AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shubha Poonja Profile: ಮಾದಕ ನಟಿ ಶುಭಾ ಪೂಂಜಾ ಬಿಗ್ ಬಾಸ್ ಮನೆಗೆ ಎಂಟ್ರಿ!

Bigg Boss Kannada Season 8, Shubha Poonja Profile: ಪ್ರಬುದ್ಧ ನಟನೆಯ ಜತೆಗೆ ಮಾದಕ ನೋಟದ ಮೋಡಿ ಮಾಡಿರುವ ಶುಭಾ ಪೂಂಜಾ ಕರುನಾಡ ಪ್ರೇಕ್ಷಕರನ್ನು ಇನ್ನು ಬಿಗ್ ಬಾಸ್ ಮನೆಯಲ್ಲಿ ರಂಜಿಸಲಿದ್ದಾರೆ. ಕನ್ನಡ ಬಿಗ್ ಬಾಸ್ 8ನೇ ಸೀಸನ್​ನ …. ಅಭ್ಯರ್ಥಿಯಾಗಿ ಅವರು ಮನೆ ಪ್ರವೇಶಿಸಿದ್ದಾರೆ.

Shubha Poonja Profile: ಮಾದಕ ನಟಿ ಶುಭಾ ಪೂಂಜಾ ಬಿಗ್ ಬಾಸ್ ಮನೆಗೆ ಎಂಟ್ರಿ!
ಶುಭಾ ಪೂಂಜಾ ಬಿಗ್ ಬಾಸ್​ಗೆ ಎಂಟ್ರಿ
Follow us
TV9 Web
| Updated By: ganapathi bhat

Updated on:Apr 06, 2022 | 7:38 PM

Bigg Boss Kannada Season 8 Contestant Shubha Poonja Profile: ಮೊಗ್ಗಿನ ಮನಸು ಚಲನಚಿತ್ರದ ಮೂಲಕ ಮನೆಮಾತಾದ ನಟಿ ಶುಭಾ ಪೂಂಜಾ ತಮಿಳು ಚಿತ್ರರಂಗದಲ್ಲೂ ಮಿಂಚಿದವರು. ದೂರದರ್ಶನ ಜಾಹಿರಾತು, ಮಾಡೆಲಿಂಗ್ ಕ್ಷೇತ್ರದಲ್ಲಿ ತಮ್ಮ ಛಾಪು ಮೂಡಿಸಿ, ಭರವಸೆಯ ನಟಿ ಎನಿಸಿಕೊಂಡವರು ಈಗ ಮತ್ತೆ ಟೆಲಿವಿಷನ್ ಕ್ಷೇತ್ರದ ಯಶಸ್ವಿ ರಿಯಾಲಿಟಿ ಶೋ, ಬಿಗ್ ಬಾಸ್ ಕನ್ನಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ತಮ್ಮ ಪ್ರಬುದ್ಧ ನಟನೆಯ ಜತೆಗೆ ಮಾದಕ ನೋಟದ ಮೋಡಿ ಮಾಡಿರುವ ಶುಭಾ ಪೂಂಜಾ ಕರುನಾಡ ಪ್ರೇಕ್ಷಕರನ್ನು ಇನ್ನು ಬಿಗ್ ಬಾಸ್ ಮನೆಯಲ್ಲಿ ರಂಜಿಸಲಿದ್ದಾರೆ. ಕನ್ನಡ ಬಿಗ್ ಬಾಸ್ 8ನೇ ಸೀಸನ್​ನ 2ನೇ ಅಭ್ಯರ್ಥಿಯಾಗಿ ಅವರು ಮನೆ ಪ್ರವೇಶಿಸಿದ್ದಾರೆ.

ಶುಭಾ ಪೂಂಜಾ ತಮಿಳು ಸಿನಿಮಾದಲ್ಲೂ ನಟಿಸಿದ್ದಾರೆ. ಮಚ್ಚಿ, ತಿರುದಿಯಾ ಇದಯತಾಯ್, ಒರು ಪೊಣ್ಣು ಒರು ಪೈಯನ್ ಸಿನಿಮಾಗಳಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಜಾಕ್​ಪಾಟ್ ಸಿನಿಮಾ ಮೂಲಕ ಕನ್ನಡ ಸಿನಿಮಾಗಳಲ್ಲೂ ಹವಾ ಸೃಷ್ಟಿಸಿದ ಅವರು ಮೊಗ್ಗಿನ ಮನಸು ಸಿನಿಮಾಗೆ ಬೆಸ್ಟ್ ಸಪೋರ್ಟಿಂಗ್ ಆಕ್ಟ್ರೆಸ್ ಫಿಲ್ಮ್​ಫೇರ್ ಅವಾರ್ಡ್ ಪಡೆದಿದ್ದಾರೆ. ಸ್ಲಂ ಬಾಲ ಸಿನಿಮಾದಲ್ಲಿ ದುನಿಯಾ ವಿಜಯ್ ಜತೆಗೂ ಶುಭಾ ಪೂಂಜಾ ನಟಿಸಿದ್ದಾರೆ.

2004ರಿಂದ ಸಿನಿರಂಗದಲ್ಲಿ ಸಕ್ರಿಯರಾಗಿರುವ ಶುಭಾ ಪೂಂಜಾ ಸದ್ಯ ಸಮೋಸಾ ಎಂಬ ಚಲನಚಿತ್ರದಲ್ಲಿ ಕೆಲಸ ಮಾಡುತ್ತಿದ್ದರು. ಮೂಲತಃ ಮಂಗಳೂರಿನ ಬೆಡಗಿ ಶುಭಾ, ಬೆಂಗಳೂರಿನಲ್ಲಿ ಬೆಳೆದವರು. ಮಾಡೆಲಿಂಗ್ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದ ಅವರು 2003ರಲ್ಲಿ ಮಿಸ್ ಚೆನ್ನೈ ಟಾಪ್ ಮಾಡೆಲ್ ಅವಾರ್ಡ್ ಕೂಡ ಪಡೆದಿದ್ದರು. ಬಹಳಷ್ಟು ಯುವ ಅಭಿಮಾನಿ ಬಳಗವನ್ನು ಹೊಂದಿರುವ ಶುಭಾ ಪೂಂಜಾ ಬಿಗ್ ಬಾಸ್ ಮನೆಯಲ್ಲಿ ಕೂಡ ಮೋಡಿ ಮಾಡುತ್ತಾರೆ ಎಂಬುದು ಅಭಿಮಾನಿಗಳ ಆಶಯ.

ಕಳೆದ ಏಳು ಸೀಸನ್​ನಲ್ಲೂ ನಿಮಗೆ ಬುಲಾವ್ ಬರುತ್ತಿತ್ತು. ಆದರೆ, ಈ ಬಾರಿಯೇ ಯಾಕೆ ಬಿಗ್ ಬಾಸ್​ಗೆ ಆಗಮಿಸಿದಿರಿ ಎಂದು ಕಿಚ್ಚ ಸುದೀಪ್ ಪ್ರಶ್ನಿಸಿದರು. ಶೀಘ್ರದಲ್ಲೇ ಮದುವೆ ಆಗಲಿದ್ದೇನೆ. ಈಗ ಬಿಗ್ ಬಾಸ್ ಮನೆಗೆ ಹೋಗದಿದ್ದರೆ ಇನ್ನೆಂದೂ ಹೋಗಲು ಆಗುವುದಿಲ್ಲ ಎಂದು ಯೋಚಿಸಿ ಈಗ ಬರುತ್ತಿದ್ದೇನೆ. ಬಿಗ್ ಬಾಸ್ ಮನೆಗೆ ಆಗಮಿಸಲು ಇದು ಸರಿಯಾದ ಸಮಯ ಎಂದು ಶುಭಾ ಪೂಂಜ ಹೇಳಿದರು.  ನನ್ನ ಎಲ್ಲಾ ಕೆಲಸಗಳಲ್ಲೂ ಅಮ್ಮ ತುಂಬಾ ಪ್ರೋತ್ಸಾಹ ನೀಡುತ್ತಾರೆ ಎಂದು ಶುಭಾ ತಿಳಿಸಿದರು.

ಬಿಗ್​ ಬಾಸ್​ ವೀಕ್ಷಣೆ ಮಾಡೋದು ಎಲ್ಲಿ? ಭಾನುವಾರ ಸಂಜೆ 6 ಗಂಟೆಗೆ ಬಿಗ್​ ಬಾಸ್​ 8ಕ್ಕೆ ಅದ್ದೂರಿಯಾಗಿ ಚಾಲನೆ ಸಿಕ್ಕಿದೆ. ಕಿಚ್ಚ ಸುದೀಪ್​ ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ. ಪ್ರತಿ ದಿನ ರಾತ್ರಿ 9:30ರಿಂದ ಬಿಗ್​ ಬಾಸ್​ ಕಾರ್ಯಕ್ರಮ ಪ್ರಸಾರವಾಗಲಿದೆ. ಬಿಗ್​ ಬಾಸ್​ ಎಲ್ಲಿ ವೀಕ್ಷಣೆ ಮಾಡಬೇಕು ಎನ್ನುವುದು ಅನೇಕರ ಪ್ರಶ್ನೆ.  ಕಲರ್ಸ್​ ಕನ್ನಡ ವಾಹಿನಿಯಲ್ಲಿ ಬಿಗ್​ ಬಾಸ್​ 8 ಪ್ರಸಾರವಾಗುತ್ತದೆ. ಆನ್​ಲೈನ್​ನಲ್ಲಿ ಬಿಗ್​ ಬಾಸ್​ ನೋಡಬೇಕು ಎಂದಾದರೆ ನೀವು ವೂಟ್​ ಆ್ಯಪ್​ ಡೌನ್​ಲೋಡ್​ ಮಾಡಿಕೊಳ್ಳಬೇಕು. ಜಿಯೋ ಟಿವಿಯಲ್ಲಿ ಕೂಡ ನೀವು ಬಿಗ್​ ಬಾಸ್​ ವೀಕ್ಷಣೆ ಮಾಡಬಹುದಾಗಿದೆ. ಜಿಯೋ ಟಿವಿಗೆ ತೆರಳಿ ಕಲರ್ಸ್​ ಕನ್ನಡ ಎಂದು ಸರ್ಚ್​ ಮಾಡಿದರೆ ಕಲರ್ಸ್​ ಕನ್ನಡ ವಾಹಿನಿ ಸಿಗಲಿದೆ. ಅದರಲ್ಲಿ ನೀವು ಬಿಗ್​ ಬಾಸ್​ ವೀಕ್ಷಿಸಬಹುದು.

ಇದನ್ನೂ ಓದಿ: Bigg Boss Kannada 8 Launch LIVE Updates: ಮೊದಲ ಅಭ್ಯರ್ಥಿಯಾಗಿ ಬಿಗ್ ಬಾಸ್ ಮನೆಗೆ ಧನುಶ್ರೀ

Bigg Boss Kannada 8: ಕನ್ನಡ ಬಿಗ್​ ಬಾಸ್​​ 8ಗಾಗಿ ಕೆಲಸ ಮಾಡುವ ತಂತ್ರಜ್ಞರ ಸಂಖ್ಯೆ ಕೇಳಿದ್ರೆ ಅಚ್ಚರಿ ಪಡ್ತೀರಾ!

Published On - 6:31 pm, Sun, 28 February 21

ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ