಥಳೀಯರಲ್ಲಿ ಕೊರೊನಾ ಭಯ ಶುರುವಾಗಿದೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್