AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದೆಲ್ಲೆಡೆ ಮೋದಿ ಹವಾ ಇರೋದು ಸಿದ್ರಾಮಯ್ಯನವರಿಗೆ ಗೊತ್ತಿಲ್ಲ!: ಪ್ರಹ್ಲಾದ್ ಜೋಷಿ | Siddaramaiah must have realised Modi wave prevailing across India: Joshi

ರಾಜರಾಜೇಶ್ವರಿನಗರ ಮತ್ತು ಶಿರಾ ವಿಧಾನ ಸಭಾ ಮತಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿರುವ ಬಗ್ಗೆ ದೆಹಲಿಯಲ್ಲಿಂದು ಪ್ರತಿಕ್ರಿಯಿಸಿದ ಕರ್ನಾಟಕದ ಸೋಸದ ಮತ್ತು ಕೇಂದ್ರದಲ್ಲಿ ಕಲ್ಲಿದ್ದಲು ಮತ್ತು ಸಂಸದೇಯ ವ್ಯವಹಾರಗಳ ಸಚಿವರಾಗಿರುವ ಪ್ರಹ್ಲಾದ್ ಜೋಷಿ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ಎಲ್ಲೂ ಕಡಿಮೆ ಆಗಿಲ್ಲ ಎಂದು ಹೇಳಿದರು. ‘‘ಮೋದಿ ಅಲೆ ಎಲ್ಲಿದೆಯೆಂದು ಸಿದ್ದರಾಮಯ್ಯ ಕೇಳಿದ್ದರು. ಪ್ರಾಯಶಃ ಅವರಿಗೆ ಅದೆಲ್ಲಿದೆ ಅಂತ ಈಗ ಗೊತ್ತಾಗಿರಬೇಕು, ದೇಶ ಸಂಕಷ್ಟದಲ್ಲಿದ್ದಾಗ ಮೋದಿ ಸರ್ಕಾರದ ವಿರುಧ್ಧ ಬರೀ ಟೀಕೆಗಳನ್ನು ಮಾಡಲಾಯಿತು. ಆದರೆ ಮತದಾರರು […]

ದೇಶದೆಲ್ಲೆಡೆ ಮೋದಿ ಹವಾ ಇರೋದು ಸಿದ್ರಾಮಯ್ಯನವರಿಗೆ ಗೊತ್ತಿಲ್ಲ!: ಪ್ರಹ್ಲಾದ್ ಜೋಷಿ | Siddaramaiah must have realised Modi wave prevailing across India: Joshi
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಅರುಣ್​ ಕುಮಾರ್​ ಬೆಳ್ಳಿ
|

Updated on: Nov 10, 2020 | 9:14 PM

Share

ರಾಜರಾಜೇಶ್ವರಿನಗರ ಮತ್ತು ಶಿರಾ ವಿಧಾನ ಸಭಾ ಮತಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿರುವ ಬಗ್ಗೆ ದೆಹಲಿಯಲ್ಲಿಂದು ಪ್ರತಿಕ್ರಿಯಿಸಿದ ಕರ್ನಾಟಕದ ಸೋಸದ ಮತ್ತು ಕೇಂದ್ರದಲ್ಲಿ ಕಲ್ಲಿದ್ದಲು ಮತ್ತು ಸಂಸದೇಯ ವ್ಯವಹಾರಗಳ ಸಚಿವರಾಗಿರುವ ಪ್ರಹ್ಲಾದ್ ಜೋಷಿ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ಎಲ್ಲೂ ಕಡಿಮೆ ಆಗಿಲ್ಲ ಎಂದು ಹೇಳಿದರು.

‘‘ಮೋದಿ ಅಲೆ ಎಲ್ಲಿದೆಯೆಂದು ಸಿದ್ದರಾಮಯ್ಯ ಕೇಳಿದ್ದರು. ಪ್ರಾಯಶಃ ಅವರಿಗೆ ಅದೆಲ್ಲಿದೆ ಅಂತ ಈಗ ಗೊತ್ತಾಗಿರಬೇಕು, ದೇಶ ಸಂಕಷ್ಟದಲ್ಲಿದ್ದಾಗ ಮೋದಿ ಸರ್ಕಾರದ ವಿರುಧ್ಧ ಬರೀ ಟೀಕೆಗಳನ್ನು ಮಾಡಲಾಯಿತು. ಆದರೆ ಮತದಾರರು ಸ್ಪಷ್ಟ ಜನಾದೇಶ ನೀಡಿ, ಮೋದಿ ಅವರು ಮಾಡಿರುವ ಮತ್ತು ಮಾಡುತ್ತಿರುವ ಕೆಲಸ ತಮಗೆ ಮೆಚ್ಚಿಗೆಯಾಗಿರುವುದನ್ನು ಸಾಬೀತು ಮಾಡಿದ್ದಾರೆ. ರಾಜ್ಯದ ಜನತೆ ಸಹ ಬಿಎಸ್‌ ಯಡಿಯೂರಪ್ಪನವರ ಆಡಳಿತವನ್ನು ಮೆಚ್ಚಿಕೊಂಡಿದ್ದಾರೆ’’ ಎಂದು ಜೋಷಿ ಹೇಳಿದರು.

ದೇಶದೆಲ್ಲೆಡೆ ಮೋದಿ ಗಾಳಿ ಬೀಸುತ್ತಿದೆ ಎನ್ನುವುದನ್ನು ಒತ್ತಿ ಹೇಳಿದ ಸಚಿವರು, ಪಶ್ಚಿಮ ಬಂಗಾಳದಲ್ಲೂ ಈ ಬಾರಿ ತಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆಯೆಂದು ಭವಿಷ್ಯ ನುಡಿದರು.

‘‘ದೇಶದ ವಿವಿಧ ರಾಜ್ಯಗಳ 58 ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆದಿತ್ತು ಅವುಗಳ ಪೈಕಿ ಬಿಜೆಪಿ 40ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯ ಗಳಿಸಿದೆ. ಪಕ್ಷ ಅಸ್ತಿತ್ವ ಕಡಿಮೆ ಇರುವ ತೆಲಂಗಾಣದಲ್ಲೂ ನಾವು ಗೆದ್ದಿದ್ದೇವೆ. ಬಿಹಾರಚುನಾವಣೆಯಲ್ಲಿ ಕೊರೊನಾ ನಿರ್ವಹಣೆ ಬಗ್ಗೆ ಜೋರಾಗಿ ಚರ್ಚೆಯಾಗಿತ್ತು. ಎನ್​​ಡಿಎ ಸರ್ಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನಗಳು ನಡೆದವು. ಆದರೆ ಫಲಿತಾಂಶಗಳು ಬೇರೆಯದೇಯಾದ ಕತೆ ಹೇಳುತ್ತಿವೆ. ಬಿಜೆಪಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಲಿದೆ. ಹಾಗೆಯೇ, ಪಶ್ಚಿಮ ಬಂಗಾಳದಲ್ಲಿ ಈ ಬಾರಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಮತದಾರರು ತೃಣಮೂಲ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಲಿದ್ದಾರೆ,’’ ಎಂದು ಜೋಶಿ ಹೇಳಿದರು.

ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ನಾನು ಮಂಗಳೂರು ಹುಡುಗಿ: ಹೆಮ್ಮೆಯಿಂದ ಹೇಳಿದ ಜೆನಿಲಿಯಾ ಡಿಸೋಜಾ
ನಾನು ಮಂಗಳೂರು ಹುಡುಗಿ: ಹೆಮ್ಮೆಯಿಂದ ಹೇಳಿದ ಜೆನಿಲಿಯಾ ಡಿಸೋಜಾ
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ
ಮುಂಬೈನಲ್ಲಿ ಟೆಸ್ಲಾ ಕಾರು ಚಲಾಯಿಸಿದ ಡಿಸಿಎಂ ಏಕನಾಥ್ ಶಿಂಧೆ
ಮುಂಬೈನಲ್ಲಿ ಟೆಸ್ಲಾ ಕಾರು ಚಲಾಯಿಸಿದ ಡಿಸಿಎಂ ಏಕನಾಥ್ ಶಿಂಧೆ