AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

JDS ಬೇಕು ಅಂತಲೇ ವೀಕ್ ಕ್ಯಾಂಡಿಡೇಟ್ ಹಾಕಿದ್ರು ಅನ್ಸುತ್ತದೆ -ಫಲಿತಾಂಶದ ಬಗ್ಗೆ ಸಿದ್ದರಾಮಯ್ಯ ವ್ಯಾಖ್ಯಾನ

ಬಾಗಲಕೋಟೆ: ರಾಜರಾಜೇಶ್ವರಿನಗರ, ಶಿರಾ ಕ್ಷೇತ್ರದಲ್ಲಿ ನಾವು ಸೋತಿದ್ದೇವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೋಲು ಗೆಲುವು ಸಾಮಾನ್ಯ. ಶಿರಾ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಗೆಲ್ಲುವ ನಿರೀಕ್ಷೆಯಿತ್ತು. ಜೊತೆಗೆ, R.R.ನಗರದಲ್ಲಿ ಒಳ್ಳೆಯ ಫೈಟ್​ ಕೊಡ್ತೇವೆಂದುಕೊಂಡಿದ್ದೆವು. ಆದರೆ, ಜನರ ತೀರ್ಪನ್ನು ನಾವು ಒಪ್ಪಿಕೊಂಡಿದ್ದೇವೆ ಎಂದು ಜಿಲ್ಲೆಯ ಬದಾಮಿಯಲ್ಲಿ ಸಿದ್ದರಾಮಯ್ಯ ಹೇಳಿದರು. ಆದರೆ, ಸರ್ಕಾರದಲ್ಲಿರುವವರು ಚುನಾವಣೆಯನ್ನು ನಿಷ್ಪಕ್ಷಪಾತವಾಗಿ, ಮುಕ್ತವಾಗಿ ನಡೆಸಬೇಕು. ಅದು ಅವರ ಜವಾಬ್ದಾರಿ. ನನಗೆ ಇರತಕ್ಕ ಮಾಹಿತಿ ಪ್ರಕಾರ, ಬಿಜೆಪಿ ಅಧಿಕಾರ ದುರುಪಯೋಗ ಮಾಡಿಕೊಂಡಿದೆ‌. ಎರಡು ಕಡೆ ಹಣದ ಹೊಳೆ ಹರಿಸಿದೆ‌‌. ಅಧಿಕಾರದ […]

JDS ಬೇಕು ಅಂತಲೇ ವೀಕ್ ಕ್ಯಾಂಡಿಡೇಟ್ ಹಾಕಿದ್ರು ಅನ್ಸುತ್ತದೆ -ಫಲಿತಾಂಶದ ಬಗ್ಗೆ ಸಿದ್ದರಾಮಯ್ಯ ವ್ಯಾಖ್ಯಾನ
KUSHAL V
| Edited By: |

Updated on: Nov 10, 2020 | 4:25 PM

Share

ಬಾಗಲಕೋಟೆ: ರಾಜರಾಜೇಶ್ವರಿನಗರ, ಶಿರಾ ಕ್ಷೇತ್ರದಲ್ಲಿ ನಾವು ಸೋತಿದ್ದೇವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೋಲು ಗೆಲುವು ಸಾಮಾನ್ಯ. ಶಿರಾ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಗೆಲ್ಲುವ ನಿರೀಕ್ಷೆಯಿತ್ತು. ಜೊತೆಗೆ, R.R.ನಗರದಲ್ಲಿ ಒಳ್ಳೆಯ ಫೈಟ್​ ಕೊಡ್ತೇವೆಂದುಕೊಂಡಿದ್ದೆವು. ಆದರೆ, ಜನರ ತೀರ್ಪನ್ನು ನಾವು ಒಪ್ಪಿಕೊಂಡಿದ್ದೇವೆ ಎಂದು ಜಿಲ್ಲೆಯ ಬದಾಮಿಯಲ್ಲಿ ಸಿದ್ದರಾಮಯ್ಯ ಹೇಳಿದರು.

ಆದರೆ, ಸರ್ಕಾರದಲ್ಲಿರುವವರು ಚುನಾವಣೆಯನ್ನು ನಿಷ್ಪಕ್ಷಪಾತವಾಗಿ, ಮುಕ್ತವಾಗಿ ನಡೆಸಬೇಕು. ಅದು ಅವರ ಜವಾಬ್ದಾರಿ. ನನಗೆ ಇರತಕ್ಕ ಮಾಹಿತಿ ಪ್ರಕಾರ, ಬಿಜೆಪಿ ಅಧಿಕಾರ ದುರುಪಯೋಗ ಮಾಡಿಕೊಂಡಿದೆ‌. ಎರಡು ಕಡೆ ಹಣದ ಹೊಳೆ ಹರಿಸಿದೆ‌‌. ಅಧಿಕಾರದ ದುರುಪಯೋಗ ಮತ್ತು ಹಣ ಕೆಲಸ ಮಾಡಿದೆ.‌ ಅದೇನೆ ಇರಲಿ ಬಿಜೆಪಿಗೆ ಜನ ಮತ ಕೊಟ್ಟಿರೋದು ತೀರ್ಪು. ತೀರ್ಪನ್ನು ನಾವು ಒಪ್ಪಿಕೊಂಡಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.

ಅಭ್ಯರ್ಥಿ ಆಯ್ಕೆಯಲ್ಲಿ ಯಾವುದೇ ಗೊಂದಲವಾಗಿಲ್ಲ. ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ ನಡೆದಿದೆ. ಆರ್.ಆರ್ ನಗರ ಅಭ್ಯರ್ಥಿ ಆಯ್ಕೆ ವಿಳಂಬವಾಯ್ತು. ವಿದ್ಯಾವಂತ ಹೆಣ್ಣುಮಗಳನ್ನ ಕಣಕ್ಕಿಳಿಸಿದ್ದೆವು‌‌. ಅಧಿಕಾರ, ಹಣ ಬೆಂಬಲದ ಸರ್ಕಾರ ಇರೋದ್ರಿಂದ ಅವರಿಗೆ ಅನುಕೂಲವಾಗಿವೆ. ಉಪಚುನಾವಣೆ ಆಗಿರೋದ್ರಿಂದ ಅವರಿಗೇನು ದೊಡ್ಡ ಶಕ್ತಿ ಬರೋದಿಲ್ಲ ಎಂದು ಹೇಳಿದರು.

ಜೊತೆಗೆ, ಆರ್.ಆರ್. ನಗರದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಹೊಂದಾಣಿಕೆ ಮಾಡಿಕೊಂಡಂತೆ ಕಾಣಿಸುತ್ತದೆ.‌‌ ವೀಕ್ ಕ್ಯಾಂಡಿಡೇಟ್ ಬೇಕು ಅಂತಲೇ ಹಾಕಿದ್ದಾರೆ ಎಂದು ನನಗೆ ಅನ್ಸುತ್ತದೆ ಎಂದು ಸಹ ಹೇಳಿದರು.

ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!