AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಪರಿಸ್ಥಿತಿ ತುಘಲಕ್ ರೀತಿ ಆಗಿದೆ; ಬಳ್ಳಾರಿಯಲ್ಲಿ ಸಚಿವ ಶ್ರೀರಾಮುಲು ಹೇಳಿಕೆ

ಸಿದ್ದರಾಮಯ್ಯನವರ ಆತ್ಮವಿಶ್ವಾಸ ಇತ್ತೀಚಿಗೆ ಕಡಿಮೆ ಆಗಿದೆ. ಅವರು ಖಿನ್ನತೆಯಲ್ಲಿ ಇದ್ದಂತೆ ಕಾಣುತ್ತೆ. ಅವರ ಪಕ್ಷದಲ್ಲಿ ಎಕಾಂಗಿ ಆಗಿದ್ದಾರೆ. ಪಕ್ಷ ಅವರನ್ನ ದೂರು ತಳುತ್ತಿದೆ ಎನ್ನುವ ಖಿನ್ನತೆಯಲ್ಲಿ ಇದ್ದಾರೆ. ಕಾಂಗ್ರೆಸ್ ಪಕ್ಷದ ವ್ಯವಸ್ಥೆ 2, 3 ತುಂಡು ಆಗಿದೆ.

ಸಿದ್ದರಾಮಯ್ಯ ಪರಿಸ್ಥಿತಿ ತುಘಲಕ್ ರೀತಿ ಆಗಿದೆ; ಬಳ್ಳಾರಿಯಲ್ಲಿ ಸಚಿವ ಶ್ರೀರಾಮುಲು ಹೇಳಿಕೆ
ಸಚಿವ ಶ್ರೀರಾಮುಲು
TV9 Web
| Edited By: |

Updated on: Mar 27, 2022 | 10:43 AM

Share

ಬಳ್ಳಾರಿ: ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಪರಿಸ್ಥಿತಿ ತುಘಲಕ್ ರೀತಿ ಆಗಿದೆ ಅಂತ ಬಳ್ಳಾರಿಯಲ್ಲಿ ಉಸ್ತುವಾರಿ ಸಚಿವ ಶ್ರೀರಾಮುಲು (Sri Ramulu) ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಪರಿಸ್ಥಿತಿ ನೆನೆಸಿಕೊಂಡರೆ ನೋವಾಗುತ್ತೆ. ಅವರ ನಾಲಿಗೆ, ಅವರ ಮಾತುಗಳ ಮೇಲೆ ಹಿಡಿತ ಇಲ್ಲ. ಸಿದ್ದರಾಮಯ್ಯ ಬುದ್ಧಿವಂತರು ಅಂದುಕೊಂಡಿದ್ದಾರೆ. ಸಿದ್ದರಾಮಯ್ಯ ಅಹಂಕಾರದಿಂದ ಹೇಳಿಕೆ ನೀಡುತ್ತಿದ್ದಾರೆ. ಸಿದ್ದರಾಮಯ್ಯ ಗುರುಪರಂಪರೆಗೆ ಅವಮಾನ ಮಾಡಿದ್ದಾರೆ. ಗುರುಪರಂಪರೆ ಅಷ್ಟೇ ಅಲ್ಲ ಹನುಮನ ಬಗ್ಗೆ ಸಹ ಹೇಳಿಕೆ ನೀಡಿದ್ದರು. ನಂತರ ಅವರು ಹೇಳಿಕೆ ತಿರುಚುವ ಪ್ರಯತ್ನ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಕ್ಷಮೆಯಾಚಿಸಬೇಕು ಅಂತ ಶ್ರೀರಾಮುಲು ಆಗ್ರಹಿಸಿದ್ದಾರೆ.

ಸಿದ್ದರಾಮಯ್ಯನವರ ಆತ್ಮವಿಶ್ವಾಸ ಇತ್ತೀಚಿಗೆ ಕಡಿಮೆ ಆಗಿದೆ. ಅವರು ಖಿನ್ನತೆಯಲ್ಲಿ ಇದ್ದಂತೆ ಕಾಣುತ್ತೆ. ಅವರ ಪಕ್ಷದಲ್ಲಿ ಎಕಾಂಗಿ ಆಗಿದ್ದಾರೆ. ಪಕ್ಷ ಅವರನ್ನ ದೂರು ತಳುತ್ತಿದೆ ಎನ್ನುವ ಖಿನ್ನತೆಯಲ್ಲಿ ಇದ್ದಾರೆ. ಕಾಂಗ್ರೆಸ್ ಪಕ್ಷದ ವ್ಯವಸ್ಥೆ 2, 3 ತುಂಡು ಆಗಿದೆ. ಪಕ್ಷದ ವ್ಯವಸ್ಥೆ ವಿರುದ್ದ ಅವರ ಶಾಸಕರು ಒಂಟಿಯಾಗಿದ್ದಾರೆ. ಸಿದ್ದರಾಮಯ್ಯ ಕಡೆ ಹೋದರೆ ಡಿಕೆ ಶಿವಕುಮಾರ್ಗೆ ಸಿಟ್ಟು. ಡಿಕೆಶಿಗೆ ಕಡೆ ಹೋದರೆ ಸಿದ್ದರಾಮಯ್ಯಗೆ ಸಿಟ್ಟು ಬರುತ್ತೆ ಅಂತ ಸಚಿವರು ಹೇಳಿದರು.

ನಮ್ಮ ಪಕ್ಷದ ಜೊತೆ ಕಾಂಗ್ರೆಸ್ ಪಕ್ಷದ ಹಲವು ಶಾಸಕರು ಸಂಪರ್ಕದಲ್ಲಿದ್ದಾರೆ. ಬಿಜೆಪಿಯಿಂದ ಸ್ಪರ್ಧೆ ಮಾಡಿದರೆ ಗೆಲುವು ಖಚಿತ ಅಂದುಕೊಂಡಿದ್ದಾರೆ. ಹೈಕಮಾಂಡ್ ಗಮನಕ್ಕೂ ಈ ವಿಚಾರ ತರಲಾಗಿದೆ ಎಂದು ಮಾತನಾಡಿದ ರಾಮುಲು, ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ಮಾಡಿ ಸಂಪುಟ ವಿಸ್ತರಣೆ ಮಾಡಲಾಗುತ್ತದೆ. ನಾನು ಯಾರ ವಿರುದ್ಧವಾದರೂ ಸ್ಪರ್ಧೆ ಮಾಡಲು ಸಿದ್ಧ. ನನ್ನ ಸ್ಪರ್ಧೆ ಬಗ್ಗೆ ಹೈಕಮಾಂಡ್ ಜತೆ ಚರ್ಚೆ ಮಾಡಬೇಕಿದೆ ಎಂದರು.

ಇದನ್ನೂ ಓದಿ

ಉಕ್ರೇನ್​ನ ಮತ್ತೊಂದು ನಗರದ ಮೇಲೆ ರಷ್ಯಾ ಬಾಂಬ್ ದಾಳಿ: ಹೋರಾಟಕ್ಕೆ ಸಿದ್ಧ ಎಂದ ಅಮೆರಿಕ, ಸಂಘರ್ಷಕ್ಕೆ ಮತ್ತೊಂದು ತಿರುವು

ಕೆಸರಿನಲ್ಲಿ ಸಿಲುಕಿಕೊಂಡು ನರಳಾಡುತ್ತಿದ್ದ ಆನೆಯನ್ನು ರಕ್ಷಿಸಿದ ತಮಿಳುನಾಡು ಅರಣ್ಯ ಇಲಾಖೆ ಸಿಬ್ಬಂದಿ; ಇಲ್ಲಿದೆ ವೈರಲ್ ವಿಡಿಯೋ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್