AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

​ಪಂಜಿನ ಮೆರವಣಿಗೆ ವೇಳೆ ಸಿದ್ದರಾಮಯ್ಯ, ಡಿಕೆಶಿ​ ಮೇಲೆ ಬಿದ್ದ ಕಾದ ಎಣ್ಣೆ

ಬೆಂಗಳೂರು: UPಯಲ್ಲಿ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾರ ಮೇಲೆ ಪೊಲೀಸರು ಹಲ್ಲೆ ನಡೆಸಿದ ಪ್ರಯತ್ನವನ್ನು ಖಂಡಿಸಿ KPCC ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕಾಂಗ್ರೆಸ್​ ನಾಯಕರ ಮೇಲೆ ಕಾದ ಎಣ್ಣೆ ಬಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. UP ಪೊಲೀಸರ ದೌರ್ಜನ್ಯ ಖಂಡಿಸಿ ನಿನ್ನೆ ಸಂಜೆ ಕಾಂಗ್ರೆಸ್ ನಾಯಕರಿಂದ ಪಂಜಿನ ಮೆರವಣಿಗೆ ನಡೆಸಲಾಯಿತು. ಕಾಂಗ್ರೆಸ್ ಭವನದಿಂದ ಫ್ರೀಡಂ ಪಾರ್ಕ್​ನ ಕಡೆಗೆ ಪಂಜಿನ ಱಲಿ ಆಯೋಜಿಸಲಾಗಿತ್ತು. ಈ ವೇಳೆ ಪಂಜು ಹೊತ್ತು ಹೊರಟ ವಿಪಕ್ಷ ನಾಯಕ ಸಿದ್ದರಾಮಯ್ಯರ ಮೇಲೆ ಪಂಜಿನಿಂದ […]

​ಪಂಜಿನ ಮೆರವಣಿಗೆ ವೇಳೆ ಸಿದ್ದರಾಮಯ್ಯ, ಡಿಕೆಶಿ​ ಮೇಲೆ ಬಿದ್ದ ಕಾದ ಎಣ್ಣೆ
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Oct 02, 2020 | 1:35 PM

ಬೆಂಗಳೂರು: UPಯಲ್ಲಿ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾರ ಮೇಲೆ ಪೊಲೀಸರು ಹಲ್ಲೆ ನಡೆಸಿದ ಪ್ರಯತ್ನವನ್ನು ಖಂಡಿಸಿ KPCC ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕಾಂಗ್ರೆಸ್​ ನಾಯಕರ ಮೇಲೆ ಕಾದ ಎಣ್ಣೆ ಬಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

UP ಪೊಲೀಸರ ದೌರ್ಜನ್ಯ ಖಂಡಿಸಿ ನಿನ್ನೆ ಸಂಜೆ ಕಾಂಗ್ರೆಸ್ ನಾಯಕರಿಂದ ಪಂಜಿನ ಮೆರವಣಿಗೆ ನಡೆಸಲಾಯಿತು. ಕಾಂಗ್ರೆಸ್ ಭವನದಿಂದ ಫ್ರೀಡಂ ಪಾರ್ಕ್​ನ ಕಡೆಗೆ ಪಂಜಿನ ಱಲಿ ಆಯೋಜಿಸಲಾಗಿತ್ತು. ಈ ವೇಳೆ ಪಂಜು ಹೊತ್ತು ಹೊರಟ ವಿಪಕ್ಷ ನಾಯಕ ಸಿದ್ದರಾಮಯ್ಯರ ಮೇಲೆ ಪಂಜಿನಿಂದ ಕಾದ ಎಣ್ಣೆ ಸಿಡಿದಿದೆ.

ಇದರಿಂದ, ಸಿದ್ದರಾಮಯ್ಯರ ಗಡ್ಡ, ಕೈ ಮತ್ತು ಬೆನ್ನಿನ ಮೇಲೆ ಸುಟ್ಟಗಾಯಗಳಾದವು ಎಂದು ತಿಳಿದುಬಂದಿದೆ. ಜೊತೆಗೆ, ಪಕ್ಕದಲ್ಲೇ ಇದ್ದ KPCC ಅಧ್ಯಕ್ಷ ಡಿ.ಕೆ ಶಿವಕುಮಾರ್​ರ ಕೈ ಮೇಲೆ ಕಾದ ಎಣ್ಣೆ ಸಿಡಿಯಿತು.

ಘಟನೆ ನಡೆದ ತಕ್ಷಣವೇ ಅಲ್ಲೇ ಇದ್ದ ಭದ್ರತಾ ಸಿಬ್ಬಂದಿ ಬಿದ್ದ ಎಣ್ಣೆಯನ್ನು ಒರೆಸಿದರು. ಪ್ರತಿಭಟನೆಯಲ್ಲಿ ಹಿರಿಯ ಕಾಂಗ್ರೆಸ್​ ಮುಖಂಡ ಮುನಿಯಪ್ಪ ಮತ್ತು ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಸೇರಿದಂತೆ ಹಲವರು ಭಾಗವಹಿಸಿದ್ದರು. ಇಬ್ಬರು ನಾಯಕರಿಗೆ ಗಂಭೀರ ಗಾಯಗಳಾಗದಿದ್ದರೂ ಅಲ್ಲಿದ್ದವರಿಗೆ ಒಂದು ಕ್ಷಣ ಆತಂಕ ಉಂಟಾಗಿತ್ತು. ಪಂಜಿಗೆ ಹಾಕಿದ್ದ ಎಣ್ಣೆ ಬಿತ್ತಾ ಅಥವಾ ಬೇರೆಯವರು ಎಣ್ಣೆ ಎರಚಿದರಾ ಎಂಬ ಗುಮಾನಿ ವ್ಯಕ್ತಪಡಿಸಿದರು.

Published On - 1:33 pm, Fri, 2 October 20

ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್
ಜಮೀರ್ ಅಹ್ಮದ್ ಕರೆದರೆ ಹೋಗಿ ಮಾತಾಡುತ್ತೇನೆ: ಬಿಆರ್ ಪಾಟೀಲ್
ಜಮೀರ್ ಅಹ್ಮದ್ ಕರೆದರೆ ಹೋಗಿ ಮಾತಾಡುತ್ತೇನೆ: ಬಿಆರ್ ಪಾಟೀಲ್
ಪಕ್ಷದ ಸಾರಥ್ಯ ನನ್ನ ಕೈಗೆ ಕೊಟ್ಟರೆ 150 ಸೀಟು ಗೆಲ್ಲುತ್ತೇನೆ: ಯತ್ನಾಳ್
ಪಕ್ಷದ ಸಾರಥ್ಯ ನನ್ನ ಕೈಗೆ ಕೊಟ್ಟರೆ 150 ಸೀಟು ಗೆಲ್ಲುತ್ತೇನೆ: ಯತ್ನಾಳ್
ರೈಲಿನಲ್ಲಿ ಅಂಗಿ, ಪ್ಯಾಂಟ್ ಬಿಚ್ಚಿ ನಿಂತ ಪ್ರಯಾಣಿಕ: ಮುಂದೇನಾಯ್ತು?
ರೈಲಿನಲ್ಲಿ ಅಂಗಿ, ಪ್ಯಾಂಟ್ ಬಿಚ್ಚಿ ನಿಂತ ಪ್ರಯಾಣಿಕ: ಮುಂದೇನಾಯ್ತು?
ದೆಹಲಿ: ಸಿದ್ದರಾಮಯ್ಯ ವರ್ತನೆ ಒತ್ತಡದಲ್ಲಿರುವುದನ್ನು ಸ್ಪಷ್ಟಪಡಿಸುತ್ತದೆ
ದೆಹಲಿ: ಸಿದ್ದರಾಮಯ್ಯ ವರ್ತನೆ ಒತ್ತಡದಲ್ಲಿರುವುದನ್ನು ಸ್ಪಷ್ಟಪಡಿಸುತ್ತದೆ
ಮುತ್ತೊಂದ ಕೊಡವೆ ಹತ್ತಿರ..ಹತ್ತಿರ.. ಬಾ: ವ್ಯಕ್ತಿಗೆ ಕಿಸ್ ಕೊಟ್ಟ ಜಮೀರ್!
ಮುತ್ತೊಂದ ಕೊಡವೆ ಹತ್ತಿರ..ಹತ್ತಿರ.. ಬಾ: ವ್ಯಕ್ತಿಗೆ ಕಿಸ್ ಕೊಟ್ಟ ಜಮೀರ್!
ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಚಿನ್ನ, ಬೆಳ್ಳಿ ಪದಕ ಗೆದ್ದ ಮೈಸೂರಿನ ಬಾಲಕಿ
ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಚಿನ್ನ, ಬೆಳ್ಳಿ ಪದಕ ಗೆದ್ದ ಮೈಸೂರಿನ ಬಾಲಕಿ