AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತಗಳನ್ನು ಹರಾಜಿಗೆ ಇಟ್ಟಿದ್ದಾರೆ; ವಿಪಕ್ಷ ನಾಯಕ ಸಿದ್ದರಾಮಯ್ಯ ವಿಷಾದ

Ssiddaramaiah: ವರ್ಷದಲ್ಲಿ ಕನಿಷ್ಠ 60 ದಿನ ಸದನ ನಡೆಯಲೇಬೇಕು. ಈ ಕುರಿತು ಕಾನೂನು ಕೂಡ ತಂದಿದ್ದೇವೆ. ಸದನ ನಡೆಯುವ ಬಗ್ಗೆ ಸರ್ಕಾರ ನಿರ್ಧರಿಸುವುದು ಬೇಡ. ಎಷ್ಟು ದಿನ ನಡೆಯಬೇಕೆಂದು ಸಭಾಧ್ಯಕ್ಷರು ನಿರ್ಧರಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಮತಗಳನ್ನು ಹರಾಜಿಗೆ ಇಟ್ಟಿದ್ದಾರೆ; ವಿಪಕ್ಷ ನಾಯಕ ಸಿದ್ದರಾಮಯ್ಯ ವಿಷಾದ
ವಿಪಕ್ಷ ನಾಯಕ ಸಿದ್ದರಾಮಯ್ಯ (ಸಂಗ್ರಹ ಚಿತ್ರ)
sandhya thejappa
sandhya thejappa| Edited By: |

Updated on: Feb 24, 2021 | 9:39 PM

Share

ಬೆಂಗಳೂರು: ಚುನಾವಣೆಗಳನ್ನು ಸರ್ಕಾರಗಳೇ ನಡೆಸಬೇಕು ಎಂದು ವಿಧಾನಸೌಧದಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅಭ್ಯರ್ಥಿಗಳು ಮತ ಕೇಳುವುದಕ್ಕೆ ಹೋಗಬಾರದು. ಮತ ಕೇಳಲು ಹೋದರೆ ವ್ಯಾಪಾರ ಶುರುವಾಗುತ್ತದೆ. ಮತಗಳನ್ನು ಹರಾಜಿಗೆ ಇಟ್ಟಿದ್ದಾರೆ ಎಂದು ಹೇಳಿದರು. 1983ರಲ್ಲಿ ಬೂತ್ ನೋಡಿಕೊಳ್ಳಲು 100 ರೂ. ಕೊಟ್ಟರೆ ತೆಗೆದುಕೊಳ್ಳುತ್ತಿರಲಿಲ್ಲ. ಹಣ ನೀಡಿ ಅವಮಾನ ಮಾಡಬೇಡಿ ಎನ್ನುತ್ತಿದ್ದರು. ಆಗ ಪ್ರತಿ ಹಳ್ಳಿಯಲ್ಲೂ ಚುನಾವಣಾ ಖರ್ಚಿಗೆ ಜನರೇ ಹಣವನ್ನು ನೀಡುತ್ತಿದ್ದರು. ಈಗ ಹಣ ಇಲ್ಲದಿದ್ದರೆ ಏಕೆ ಸ್ಪರ್ಧಿಸಿದ್ದೀರಿ ಅಂತಾರೆ. ಪಕ್ಷಾಂತರ ನಿಷೇಧ ಕಾಯ್ದೆ ಕಟ್ಟುನಿಟ್ಟಾಗಿ ಜಾರಿ ಆಗಬೇಕು ಎಂದರು.

ವರ್ಷದಲ್ಲಿ ಕನಿಷ್ಠ 60 ದಿನ ಸದನ ನಡೆಯಲೇಬೇಕು. ಈ ಕುರಿತು ಕಾನೂನು ಕೂಡ ತಂದಿದ್ದೇವೆ. ಸದನ ನಡೆಯುವ ಬಗ್ಗೆ ಸರ್ಕಾರ ನಿರ್ಧರಿಸುವುದು ಬೇಡ. ಎಷ್ಟು ದಿನ ನಡೆಯಬೇಕೆಂದು ಸಭಾಧ್ಯಕ್ಷರು ನಿರ್ಧರಿಸಬೇಕು. ಸಭಾಧ್ಯಕ್ಷರು ಮತ್ತು ಸಭಾಪತಿ ಗಟ್ಟಿ ನಿಲುವು ತೆಗೆದುಕೊಳ್ಳಬೇಕು ಎಂದು ತಿಳಿಸಿದರು.

ಮೌಲ್ಯ ಕುಸಿಯುತ್ತಿರುವುದಕ್ಕೆ ನಾವೇ ಹೊಣೆ. ಇದಕ್ಕೆ ಅವರಿವರ ಮೇಲೆ ಬೆಟ್ಟು ತೋರುವುದು ತಪ್ಪು. ಸಂವಿಧಾನದ ಆಶಯಗಳಿಗೆ ಬದ್ಧರಾಗಿ ಕೆಲಸ ಮಾಡದೆ ದಾರಿ ತಪ್ಪಿದರೆ ಮೌಲ್ಯ ಕುಸಿಯುತ್ತದೆ. ಈಗ ಆಗಿರುವುದೂ ಇದೆ. ಸಂವಿಧಾನದ ಮೂಲ ಆಶಯಗಳು ಗೊತ್ತಿಲ್ಲದವರು ಕಾನೂನು ಕಾನೂನು ರಚನೆ ಮಾಡುತ್ತಿದ್ದಾರೆ ಎಂದು ಜನಪ್ರತಿನಿಧಿಗಳ ಬಗ್ಗೆ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು. ಸ್ವಾತಂತ್ರ ಬಂದ ದಿನಗಳಲ್ಲಿ ಸಾಕ್ಷರತೆ ಶೇ 12 ರಷ್ಟಿತ್ತು. ಈಗ ಸಾಕ್ಷರತೆ ಶೇ 78ರಷ್ಷಿದೆ. ಆದರೆ ಅವತ್ತು ನಡೆಯುತ್ತಿದ್ದ ಕಲಾಪಕ್ಕೂ ಇವತ್ತಿನ ಕಲಾಪಕ್ಕೂ ಎಷ್ಟು ವ್ಯತ್ಯಾಸ ಇದೆ. ಸಂಸದೀಯ ಮೌಲ್ಯಗಳು ಕುಸಿಯುತ್ತಿರುವುದು ಸ್ಪಷ್ಟವಾಗಿದೆ ಎಂದು ಅಭಿಪ್ರಾಯಪಟ್ಟರು.

ದುಡ್ಡು ಇರುವವರು, ಜಾತಿ ಬಲ ಇರುವವರು, ಕ್ರಿಮಿನಲ್ಗಳು ಚುನಾವಣೆಯಲ್ಲಿ ಆರಿಸಿ ಬರುತ್ತಿದ್ದಾರೆ. ಹೀಗಾದರೆ ಸಂಸದೀಯ ಮೌಲ್ಯಗಳು ಕುಸಿಯದೆ ಮತ್ತೇನು ಆಗುತ್ತದೆ? ಚುನಾವಣೆ ವ್ಯವಸ್ಥೆ ಬದಲಾಗಬೇಕು. ಪಕ್ಷಗಳಲ್ಲಿ ಬದಲಾವಣೆ ಆಗಬೇಕು ಎಂದರು

ಮೈಸೂರು ನಗರ ಪಾಲಿಕೆ ಮೇಯರ್ ಚುನಾವಣೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ನಮ್ಮದೇನಿಲ್ಲ, ನಿರ್ಧರಿಸಲು ಸ್ಥಳೀಯ ನಾಯಕರಿಗೆ ಬಿಟ್ಟಿದ್ದೆವು. ಚುನಾವಣೆ ಬಗ್ಗೆ ನಿರ್ಧಾರ ಮಾಡಿದ್ದು ಸ್ಥಳೀಯ ನಾಯಕರು. ರಾಜ್ಯ ನಾಯಕರ ನಿರ್ಧಾರವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: PFI, SDPI ಸಂಘಟನೆಗಳನ್ನ ಬೆಳೆಸುತ್ತಿರುವುದೇ BJP; ಅವರದೇ ಸರ್ಕಾರವಿದೆ, ಬೇಕಿದ್ದರೆ ಬ್ಯಾನ್​ ಮಾಡಲಿ: ಸಿದ್ದರಾಮಯ್ಯ ಸವಾಲ್

ಇದನ್ನೂ ಓದಿ: ಮುಖ ತೋರಿಸಲಾಗದೇ ಪ್ರಧಾನಿ ಮೋದಿ ಗಡ್ಡ ಬಿಟ್ಟಿದ್ದಾರೆ; ಮಾಜಿ ಸಿಎಂ ಸಿದ್ದರಾಮಯ್ಯ ಕುಹಕ

Follow Us
sandhya thejappa
sandhya thejappa
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​