AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಯಾವತ್ತೂ ವಿಲನ್ ಆಗಿಲ್ಲ.. ಹೀರೋ ಪಾತ್ರವನ್ನೇ ಮಾಡಿದ್ದೀನಿ -HDKಗೆ ಸಿದ್ದು ಟಾಂಗ್​

ಕಲಬುರಗಿ: ತಾಜ್‌ ವೆಸ್ಟೆಂಡ್‌ನಲ್ಲಿ ಕುಳಿತು ಸರ್ಕಾರ ನಡೆಸಲು ಆಗುತ್ತಾ? ನನ್ನ ಹೇಳಿಕೆಯಿಂದ ಕುಮಾರಸ್ವಾಮಿಗೆ ಮುಜುಗರ ಆಗುತ್ತೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಜಿ ಸಿಎಂ ಕುಮಾರಸ್ವಾಮಿಗೆ ಟಾಂಗ್​ ಕೊಟ್ಟಿದ್ದಾರೆ. ನಾನು ಯಾವತ್ತೂ ವಿಲನ್ ಆಗಿಲ್ಲ. ನಾನು ಹೀರೋ ಪಾತ್ರವನ್ನೇ ಮಾಡಿದ್ದೇನೆ ಎಂದು ಸಹ ಹೇಳಿದರು. ‘ನೆರೆ ಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ’ ರಾಜ್ಯದ 23 ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ರೈತರಿಗೆ ಸಂಕಷ್ಟ ಎದುರಾಗಿದೆ. ರೈತರು, ಜನ ಸಂಕಷ್ಟದಲ್ಲಿದ್ದರೂ ಸಚಿವರು ಇತ್ತ ತಲೆಹಾಕಿಲ್ಲ. ನೆರೆ ಸ್ಥಿತಿ ನಿಭಾಯಿಸುವಲ್ಲಿ […]

ನಾನು ಯಾವತ್ತೂ ವಿಲನ್ ಆಗಿಲ್ಲ.. ಹೀರೋ ಪಾತ್ರವನ್ನೇ ಮಾಡಿದ್ದೀನಿ -HDKಗೆ ಸಿದ್ದು ಟಾಂಗ್​
KUSHAL V
|

Updated on: Oct 26, 2020 | 12:44 PM

Share

ಕಲಬುರಗಿ: ತಾಜ್‌ ವೆಸ್ಟೆಂಡ್‌ನಲ್ಲಿ ಕುಳಿತು ಸರ್ಕಾರ ನಡೆಸಲು ಆಗುತ್ತಾ? ನನ್ನ ಹೇಳಿಕೆಯಿಂದ ಕುಮಾರಸ್ವಾಮಿಗೆ ಮುಜುಗರ ಆಗುತ್ತೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಜಿ ಸಿಎಂ ಕುಮಾರಸ್ವಾಮಿಗೆ ಟಾಂಗ್​ ಕೊಟ್ಟಿದ್ದಾರೆ. ನಾನು ಯಾವತ್ತೂ ವಿಲನ್ ಆಗಿಲ್ಲ. ನಾನು ಹೀರೋ ಪಾತ್ರವನ್ನೇ ಮಾಡಿದ್ದೇನೆ ಎಂದು ಸಹ ಹೇಳಿದರು.

‘ನೆರೆ ಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ’ ರಾಜ್ಯದ 23 ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ರೈತರಿಗೆ ಸಂಕಷ್ಟ ಎದುರಾಗಿದೆ. ರೈತರು, ಜನ ಸಂಕಷ್ಟದಲ್ಲಿದ್ದರೂ ಸಚಿವರು ಇತ್ತ ತಲೆಹಾಕಿಲ್ಲ. ನೆರೆ ಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಇಂಥ ಸಂದರ್ಭದಲ್ಲಿ ಉಸ್ತುವಾರಿ ಸಚಿವರು ಇಲ್ಲೇ ಇರಬೇಕು. ಜಿಲ್ಲೆಗಳಲ್ಲಿಯೇ ಬೀಡುಬಿಟ್ಟು ಪರಿಹಾರ ಕೆಲಸ ಮಾಡಿಸಬೇಕು. ಆದ್ರೆ ಕಲಬುರಗಿ ಉಸ್ತುವಾರಿ ಸಚಿವರು ಈ ಕಡೆ ತಲೆ ಹಾಕಿಲ್ಲ. ಮೇ ತಿಂಗಳಿನಿಂದ ಜಿಲ್ಲೆಯ ಕಡೆ ಅವರು ತಲೆಯೇ ಹಾಕಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕಾರಜೋಳ ವಿರುದ್ಧ ಕಿಡಿಕಾರಿದರು.

ಕಂದಾಯ ಸಚಿವರು ಪಿಕ್‌ನಿಕ್‌ಗೆ ಬಂದಂತೆ ಬಂದುಹೋಗಿದ್ದಾರೆ. ಸಿಎಂ ಬಿಎಸ್‌ವೈ ಮೇಲೆಯೇ ಹಾರಾಟ ಮಾಡಿ ಹೋಗಿದ್ದಾರೆ. ಯಡಿಯೂರಪ್ಪಗೆ ಮೇಲಿಂದ ಅದು ಏನು ಕಾಣಿಸ್ತೋ ಗೊತ್ತಿಲ್ಲ. ಒಬ್ಬನೇ ಒಬ್ಬ ನೆರೆ ಸಂತ್ರಸ್ತನ ಕಷ್ಟವನ್ನು ಸಿಎಂ BSY ಆಲಿಸಿಲ್ಲ. ಸಿಎಂ ಬಿಎಸ್‌ವೈ, ಮಂತ್ರಿಗಳು ಈ ರೀತಿ ನಡೆದುಕೊಳ್ಳುತ್ತಿದ್ದರೆ ಅಧಿಕಾರಿಗಳಿಗೆ ಲಂಗು ಲಗಾಮಿಲ್ಲದಂತಾಗಿದೆ ಎದಂದು ಸಿದ್ದರಾಮಯ್ಯ ಹೇಳಿದರು. ಕೇಂದ್ರ, ರಾಜ್ಯ ಸರ್ಕಾರಗಳು ನಯಾಪೈಸೆ ಪರಿಹಾರ ನೀಡಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ