AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದೆಲ್ಲೆಡೆ ಮೋದಿ ಹವಾ ಇರೋದು ಸಿದ್ರಾಮಯ್ಯನವರಿಗೆ ಗೊತ್ತಿಲ್ಲ!: ಪ್ರಹ್ಲಾದ್ ಜೋಷಿ | Siddaramaiah must have realised Modi wave prevailing across India: Joshi

ರಾಜರಾಜೇಶ್ವರಿನಗರ ಮತ್ತು ಶಿರಾ ವಿಧಾನ ಸಭಾ ಮತಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿರುವ ಬಗ್ಗೆ ದೆಹಲಿಯಲ್ಲಿಂದು ಪ್ರತಿಕ್ರಿಯಿಸಿದ ಕರ್ನಾಟಕದ ಸೋಸದ ಮತ್ತು ಕೇಂದ್ರದಲ್ಲಿ ಕಲ್ಲಿದ್ದಲು ಮತ್ತು ಸಂಸದೇಯ ವ್ಯವಹಾರಗಳ ಸಚಿವರಾಗಿರುವ ಪ್ರಹ್ಲಾದ್ ಜೋಷಿ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ಎಲ್ಲೂ ಕಡಿಮೆ ಆಗಿಲ್ಲ ಎಂದು ಹೇಳಿದರು. ‘‘ಮೋದಿ ಅಲೆ ಎಲ್ಲಿದೆಯೆಂದು ಸಿದ್ದರಾಮಯ್ಯ ಕೇಳಿದ್ದರು. ಪ್ರಾಯಶಃ ಅವರಿಗೆ ಅದೆಲ್ಲಿದೆ ಅಂತ ಈಗ ಗೊತ್ತಾಗಿರಬೇಕು, ದೇಶ ಸಂಕಷ್ಟದಲ್ಲಿದ್ದಾಗ ಮೋದಿ ಸರ್ಕಾರದ ವಿರುಧ್ಧ ಬರೀ ಟೀಕೆಗಳನ್ನು ಮಾಡಲಾಯಿತು. ಆದರೆ ಮತದಾರರು […]

ದೇಶದೆಲ್ಲೆಡೆ ಮೋದಿ ಹವಾ ಇರೋದು ಸಿದ್ರಾಮಯ್ಯನವರಿಗೆ ಗೊತ್ತಿಲ್ಲ!: ಪ್ರಹ್ಲಾದ್ ಜೋಷಿ | Siddaramaiah must have realised Modi wave prevailing across India: Joshi
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಅರುಣ್​ ಕುಮಾರ್​ ಬೆಳ್ಳಿ
|

Updated on: Nov 10, 2020 | 9:14 PM

Share

ರಾಜರಾಜೇಶ್ವರಿನಗರ ಮತ್ತು ಶಿರಾ ವಿಧಾನ ಸಭಾ ಮತಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿರುವ ಬಗ್ಗೆ ದೆಹಲಿಯಲ್ಲಿಂದು ಪ್ರತಿಕ್ರಿಯಿಸಿದ ಕರ್ನಾಟಕದ ಸೋಸದ ಮತ್ತು ಕೇಂದ್ರದಲ್ಲಿ ಕಲ್ಲಿದ್ದಲು ಮತ್ತು ಸಂಸದೇಯ ವ್ಯವಹಾರಗಳ ಸಚಿವರಾಗಿರುವ ಪ್ರಹ್ಲಾದ್ ಜೋಷಿ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ಎಲ್ಲೂ ಕಡಿಮೆ ಆಗಿಲ್ಲ ಎಂದು ಹೇಳಿದರು.

‘‘ಮೋದಿ ಅಲೆ ಎಲ್ಲಿದೆಯೆಂದು ಸಿದ್ದರಾಮಯ್ಯ ಕೇಳಿದ್ದರು. ಪ್ರಾಯಶಃ ಅವರಿಗೆ ಅದೆಲ್ಲಿದೆ ಅಂತ ಈಗ ಗೊತ್ತಾಗಿರಬೇಕು, ದೇಶ ಸಂಕಷ್ಟದಲ್ಲಿದ್ದಾಗ ಮೋದಿ ಸರ್ಕಾರದ ವಿರುಧ್ಧ ಬರೀ ಟೀಕೆಗಳನ್ನು ಮಾಡಲಾಯಿತು. ಆದರೆ ಮತದಾರರು ಸ್ಪಷ್ಟ ಜನಾದೇಶ ನೀಡಿ, ಮೋದಿ ಅವರು ಮಾಡಿರುವ ಮತ್ತು ಮಾಡುತ್ತಿರುವ ಕೆಲಸ ತಮಗೆ ಮೆಚ್ಚಿಗೆಯಾಗಿರುವುದನ್ನು ಸಾಬೀತು ಮಾಡಿದ್ದಾರೆ. ರಾಜ್ಯದ ಜನತೆ ಸಹ ಬಿಎಸ್‌ ಯಡಿಯೂರಪ್ಪನವರ ಆಡಳಿತವನ್ನು ಮೆಚ್ಚಿಕೊಂಡಿದ್ದಾರೆ’’ ಎಂದು ಜೋಷಿ ಹೇಳಿದರು.

ದೇಶದೆಲ್ಲೆಡೆ ಮೋದಿ ಗಾಳಿ ಬೀಸುತ್ತಿದೆ ಎನ್ನುವುದನ್ನು ಒತ್ತಿ ಹೇಳಿದ ಸಚಿವರು, ಪಶ್ಚಿಮ ಬಂಗಾಳದಲ್ಲೂ ಈ ಬಾರಿ ತಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆಯೆಂದು ಭವಿಷ್ಯ ನುಡಿದರು.

‘‘ದೇಶದ ವಿವಿಧ ರಾಜ್ಯಗಳ 58 ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆದಿತ್ತು ಅವುಗಳ ಪೈಕಿ ಬಿಜೆಪಿ 40ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯ ಗಳಿಸಿದೆ. ಪಕ್ಷ ಅಸ್ತಿತ್ವ ಕಡಿಮೆ ಇರುವ ತೆಲಂಗಾಣದಲ್ಲೂ ನಾವು ಗೆದ್ದಿದ್ದೇವೆ. ಬಿಹಾರಚುನಾವಣೆಯಲ್ಲಿ ಕೊರೊನಾ ನಿರ್ವಹಣೆ ಬಗ್ಗೆ ಜೋರಾಗಿ ಚರ್ಚೆಯಾಗಿತ್ತು. ಎನ್​​ಡಿಎ ಸರ್ಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನಗಳು ನಡೆದವು. ಆದರೆ ಫಲಿತಾಂಶಗಳು ಬೇರೆಯದೇಯಾದ ಕತೆ ಹೇಳುತ್ತಿವೆ. ಬಿಜೆಪಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಲಿದೆ. ಹಾಗೆಯೇ, ಪಶ್ಚಿಮ ಬಂಗಾಳದಲ್ಲಿ ಈ ಬಾರಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಮತದಾರರು ತೃಣಮೂಲ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಲಿದ್ದಾರೆ,’’ ಎಂದು ಜೋಶಿ ಹೇಳಿದರು.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ