AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಠ್ಯಪುಸ್ತಕ ಪರಿಷ್ಕರಣೆ ವಿವಾದ: ಶಿಕ್ಷಣ ಸಚಿವ ಬಿಸಿ ನಾಗೇಶ್​ಗೆ ಸಿದ್ದರಾಮಯ್ಯರಿಂದ ಪ್ರಶ್ನೆಗಳ ಸುರಿಮಳೆ

ಪರಿಷ್ಕೃತ ಪಠ್ಯದಲ್ಲಿ ಬಸವಣ್ಣ, ಅಂಬೇಡ್ಕರ್, ಸಾವಿತ್ರಿಬಾಯಿ ಫುಲೆ, ನಾರಾಯಣ ಗುರು, ಕುವೆಂಪು ಸೇರಿದಂತೆ ಹಲವು ಮಹನೀಯರ ವ್ಯಕ್ತಿತ್ವವನ್ನು ಕಡೆಗಣಿಸಲಾಗಿದೆ.

ಪಠ್ಯಪುಸ್ತಕ ಪರಿಷ್ಕರಣೆ ವಿವಾದ: ಶಿಕ್ಷಣ ಸಚಿವ ಬಿಸಿ ನಾಗೇಶ್​ಗೆ ಸಿದ್ದರಾಮಯ್ಯರಿಂದ ಪ್ರಶ್ನೆಗಳ ಸುರಿಮಳೆ
ವಿಪಕ್ಷ ನಾಯಕ ಸಿದ್ದರಾಮಯ್ಯ
TV9 Web
| Edited By: sandhya thejappa|

Updated on:Jun 05, 2022 | 12:24 PM

Share

ಬೆಂಗಳೂರು: ರಾಜ್ಯದಲ್ಲಿ ಪಠ್ಯಪರಿಷ್ಕರಣೆ ವಿವಾದ ಹೆಚ್ಚಾಗುತ್ತಿದೆ. ಸಾಹಿತಿಗಳು, ವಿದ್ಯಾರ್ಥಿಗಳು ಸೇರಿ ವಿರೋಧ ಪಕ್ಷಗಳು ಕೂಡಾ ಸರ್ಕಾರದ (Karnataka Government) ವಿರುದ್ಧ ಧ್ವನಿ ಎತ್ತಿವೆ. ಇನ್ನು ಈ ಬಗ್ಗೆ ಟ್ವೀಟ್ ಮಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah), ಹಿಂದೂ ಭಾವನೆಗೆ ಧಕ್ಕೆಯಾಗಿದ್ದಕ್ಕೆ ಪಠ್ಯಪರಿಷ್ಕರಣೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಅಸಲಿ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಈ ಹಿಂದೂಗಳು ಯಾರು? ಎನ್ನುವುದನ್ನು ಬಹಿರಂಗ ಪಡಿಸಿ, ಯಾವುದರಿಂದ ಯಾರ ಭಾವನೆಗೆ ಧಕ್ಕೆಯಾಗಿದೆ ಎನ್ನುವುದನ್ನೂ ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪರಿಷ್ಕೃತ ಪಠ್ಯದಲ್ಲಿ ಬಸವಣ್ಣ, ಅಂಬೇಡ್ಕರ್, ಸಾವಿತ್ರಿಬಾಯಿ ಫುಲೆ, ನಾರಾಯಣ ಗುರು, ಕುವೆಂಪು ಸೇರಿದಂತೆ ಹಲವು ಮಹನೀಯರ ವ್ಯಕ್ತಿತ್ವವನ್ನು ಕಡೆಗಣಿಸಲಾಗಿದೆ. ಇವರನ್ನು ಪರಿಷ್ಕೃತ ಸಮಿತಿಯ ಕಿಡಿಗೇಡಿ ಅಧ್ಯಕ್ಷ ತುಚ್ಛೀಕರಿಸಿದ್ದಾನೆ ಎಂದು ಪ್ರತಿಭಟಿಸುತ್ತಿರುವವರು ಅನ್ಯಧರ್ಮೀಯರಲ್ಲ, ಹಿಂದೂಗಳೇ ಅಲ್ವಾ? ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿ ಬಿಸಿ ನಾಗೇಶ್ ಅವರಿಗೆ ಟ್ಯಾಗ್ ಮಾಡಿದ್ದಾರೆ.

ಇದನ್ನೂ ಓದಿ
Image
ಮಣ್ಣಿನ ಫಲವತ್ತತೆ ಕಾಪಾಡಲು ಈ 5 ವಿಷಯಗಳಿಗೆ ಒತ್ತು ನೀಡುವಂತೆ ಮೋದಿ ಕರೆ
Image
ಸ್ಟಾರ್​ ನಟನ ರೀತಿ ತಲೆ ಎತ್ತಿದೆ ಚಾರ್ಲಿ ಶ್ವಾನದ ಕಟೌಟ್​; ರಕ್ಷಿತ್​ ಶೆಟ್ಟಿ ಸಿನಿಮಾಗೆ ಭರ್ಜರಿ ಪ್ರಚಾರ
Image
ಆರ್​ಎಸ್​ಎಸ್ ​ಬಗ್ಗೆ ಮಾತನಾಡುವ ಕಾಂಗ್ರೆಸ್​​ನವರಿಗೆ ಬುದ್ಧಿಭ್ರಮಣೆ ಆಗಿದೆ: ಸಚಿವ ಭೈರತಿ ಬಸವರಾಜ್
Image
Deepak Chahar: ದೀಪಕ್ ಚಹರ್ ಮದುವೆಯಲ್ಲಿ ಪಾಕಿಸ್ತಾನ ಸ್ಟಾರ್ ಕ್ರಿಕೆಟಿಗ?: ವೈರಲ್ ಆಗುತ್ತಿದೆ ಫೋಟೋ

ಇದನ್ನೂ ಓದಿ: ಆರ್​ಎಸ್​ಎಸ್ ​ಬಗ್ಗೆ ಮಾತನಾಡುವ ಕಾಂಗ್ರೆಸ್​​ನವರಿಗೆ ಬುದ್ಧಿಭ್ರಮಣೆ ಆಗಿದೆ: ಸಚಿವ ಭೈರತಿ ಬಸವರಾಜ್

ಪಠ್ಯಪರಿಷ್ಕರಣಾ ಸಮಿತಿಯಲ್ಲಿ ದಲಿತ ಮತ್ತು ಹಿಂದುಳಿದ ಜಾತಿಗಳ ವಿದ್ವಾಂಸರಿಗೆ ಪ್ರಾತಿನಿಧ್ಯವೇ ನೀಡಿಲ್ಲ ಎಂದು ಟ್ವೋಟ್ ಮಾಡಿರುವ ಅವರು, ಶಿಕ್ಷಣ ಸಚಿವರು ಕಾಳಜಿ ತೋರುತ್ತಿರುವ ಹಿಂದೂಗಳ ವ್ಯಾಖ್ಯಾನದಲ್ಲಿ ಈ ಸಮುದಾಯಗಳು ಸೇರಿಕೊಳ್ಳುವುದಿಲ್ಲವೇ? ಈ ಕಾರಣಕ್ಕಾಗಿ ಅವರಿಗೆ ಪ್ರಾತಿನಿಧ್ಯ ನೀಡಿಲ್ಲವೇ? ಎಂದು ಪ್ರಶ್ನಿಸಿದ್ದಾರೆ. ಜೊತೆಗೆ ಈ ದೇಶದ ಬಡವರಲ್ಲಿ ಬಹುಸಂಖ್ಯೆಯಲ್ಲಿರುವುದು ಹಿಂದೂ ಧರ್ಮದ ದಲಿತರು ಮತ್ತು ಹಿಂದುಳಿದ ಜಾತಿಗಳು. ಸರ್ಕಾರಿ ಶಾಲೆಗಳಲ್ಲಿ ಈ ಮಕ್ಕಳ ಸಂಖ್ಯೆಯೇ ಹೆಚ್ಚು. ಬುದ್ಧ, ಬಸವ, ಅಂಬೇಡ್ಕರ್, ಸಾವಿತ್ರಿಬಾಯಿ ಫುಲೆ, ನಾರಾಯಣ ಗುರು, ಕುವೆಂಪು ಅವರಿಗೆ ಆಗಿರುವ ಅವಮಾನದಿಂದ ಈ ಮಕ್ಕಳ ಭಾವನೆಗೂ ಧಕ್ಕೆಯಾಗಿದೆಯಲ್ವಾ? ಎಂದು ಕೇಳಿದ್ದಾರೆ.

ಬಸವಣ್ಣ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹಿಂದೂ ಧರ್ಮವನ್ನು ತ್ಯಜಿಸಿದ ಕಾರಣಕ್ಕೆ ಅವರನ್ನು ನಿರ್ಲಕ್ಷಿಸಲಾಯಿತಾ? ಎಂದು ಪ್ರಶ್ನೆ ಮಾಡಿರುವ ಸಿದ್ದರಾಮಯ್ಯ, ನಾರಾಯಣ ಗುರು, ಪೆರಿಯಾರ್, ಕುವೆಂಪು ಅವರು ಹಿಂದೂ ಧರ್ಮದ ದೋಷಗಳನ್ನು ಎತ್ತಿ ತೋರಿಸಿದ್ದಕ್ಕಾಗಿ ನಿರ್ಲಕ್ಷ್ಯ ಮಾಡಲಾಯಿತಾ ಎಂದು ಟ್ವೀಟ್ ಮಾಡಿದ್ದಾರೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:23 pm, Sun, 5 June 22

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್