AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಸಿಎಂ ಆಗಿದ್ದ ಜಾರಿ ಮಾಡಿದ್ದ ಯೋಜನೆಗಳು ಈಗ ನಿಲ್ಲುತ್ತಿವೆ: ಸಿದ್ದರಾಮಯ್ಯ ವಿಷಾದ

Siddaramaiah: ಮುಖ್ಯಮಂತ್ರಿಯಾಗಿದ್ದಾಗ ತಿಂಗಳಿಗೆ 7 ಕೆಜಿ ಅಕ್ಕಿ ಕೊಡುತ್ತಿದ್ದೆ. ನಾನೇನು ನಮ್ಮ ಅಪ್ಪನ ಮನೆಯಿಂದ ದುಡ್ಡು ತಂದಿದ್ನಾ? ಈಗ ಯಡಿಯೂರಪ್ಪ ಎಲ್ಲಾ ಕಡಿಮೆ ಮಾಡಿದ್ದಾನೆ ಎಂದು ಏಕವಚನದಲ್ಲೇ ಮಾತನಾಡಿದರು.

ನಾನು ಸಿಎಂ ಆಗಿದ್ದ ಜಾರಿ ಮಾಡಿದ್ದ ಯೋಜನೆಗಳು ಈಗ ನಿಲ್ಲುತ್ತಿವೆ: ಸಿದ್ದರಾಮಯ್ಯ ವಿಷಾದ
ವಿಪಕ್ಷ ನಾಯಕ ಸಿದ್ದರಾಮಯ್ಯ
sandhya thejappa
|

Updated on:Feb 15, 2021 | 5:55 PM

Share

ಮಂಡ್ಯ: ಯಾವ ದೇವರೂ ದೇವಾಲಯ ಕಟ್ಟಿ ಎಂದು ಹೇಳಿಲ್ಲ. ಗುಡಿ ಕಟ್ಟಿ, ಮೂರ್ತಿ ಪ್ರತಿಷ್ಠಾಪಿಸಿ ಪೂಜೆ ಮಾಡುವವರು ನಾವು. ಬಹಳ ದೇವರುಗಳಿದ್ದಾರೆ ಎನ್ನುವುದು ನಮ್ಮ ಕಲ್ಪನೆ ಮಾತ್ರ. ವಾಸ್ತವವಾಗಿ ದೇವರು ಇರುವುದು ಒಬ್ಬನೇ. ಅವನನ್ನೇ ನಾವು ಹಲವು ಹೆಸರುಗಳಿಂದ ಕರೆಯುತ್ತೇವೆ. ಅದಕ್ಕೇ ದೇವನೊಬ್ಬ ನಾಮ ಹಲವು ಎನ್ನುವುದು. ಕಷ್ಟದಲ್ಲಿರುವವರಿಗೆ ಸಹಾಯ ಮಾಡುವವನೇ ದೇವರು. ಇನ್ನೊಬ್ಬರಿಗೆ ಕೆಡಕು ಬಯಸದಿರುವವನೇ ದೇವರು ಎಂದು ಕಾಂಗ್ರೆಸ್​ ಶಾಸಕ ಸಿದ್ದರಾಮಯ್ಯ ಹೇಳಿದರು. ಇದನ್ನು ಕೇಳಿದ ಜನರು ‘ಹೌದು ಹುಲಿಯಾ’ ಎಂದು ಕೂಗಿದ್ದಾರೆ.

ಮಂಡ್ಯದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಯಾವ ರೂಪದಲ್ಲಾದರೂ ದೇವರನ್ನ ಕಾಣಬಹುದು. ಎಲ್ಲವೂ ದೇವರಿಗೆ ಪ್ರಿಯವಾಗುತ್ತದೆ. ದೇವಾಲಯಕ್ಕೆ ಹೋಗಿ ನನಗೆ ಮತ್ತು ನನ್ನ ಹೆಂಡತಿಗೆ ಒಳಿತು ಮಾಡು ಎಂದರೆ ಮಾಡುವುದಿಲ್ಲ. ಸಮಾಜಕ್ಕೆ ಒಳಿತು ಮಾಡು ಎಂದರೆ ಮಾತ್ರ ದೇವರು ನಮಗೂ ಒಳ್ಳೆಯದು ಮಾಡುತ್ತಾನೆ. ಸಮಾಜ ನನಗೇನು ಮಾಡಿದೆ ಎನ್ನಬಾರದು, ಸಮಾಜಕ್ಕೆ ನಾನೇನು ಮಾಡಿದೆ ಎಂದು ಕೇಳಿಕೊಳ್ಳಬೇಕು ಎಂದರು.

ಷರತ್ತು ಹಾಕಿರಲಿಲ್ಲ ರೈತರ ಸಾಲಮನ್ನಾ ಮಾಡಲು ನಾನು ಷರತ್ತು ಹಾಕಿರಲಿಲ್ಲ. ಆದರೂ ನಾನು ಕಂಡೀಷನ್ ಹಾಕಿದ್ದೆ ಎಂದು ಹೇಳಿದ್ದಾರೆ ಎಂದು ಕುಮಾರಸ್ವಾಮಿ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು. ನಾನು ಸಿಎಂ ಆಗಿದ್ದಾಗ ನರೇಂದ್ರ ಸ್ವಾಮಿ ಶಾಸಕರಾಗಿದ್ದರು. ಮಳವಳ್ಳಿ ಸೇವೆ ಮಾಡಲು ಯಾವುದೇ ಅಭಿವೃದ್ಧಿ ಕಾಮಗಾರಿ ಮಂಜೂರು ಮಾಡುತ್ತೇನೆ ಎಂದು ನರೇಂದ್ರ ಸ್ವಾಮಿಗೆ ಹೇಳಿದ್ದೆ ಎಂದು ಸಿದ್ದರಾಮಯ್ಯ ನೆನಪಿಸಿಕೊಂಡರು.

ಹೊಟ್ಟೆ ಉರಿಯಿಂದ ಸೋಲಿಸಿದರು ನಾನು ಎರಡನೇ ಬಾರಿಗೆ ಸಿಎಂ ಆಗಬಾರದೆಂಬ ಕಾರಣಕ್ಕೆ ಹೊಟ್ಟೆ ಉರಿಯಿಂದ ನನ್ನನ್ನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಿಸಿದರು. ಮುಖ್ಯಮಂತ್ರಿಯಾದಾಗ 7 ಕೆಜಿ ಅಕ್ಕಿ ಕೊಡುತ್ತಿದ್ದೆ. ನಾನೇನು ನಮ್ಮ ಅಪ್ಪನ ಮನೆಯಿಂದ ದುಡ್ಡು ತಂದಿದ್ನಾ? ಈಗ ಯಡಿಯೂರಪ್ಪ ಎಲ್ಲಾ ಕಡಿಮೆ ಮಾಡಿದ್ದಾನೆ ಎಂದು ಏಕವಚನದಲ್ಲೇ ಮಾತನಾಡಿದರು.

ನಾನು ಸಿಎಂ ಆಗಿದ್ದಾಗ ತಂದಿದ್ದ ಯೋಜನೆಗಳನ್ನು ಯಡಿಯೂರಪ್ಪ ನಿಲ್ಲಿಸುತ್ತಿದ್ದಾರೆ.  ರೈತನ ಮಗ ಎಂದು ಹೇಳುವುದು. ಪ್ರಮಾಣ ವಚನ ಸ್ವೀಕರಿಸುವಾಗ ಹಸಿರು ಟವಲ್ ಹಾಕಿಕೊಂಡು ಟವಲ್​ಗೆ ಅವಮಾನ ಮಾಡುವುದು ಅವರ ರೀತಿ. ನಾನು ಸಿಎಂ ಆಗಿದ್ದಾಗ ಸಾಲ ಮನ್ನಾ ಮಾಡಿದ್ದೆ. ಯಡಿಯೂರಪ್ಪ ಮಾತ್ರ ಸಾಲ ಮನ್ನಾ ಸಾಧ್ಯವಿಲ್ಲ ಎನ್ನುತ್ತಾರೆ ಎಂದು ಹರಿಹಾಯ್ದುರು.

ಇದನ್ನೂ ಓದಿ: HD Kumaraswamy: ಸಿದ್ದರಾಮಯ್ಯಗೆ ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು

Published On - 5:51 pm, Mon, 15 February 21

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ