AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಯಾವತ್ತೂ ವಿಲನ್ ಆಗಿಲ್ಲ.. ಹೀರೋ ಪಾತ್ರವನ್ನೇ ಮಾಡಿದ್ದೀನಿ -HDKಗೆ ಸಿದ್ದು ಟಾಂಗ್​

ಕಲಬುರಗಿ: ತಾಜ್‌ ವೆಸ್ಟೆಂಡ್‌ನಲ್ಲಿ ಕುಳಿತು ಸರ್ಕಾರ ನಡೆಸಲು ಆಗುತ್ತಾ? ನನ್ನ ಹೇಳಿಕೆಯಿಂದ ಕುಮಾರಸ್ವಾಮಿಗೆ ಮುಜುಗರ ಆಗುತ್ತೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಜಿ ಸಿಎಂ ಕುಮಾರಸ್ವಾಮಿಗೆ ಟಾಂಗ್​ ಕೊಟ್ಟಿದ್ದಾರೆ. ನಾನು ಯಾವತ್ತೂ ವಿಲನ್ ಆಗಿಲ್ಲ. ನಾನು ಹೀರೋ ಪಾತ್ರವನ್ನೇ ಮಾಡಿದ್ದೇನೆ ಎಂದು ಸಹ ಹೇಳಿದರು. ‘ನೆರೆ ಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ’ ರಾಜ್ಯದ 23 ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ರೈತರಿಗೆ ಸಂಕಷ್ಟ ಎದುರಾಗಿದೆ. ರೈತರು, ಜನ ಸಂಕಷ್ಟದಲ್ಲಿದ್ದರೂ ಸಚಿವರು ಇತ್ತ ತಲೆಹಾಕಿಲ್ಲ. ನೆರೆ ಸ್ಥಿತಿ ನಿಭಾಯಿಸುವಲ್ಲಿ […]

ನಾನು ಯಾವತ್ತೂ ವಿಲನ್ ಆಗಿಲ್ಲ.. ಹೀರೋ ಪಾತ್ರವನ್ನೇ ಮಾಡಿದ್ದೀನಿ -HDKಗೆ ಸಿದ್ದು ಟಾಂಗ್​
KUSHAL V
|

Updated on: Oct 26, 2020 | 12:44 PM

Share

ಕಲಬುರಗಿ: ತಾಜ್‌ ವೆಸ್ಟೆಂಡ್‌ನಲ್ಲಿ ಕುಳಿತು ಸರ್ಕಾರ ನಡೆಸಲು ಆಗುತ್ತಾ? ನನ್ನ ಹೇಳಿಕೆಯಿಂದ ಕುಮಾರಸ್ವಾಮಿಗೆ ಮುಜುಗರ ಆಗುತ್ತೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಜಿ ಸಿಎಂ ಕುಮಾರಸ್ವಾಮಿಗೆ ಟಾಂಗ್​ ಕೊಟ್ಟಿದ್ದಾರೆ. ನಾನು ಯಾವತ್ತೂ ವಿಲನ್ ಆಗಿಲ್ಲ. ನಾನು ಹೀರೋ ಪಾತ್ರವನ್ನೇ ಮಾಡಿದ್ದೇನೆ ಎಂದು ಸಹ ಹೇಳಿದರು.

‘ನೆರೆ ಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ’ ರಾಜ್ಯದ 23 ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ರೈತರಿಗೆ ಸಂಕಷ್ಟ ಎದುರಾಗಿದೆ. ರೈತರು, ಜನ ಸಂಕಷ್ಟದಲ್ಲಿದ್ದರೂ ಸಚಿವರು ಇತ್ತ ತಲೆಹಾಕಿಲ್ಲ. ನೆರೆ ಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಇಂಥ ಸಂದರ್ಭದಲ್ಲಿ ಉಸ್ತುವಾರಿ ಸಚಿವರು ಇಲ್ಲೇ ಇರಬೇಕು. ಜಿಲ್ಲೆಗಳಲ್ಲಿಯೇ ಬೀಡುಬಿಟ್ಟು ಪರಿಹಾರ ಕೆಲಸ ಮಾಡಿಸಬೇಕು. ಆದ್ರೆ ಕಲಬುರಗಿ ಉಸ್ತುವಾರಿ ಸಚಿವರು ಈ ಕಡೆ ತಲೆ ಹಾಕಿಲ್ಲ. ಮೇ ತಿಂಗಳಿನಿಂದ ಜಿಲ್ಲೆಯ ಕಡೆ ಅವರು ತಲೆಯೇ ಹಾಕಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕಾರಜೋಳ ವಿರುದ್ಧ ಕಿಡಿಕಾರಿದರು.

ಕಂದಾಯ ಸಚಿವರು ಪಿಕ್‌ನಿಕ್‌ಗೆ ಬಂದಂತೆ ಬಂದುಹೋಗಿದ್ದಾರೆ. ಸಿಎಂ ಬಿಎಸ್‌ವೈ ಮೇಲೆಯೇ ಹಾರಾಟ ಮಾಡಿ ಹೋಗಿದ್ದಾರೆ. ಯಡಿಯೂರಪ್ಪಗೆ ಮೇಲಿಂದ ಅದು ಏನು ಕಾಣಿಸ್ತೋ ಗೊತ್ತಿಲ್ಲ. ಒಬ್ಬನೇ ಒಬ್ಬ ನೆರೆ ಸಂತ್ರಸ್ತನ ಕಷ್ಟವನ್ನು ಸಿಎಂ BSY ಆಲಿಸಿಲ್ಲ. ಸಿಎಂ ಬಿಎಸ್‌ವೈ, ಮಂತ್ರಿಗಳು ಈ ರೀತಿ ನಡೆದುಕೊಳ್ಳುತ್ತಿದ್ದರೆ ಅಧಿಕಾರಿಗಳಿಗೆ ಲಂಗು ಲಗಾಮಿಲ್ಲದಂತಾಗಿದೆ ಎದಂದು ಸಿದ್ದರಾಮಯ್ಯ ಹೇಳಿದರು. ಕೇಂದ್ರ, ರಾಜ್ಯ ಸರ್ಕಾರಗಳು ನಯಾಪೈಸೆ ಪರಿಹಾರ ನೀಡಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

Follow Us
KUSHAL V
KUSHAL V
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ