AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತಗಳನ್ನು ಹರಾಜಿಗೆ ಇಟ್ಟಿದ್ದಾರೆ; ವಿಪಕ್ಷ ನಾಯಕ ಸಿದ್ದರಾಮಯ್ಯ ವಿಷಾದ

Ssiddaramaiah: ವರ್ಷದಲ್ಲಿ ಕನಿಷ್ಠ 60 ದಿನ ಸದನ ನಡೆಯಲೇಬೇಕು. ಈ ಕುರಿತು ಕಾನೂನು ಕೂಡ ತಂದಿದ್ದೇವೆ. ಸದನ ನಡೆಯುವ ಬಗ್ಗೆ ಸರ್ಕಾರ ನಿರ್ಧರಿಸುವುದು ಬೇಡ. ಎಷ್ಟು ದಿನ ನಡೆಯಬೇಕೆಂದು ಸಭಾಧ್ಯಕ್ಷರು ನಿರ್ಧರಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಮತಗಳನ್ನು ಹರಾಜಿಗೆ ಇಟ್ಟಿದ್ದಾರೆ; ವಿಪಕ್ಷ ನಾಯಕ ಸಿದ್ದರಾಮಯ್ಯ ವಿಷಾದ
ವಿಪಕ್ಷ ನಾಯಕ ಸಿದ್ದರಾಮಯ್ಯ (ಸಂಗ್ರಹ ಚಿತ್ರ)
sandhya thejappa
| Edited By: |

Updated on: Feb 24, 2021 | 9:39 PM

Share

ಬೆಂಗಳೂರು: ಚುನಾವಣೆಗಳನ್ನು ಸರ್ಕಾರಗಳೇ ನಡೆಸಬೇಕು ಎಂದು ವಿಧಾನಸೌಧದಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅಭ್ಯರ್ಥಿಗಳು ಮತ ಕೇಳುವುದಕ್ಕೆ ಹೋಗಬಾರದು. ಮತ ಕೇಳಲು ಹೋದರೆ ವ್ಯಾಪಾರ ಶುರುವಾಗುತ್ತದೆ. ಮತಗಳನ್ನು ಹರಾಜಿಗೆ ಇಟ್ಟಿದ್ದಾರೆ ಎಂದು ಹೇಳಿದರು. 1983ರಲ್ಲಿ ಬೂತ್ ನೋಡಿಕೊಳ್ಳಲು 100 ರೂ. ಕೊಟ್ಟರೆ ತೆಗೆದುಕೊಳ್ಳುತ್ತಿರಲಿಲ್ಲ. ಹಣ ನೀಡಿ ಅವಮಾನ ಮಾಡಬೇಡಿ ಎನ್ನುತ್ತಿದ್ದರು. ಆಗ ಪ್ರತಿ ಹಳ್ಳಿಯಲ್ಲೂ ಚುನಾವಣಾ ಖರ್ಚಿಗೆ ಜನರೇ ಹಣವನ್ನು ನೀಡುತ್ತಿದ್ದರು. ಈಗ ಹಣ ಇಲ್ಲದಿದ್ದರೆ ಏಕೆ ಸ್ಪರ್ಧಿಸಿದ್ದೀರಿ ಅಂತಾರೆ. ಪಕ್ಷಾಂತರ ನಿಷೇಧ ಕಾಯ್ದೆ ಕಟ್ಟುನಿಟ್ಟಾಗಿ ಜಾರಿ ಆಗಬೇಕು ಎಂದರು.

ವರ್ಷದಲ್ಲಿ ಕನಿಷ್ಠ 60 ದಿನ ಸದನ ನಡೆಯಲೇಬೇಕು. ಈ ಕುರಿತು ಕಾನೂನು ಕೂಡ ತಂದಿದ್ದೇವೆ. ಸದನ ನಡೆಯುವ ಬಗ್ಗೆ ಸರ್ಕಾರ ನಿರ್ಧರಿಸುವುದು ಬೇಡ. ಎಷ್ಟು ದಿನ ನಡೆಯಬೇಕೆಂದು ಸಭಾಧ್ಯಕ್ಷರು ನಿರ್ಧರಿಸಬೇಕು. ಸಭಾಧ್ಯಕ್ಷರು ಮತ್ತು ಸಭಾಪತಿ ಗಟ್ಟಿ ನಿಲುವು ತೆಗೆದುಕೊಳ್ಳಬೇಕು ಎಂದು ತಿಳಿಸಿದರು.

ಮೌಲ್ಯ ಕುಸಿಯುತ್ತಿರುವುದಕ್ಕೆ ನಾವೇ ಹೊಣೆ. ಇದಕ್ಕೆ ಅವರಿವರ ಮೇಲೆ ಬೆಟ್ಟು ತೋರುವುದು ತಪ್ಪು. ಸಂವಿಧಾನದ ಆಶಯಗಳಿಗೆ ಬದ್ಧರಾಗಿ ಕೆಲಸ ಮಾಡದೆ ದಾರಿ ತಪ್ಪಿದರೆ ಮೌಲ್ಯ ಕುಸಿಯುತ್ತದೆ. ಈಗ ಆಗಿರುವುದೂ ಇದೆ. ಸಂವಿಧಾನದ ಮೂಲ ಆಶಯಗಳು ಗೊತ್ತಿಲ್ಲದವರು ಕಾನೂನು ಕಾನೂನು ರಚನೆ ಮಾಡುತ್ತಿದ್ದಾರೆ ಎಂದು ಜನಪ್ರತಿನಿಧಿಗಳ ಬಗ್ಗೆ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು. ಸ್ವಾತಂತ್ರ ಬಂದ ದಿನಗಳಲ್ಲಿ ಸಾಕ್ಷರತೆ ಶೇ 12 ರಷ್ಟಿತ್ತು. ಈಗ ಸಾಕ್ಷರತೆ ಶೇ 78ರಷ್ಷಿದೆ. ಆದರೆ ಅವತ್ತು ನಡೆಯುತ್ತಿದ್ದ ಕಲಾಪಕ್ಕೂ ಇವತ್ತಿನ ಕಲಾಪಕ್ಕೂ ಎಷ್ಟು ವ್ಯತ್ಯಾಸ ಇದೆ. ಸಂಸದೀಯ ಮೌಲ್ಯಗಳು ಕುಸಿಯುತ್ತಿರುವುದು ಸ್ಪಷ್ಟವಾಗಿದೆ ಎಂದು ಅಭಿಪ್ರಾಯಪಟ್ಟರು.

ದುಡ್ಡು ಇರುವವರು, ಜಾತಿ ಬಲ ಇರುವವರು, ಕ್ರಿಮಿನಲ್ಗಳು ಚುನಾವಣೆಯಲ್ಲಿ ಆರಿಸಿ ಬರುತ್ತಿದ್ದಾರೆ. ಹೀಗಾದರೆ ಸಂಸದೀಯ ಮೌಲ್ಯಗಳು ಕುಸಿಯದೆ ಮತ್ತೇನು ಆಗುತ್ತದೆ? ಚುನಾವಣೆ ವ್ಯವಸ್ಥೆ ಬದಲಾಗಬೇಕು. ಪಕ್ಷಗಳಲ್ಲಿ ಬದಲಾವಣೆ ಆಗಬೇಕು ಎಂದರು

ಮೈಸೂರು ನಗರ ಪಾಲಿಕೆ ಮೇಯರ್ ಚುನಾವಣೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ನಮ್ಮದೇನಿಲ್ಲ, ನಿರ್ಧರಿಸಲು ಸ್ಥಳೀಯ ನಾಯಕರಿಗೆ ಬಿಟ್ಟಿದ್ದೆವು. ಚುನಾವಣೆ ಬಗ್ಗೆ ನಿರ್ಧಾರ ಮಾಡಿದ್ದು ಸ್ಥಳೀಯ ನಾಯಕರು. ರಾಜ್ಯ ನಾಯಕರ ನಿರ್ಧಾರವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: PFI, SDPI ಸಂಘಟನೆಗಳನ್ನ ಬೆಳೆಸುತ್ತಿರುವುದೇ BJP; ಅವರದೇ ಸರ್ಕಾರವಿದೆ, ಬೇಕಿದ್ದರೆ ಬ್ಯಾನ್​ ಮಾಡಲಿ: ಸಿದ್ದರಾಮಯ್ಯ ಸವಾಲ್

ಇದನ್ನೂ ಓದಿ: ಮುಖ ತೋರಿಸಲಾಗದೇ ಪ್ರಧಾನಿ ಮೋದಿ ಗಡ್ಡ ಬಿಟ್ಟಿದ್ದಾರೆ; ಮಾಜಿ ಸಿಎಂ ಸಿದ್ದರಾಮಯ್ಯ ಕುಹಕ

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ