TB ಜಯಚಂದ್ರಗೆ ಟಿಕೆಟ್ ನೀಡದಂತೆ ಹೈಕಮಾಂಡ್ ಸೂಚಿಸಿತ್ತು: ಬಾಯಿಬಿಟ್ಟಿ ಡಿ.ಕೆ ಶಿವಕುಮಾರ್
ತುಮಕೂರು: ಶಿರಾ ಕ್ಷೇತ್ರದ ಉಪಚುನಾವಣೆಗೆ ಟಿಕೆಟ್ ಹಂಚಿಕೆ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಒಳ ಕುದಿ ಇದೀಗ ಬಹಿರಂಗವಾಗಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಡುವೆ ನಡೆದಿರುವ ಈ ಸಂಭಾಷಣೆ ಇದೀಗ ಇದಕ್ಕೆ ಪುಷ್ಟಿ ನೀಡಿದೆ. ಟಿ.ಬಿ ಜಯಚಂದ್ರಗೆ ಟಿಕೆಟ್ ನೀಡದಂತೆ ಹೈಕಮಾಂಡ್ ಸೂಚನೆ ನೀಡಿತ್ತು ಎಂದು ವರಿಷ್ಠರ ಸೂಚನೆ ಬಗ್ಗೆ ಡಿ.ಕೆ ಶಿವಕುಮಾರ್ ಬಾಯಿಬಿಟ್ಟಿದ್ದಾರೆ. ಸಿದ್ದರಾಮಯ್ಯ ಜೊತೆ ಅನೌಪಚಾರಿಕ ಮಾತುಕತೆ ವೇಳೆ ಅವರ ಕಿವಿಯಲ್ಲಿ ಶಿವಕುಮಾರ್ ಹೇಳಿದ್ದಾರೆ. ಒಂಬತ್ತು ಬಾರಿ ಒಬ್ಬರಿಗೆ […]

ತುಮಕೂರು: ಶಿರಾ ಕ್ಷೇತ್ರದ ಉಪಚುನಾವಣೆಗೆ ಟಿಕೆಟ್ ಹಂಚಿಕೆ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಒಳ ಕುದಿ ಇದೀಗ ಬಹಿರಂಗವಾಗಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಡುವೆ ನಡೆದಿರುವ ಈ ಸಂಭಾಷಣೆ ಇದೀಗ ಇದಕ್ಕೆ ಪುಷ್ಟಿ ನೀಡಿದೆ.
ಟಿ.ಬಿ ಜಯಚಂದ್ರಗೆ ಟಿಕೆಟ್ ನೀಡದಂತೆ ಹೈಕಮಾಂಡ್ ಸೂಚನೆ ನೀಡಿತ್ತು ಎಂದು ವರಿಷ್ಠರ ಸೂಚನೆ ಬಗ್ಗೆ ಡಿ.ಕೆ ಶಿವಕುಮಾರ್ ಬಾಯಿಬಿಟ್ಟಿದ್ದಾರೆ. ಸಿದ್ದರಾಮಯ್ಯ ಜೊತೆ ಅನೌಪಚಾರಿಕ ಮಾತುಕತೆ ವೇಳೆ ಅವರ ಕಿವಿಯಲ್ಲಿ ಶಿವಕುಮಾರ್ ಹೇಳಿದ್ದಾರೆ.
ಒಂಬತ್ತು ಬಾರಿ ಒಬ್ಬರಿಗೆ ನೀಡಿದ್ದಿರಾ? ನಿಮಗೆ ಕಾಮನ್ ಸೆನ್ಸ್ ಇಲ್ವಾ? ಅಂತಾ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಡಿ.ಕೆ ಶಿವಕುಮಾರ್ಗೆ ಪ್ರಶ್ನೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಜೊತೆಗೆ, ರಾಜೇಶ್ ಗೌಡಗೆ ಟಿಕೆಟ್ ನೀಡುವಂತೆ ಸುರ್ಜೇವಾಲಾ ಸೂಚಿಸಿದ್ದಾಗಿ ಶಿವಕುಮಾರ್ ಸಿದ್ದರಾಮಯ್ಯಗೆ ಹೇಳಿದ್ದಾರೆ ಎಂಬ ಮಾಹಿತಿ ದೊರೆತಿದೆ.
ಆದರೆ ನಾವು ಕುಳಿತು ಮಾತನಾಡಿದ್ವಿ. ಹಾಗೆಲ್ಲ ಮಾಡೋಕೆ ಆಗಲ್ಲ ಅಂತಾ ಸುರ್ಜೇವಾಲಾಗೆ ಡಿ.ಕೆ ಶಿವಕುಮಾರ್ ತಿಳಿಸಿದ್ದಾರಂತೆ. ಈ ಮಧ್ಯೆ ರಾಜೇಶ್ ಗೌಡ ಆಗಲೇ ಬಿಜೆಪಿಗೆ ಹೋಗಿದ್ದಾನೆ. ಅವನು ನಾಮ್ ಕಾ ವಾಸ್ತೆ ಮಾತ್ರ ಇಲ್ಲಿದ್ದ ಎಂದು ಸಿದ್ದರಾಮಯ್ಯ ಹೇಳಿದ್ದಾರಂತೆ. ಆಗಲ್ಲ, ಆಗಲ್ಲ, ಹಾಗೆಲ್ಲಾ ಮಾಡೋಕೆ ಆಗಲ್ಲ ಅಂತಾ ಸಿದ್ದರಾಮಯ್ಯ ಸಹ ದನಿಗೂಡಿಸಿದ್ದಾರೆ ಎಂದು ಹೇಳಲಾಗಿದೆ.