AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ ಮಲಯಾಳಿ ಸಿನಿಮಾ ಚಿತ್ರೀಕರಣ: ಸ್ಥಳೀಯರಲ್ಲಿ ಹೆಚ್ಚಿದ ಕೊರೊನಾ ಆತಂಕ, DHO ಭೇಟಿ

ಜಿಲ್ಲೆಯಲ್ಲಿ ಮಲಯಾಳಿ ಸಿನಿಮಾ ಚಿತ್ರೀಕರಣ ನಡೆಯುತ್ತಿದ್ದು, ಈಗ ಆ ಭಾಗದ ಜನರಲ್ಲಿ ಕೊರೊನಾ ಹರಡುವ ಆತಂಕ ಎದುರಾಗಿದೆ. ಮಲಯಾಳಿ ಸಿನಿಮಾ ಚಿತ್ರೀಕರಣಕ್ಕಾಗಿ ಕೇರಳದಿಂದ ನೂರಾರು ಕಲಾವಿದರು, ಚಿತ್ರ ತಂತ್ರಜ್ಞರು ಹಾಸನಕ್ಕೆ ಆಗಮಿಸಿದ್ದಾರೆ.

ಹಾಸನದಲ್ಲಿ ಮಲಯಾಳಿ ಸಿನಿಮಾ ಚಿತ್ರೀಕರಣ: ಸ್ಥಳೀಯರಲ್ಲಿ ಹೆಚ್ಚಿದ ಕೊರೊನಾ ಆತಂಕ, DHO ಭೇಟಿ
ಶೂಟಿಂಗ್​ ನಡೆಯುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿದ DHO ಸತೀಶ್
ಪೃಥ್ವಿಶಂಕರ
| Edited By: ಸಾಧು ಶ್ರೀನಾಥ್​|

Updated on: Mar 05, 2021 | 9:32 AM

Share

ಹಾಸನ: ಜಿಲ್ಲೆಯಲ್ಲಿ ಮಲಯಾಳಿ ಸಿನಿಮಾ ಚಿತ್ರೀಕರಣ ನಡೆಯುತ್ತಿದ್ದು, ಈಗ ಆ ಭಾಗದ ಜನರಲ್ಲಿ ಕೊರೊನಾ ಹರಡುವ ಆತಂಕ ಎದುರಾಗಿದೆ. ಮಲಯಾಳಿ ಸಿನಿಮಾ ಚಿತ್ರೀಕರಣಕ್ಕಾಗಿ ಕೇರಳದಿಂದ ನೂರಾರು ಕಲಾವಿದರು, ಚಿತ್ರ ತಂತ್ರಜ್ಞರು ಹಾಸನಕ್ಕೆ ಆಗಮಿಸಿದ್ದಾರೆ. ಹೀಗಾಗಿ ಅವರಿಂದ ಕೊರೊನಾ ಹರಡುವ ಭೀತಿ ಎದುರಾಗಿದೆ.

ಕೇರಳದಲ್ಲಿ ಕೊರೊನಾ ಎರಡನೆ ಅಲೆ ಆರಂಭವಾಗಿದ್ದು, ಕರ್ನಾಟಕಕ್ಕೂ ಆವರಿಸೋ ಭೀತಿ ಉಂಟಾಗಿದೆ. ಹಾಸನದ ಶೆಟ್ಟಿಹಳ್ಳಿ ಬಳಿ ಮಿನ್ನೆಲ್‌ ಮುರುಳಿ ಸಿನಿಮಾ ಚಿತ್ರೀಕರಣ ನಡೆಯುತ್ತಿದೆ. ಹೀಗಾಗಿ ಶೂಟಿಂಗ್ ಸ್ಥಳಕ್ಕೆ ಅರೋಗ್ಯ ಇಲಾಖೆ ಅಧಿಕಾರಿಗಳ ತಂಡ ಭೇಟಿ‌ ನೀಡಿ ಪರಿಶೀಲನೆ ನಡೆಸಿದೆ. ಜೊತೆಗೆ ಡಿಎಚ್ಓ ಡಾ‌.ಸತೀಶ್ ಅವರು ಪ್ರೊಡಕ್ಷನ್ ತಂಡಕ್ಕೆ ಎಚ್ಚರಿಕೆ ಸಹ ನೀಡಿದ್ದಾರೆ.

ಎಲ್ಲರಿಗೂ ಕಡ್ಡಾಯವಾಗಿ ಕೊರೊನಾ ಟೆಸ್ಟ್ ಮಾಡಿಸಲು ಸೂಚನೆ ನೀಡಿದ್ದಾರೆ. ಅದು ಸಾಲದೆಂಬಂತೆ ಕೇರಳ ಕಲಾವಿದರ ಜೊತೆ ಚಿತ್ರೀಕರಣದಲ್ಲಿ‌ ಸಾವಿರಾರು ಸಂಖ್ಯೆಯ ಸ್ಥಳೀಯರು ಸಹ ಭಾಗಿಯಾಗಿದ್ದಾರೆ. ಹೀಗಾಗಿ ಸೂಕ್ತ ಮುನ್ನೆಚ್ಚರಿಕೆ ವಹಿಸದಿದ್ದರೆ ಅಪಾಯ ಕಟ್ಟಿಟ್ಟಬುತ್ತಿಯಾಗಿದೆ. ಕಳೆದ 8 ದಿನಗಳಿಂದ ನಡೆಯುತ್ತಿರೋ ಶೂಟಿಂಗ್​ನಿಂದಾಗಿ ಸ್ಥಳೀಯರಲ್ಲಿ ಕೊರೊನಾ ಭಯ ಶುರುವಾಗಿದೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ